ಆ್ಯಪ್ನಗರ

ಸೇವಾನಿರತ ಕಿಮ್ಸ್‌ ಸ್ಟಾಫ್‌ ನರ್ಸ್‌ ಮೇಲೆ ಹಲ್ಲೆ

ಹುಬ್ಬಳ್ಳಿ: ತನ್ನ ಗೆಳೆಯನಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಸೇವಾನಿರತ ಕಿಮ್ಸ್‌ ಸ್ಟಾಫ್‌ ನರ್ಸ್‌ ಮೇಲೆ ಹಲ್ಲೆ ನಡೆಸಿರುವ ಘಟನೆ ಭಾನವಾರ ತಡರಾತ್ರಿ ನಡೆದಿದೆ.

Vijaya Karnataka 25 Jun 2019, 5:00 am
ಹುಬ್ಬಳ್ಳಿ: ತನ್ನ ಗೆಳೆಯನಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಸೇವಾನಿರತ ಕಿಮ್ಸ್‌ ಸ್ಟಾಫ್‌ ನರ್ಸ್‌ ಮೇಲೆ ಹಲ್ಲೆ ನಡೆಸಿರುವ ಘಟನೆ ಭಾನವಾರ ತಡರಾತ್ರಿ ನಡೆದಿದೆ.
Vijaya Karnataka Web kims staff nurse assaulted
ಸೇವಾನಿರತ ಕಿಮ್ಸ್‌ ಸ್ಟಾಫ್‌ ನರ್ಸ್‌ ಮೇಲೆ ಹಲ್ಲೆ


ಅಮರಗೋಳದ ನಿವಾಸಿ ಸಂತೋಷ ಅಶೋಕ ಅಥಣಿ ಎಂಬುವರೇ ಹಲ್ಲೆ ಮಾಡಿದ ವ್ಯಕ್ತಿಯಾಗಿದ್ದಾನೆ. ಭಾನುವಾರ ತಡರಾತ್ರಿ ತನ್ನ ಗೆಳೆಯನಿಗೆ ಚಿಕಿತ್ಸೆ ಕೊಡಿಸಲು ಕಿಮ್ಸ್‌ಗೆ ಬಂದಿದ್ದಾನೆ. ಆದರೆ, ಈ ವೇಳೆ ಕಿಮ್ಸ್‌ ಸಿಬ್ಬಂದಿ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಸ್ಟಾಫ್‌ ನರ್ಸ್‌ ಈರಪ್ಪ ಮೇಲೆ ಹಲ್ಲೆ ನಡೆಸಿದ್ದಾನೆ.

ಈ ಕುರಿತು ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ