ಆ್ಯಪ್ನಗರ

Karnataka Polls: ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಜೊತೆ 4 ಜನರಿಗಷ್ಟೇ ಅವಕಾಶ

ಧಾರವಾಡ-ಹಬ್ಬಳ್ಳಿ ಜಿಲ್ಲೆಯಲ್ಲಿ ಏಪ್ರಿಲ್ 13 ರಿಂದ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತಿದ್ದು, ಆಯಾ ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ನಾಮಪತ್ರ ಸಲ್ಲಿಸಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Vijaya Karnataka Web 13 Apr 2023, 8:48 am

ಹೈಲೈಟ್ಸ್‌:

  • ಧಾರವಾಡ-ಹಬ್ಬಳ್ಳಿ ಜಿಲ್ಲೆಯ ಏಳು ಕಡೆ ನಾಮಪತ್ರ ಸ್ವೀಕಾರ.
  • ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ.
  • ನಾಮಪತ್ರ ಸಲ್ಲಿಸಲು ಬರುವ ಅಭ್ಯರ್ಥಿಗಳು 4 ಜನರನ್ನು ಮಾತ್ರ ಕರೆದುಕೊಂಡು ಬರುವಂತೆ ಸೂಚನೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಧಾರವಾಡ: ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಏಪ್ರಿಲ್‌ 13ರಿಂದ ಆರಂಭಗೊಳ್ಳಲಿದೆ. ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವವರ ನಾಮಪತ್ರಗಳನ್ನು 7 ಕಡೆ ಸ್ವೀಕರಿಸಲಾಗುತ್ತಿದೆ. ಅಂದರೆ ಆಯಾ ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ನಾಮಪತ್ರ ಸಲ್ಲಿಸಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಬರುವ ಅಭ್ಯರ್ಥಿಗಳು ತಮ್ಮೊಂದಿಗೆ 4 ಜನರನ್ನು ಮಾತ್ರ ಕರೆದುಕೊಂಡು ಬರಬೇಕು. ಮೆರವಣಿಗೆ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದರೆ ಪ್ರಕರಣ ದಾಖಲಿಸಲಾಗುವುದು ಎಂದರು.

ಜಿಲ್ಲೆಯಲ್ಲಿ 15 ಲಕ್ಷ ಮತದಾರರು ಇದ್ದಾರೆ. ಏಪ್ರಿಲ್ 10ರ ವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. 2018ರಲ್ಲಿ 16,902 ಯುವ ಮತದಾರರು ಸೇರ್ಪಡೆಗೊಂಡಿದ್ದರೆ ಈಗ 30,056 ಯುವ ಮತದಾರರು ನೋಂದಣಿ ಮಾಡಿದ್ದಾರೆ. ಚುನಾವಣೆಗೆ ಒಟ್ಟು 1,636 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇವುಗಳಲ್ಲಿ216 ಮತಗಟ್ಟೆಗಳು ಸೂಕ್ಷ್ಮ ಹಾಗೂ 162 ಮತಗಟ್ಟೆಗಳು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. 1,500ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಇಲ್ಲಿ 13 ಮತಗಟ್ಟೆಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಲು ಪ್ರಸ್ತಾವ ಕಳಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿರುವ ಪ್ರತಿ ಮತಕ್ಷೇತ್ರಕ್ಕೆ ತಲಾ 5 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಧಾರವಾಡ ಪೇಢಾ, ನವಲಗುಂದದ ಜಮಖಾನ ಹೀಗೆ ನಾನಾ ಹೆಸರಿನಲ್ಲಿ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಚಿಂತನೆ ನಡೆದಿದೆ ಎಂದು ತಿಳಿಸಿದರು.

ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ಅಳವಡಿಸಿದ 6,174 ಗೋಡೆ ಬರಹ, 9,145 ಪೋಸ್ಟರ್‌, 3,231 ಬ್ಯಾನರ್‌ಗಳು ಸೇರಿ ಒಟ್ಟು 10,188 ಪ್ರಕಟಣೆಗಳನ್ನು ತೆರವುಗೊಳಿಸಲಾಗಿದೆ. 18.92 ಲಕ್ಷ ರೂ. ನಗದು, 4.90 ಲಕ್ಷ ರೂ. ಮೌಲ್ಯದ 1,214 ಲೀ. ಮದ್ಯ, 6.18 ಲಕ್ಷ ರೂ. ಮೌಲ್ಯದ 23.70 ಕೆ.ಜಿ. ಮಾದಕ ದ್ರವ್ಯ, 12 ಸಾವಿರ ಸೀರೆ, 4,185 ಕೆ.ಜಿ. ಹಾಲಿನ ಕ್ಯಾನ್‌, 190 ಕ್ವಿಂಟಲ್‌ ಅಕ್ಕಿ, 44.70 ಲಕ್ಷ ರೂ. ಮೌಲ್ಯದ ಅತ್ಯಮೂಲ್ಯ ಲೋಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಚುನಾವಣಾ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ನಾಮಪತ್ರ ಸಲ್ಲಿಸುವ ಸ್ಥಳ
ನವಲಗುಂದ: ತಹಸೀಲ್ದಾರ್‌ ಕಚೇರಿ
ಕುಂದಗೋಳ: ತಹಸೀಲ್ದಾರ್‌ ಕಚೇರಿ
ಕಲಘಟಗಿ: ತಹಸೀಲ್ದಾರ್‌ ಕಚೇರಿ
ಧಾರವಾಡ ಗ್ರಾಮೀಣ: ಉಪವಿಭಾಗಾಧಿಕಾರಿ ಕಚೇರಿ ಧಾರವಾಡ
ಹುಬ್ಬಳ್ಳಿ-ಧಾರವಾಡ ಪೂರ್ವ: ತಹಸೀಲ್ದಾರ್‌ ಕಚೇರಿ, ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌: ಪಾಲಿಕೆ ಆಯುಕ್ತರ ಕಚೇರಿ, ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ಪಶ್ಚಿಮ: ಪಾಲಿಕೆ ಆಯುಕ್ತ ಕಚೇರಿ, ಧಾರವಾಡ

ಜಿಲ್ಲೆಯ ಮತದಾರರ ವಿವರ

ಪುರುಷರು;7,57,522
ಮಹಿಳೆಯರು;7,49,807
ಇತರೆ;85
ಒಟ್ಟು;15,07,41

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ