ಆ್ಯಪ್ನಗರ

ಮಹಿಳೆಯರಿಂದ ಅಯ್ಯಪ್ಪ ದರ್ಶನ: ಕೋರ್ಟ್‌ ಆದೇಶ ಪಾಲನೆ ಒಳ್ಳೆಯ ಕ್ರಮ ಎಂದ ಚಂಪಾ

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಕೇರಳ ಸರಕಾರ ನಡೆದುಕೊಂಡಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿದೆ. ಕೇರಳ ಸರಕಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ ಚಂಪಾ

Vijaya Karnataka Web 2 Jan 2019, 5:59 pm
ಧಾರವಾಡ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಕೇರಳ ಸರಕಾರ ಅವಕಾಶ ನೀಡುವ ಮೂಲಕ ಪ್ರಜಾಪ್ರಭುತ್ವ ಮೌಲ್ಯ ಎತ್ತಿ ಹಿಡಿದಿದೆ ಎಂದು ಸಾಹಿತಿ ಚಂದ್ರಶೇಖರ್‌ ಪಾಟೀಲ್‌ ತಿಳಿಸಿದ್ದಾರೆ.
Vijaya Karnataka Web ಚಂದ್ರಶೇಖರ್‌ ಪಾಟೀಲ್‌
ಚಂದ್ರಶೇಖರ್‌ ಪಾಟೀಲ್‌


ಧಾರವಾಡದಲ್ಲಿ ಸಾಹಿತಿ ಚಂದ್ರಶೇಖರ ಪಾಟೀಲ್ ಹೇಳಿಕೆ ನೀಡಿದರು.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಕೇರಳ ಸರಕಾರ ನಡೆದುಕೊಂಡಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿದೆ. ಕೇರಳ ಸರಕಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಅಲ್ಲಿನ ಸರಕಾರ ಸೂಕ್ತವಾದ ನಿರ್ಣಯ ತೆಗೆದುಕೊಂಡಿದೆ. ಇದೊಂದು ಹೆಮ್ಮೆಯ ಕ್ರಮ. ಮಹಿಳೆಯರ ಪ್ರವೇಶಕ್ಕೆ ವಿರೋಧಿಸಿದರೆ ಸುಪ್ರಿಂ ಕೋರ್ಟ್‌ಗೆ ಅಗೌರವ ತೋರಿಸಿದಂತೆ. ಸಂವಿಧಾನಕ್ಕೂ ಅಗೌರವ ತೋರಿಸಿದಂತೆ ಎಂದರು.

ಆದರೆ ಇದೀಗ ಕೇರಳ ಸರಕಾರ ಒಳ್ಳೆಯ ಕೆಲಸ ಮಾಡಿದೆ. ನಾವು ಇಡೀ ಕೇರಳ ಜನತೆಗೆ ಅಭಿನಂದನೆ ಸಲ್ಲಿಸಬೇಕು. ಒಬ್ಬರಿಗೆ ಎಂಟ್ರಿ ಸಿಕ್ಕರೆ ಸಾಕು, ಅದು ಮುಂದುವರೆಯಲಿದೆ. ಮೂಢನಂಬಿಕೆ, ಕೋಮುವಾದ, ಆಧುನಿಕ ಮೌಲ್ಯಗಳಲ್ಲ ಎಂದು ಚಂಪಾ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ