ಆ್ಯಪ್ನಗರ

ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದ ಅರಸು

ಧಾರವಾಡ : ಸಂಕೀರ್ಣ ಸಾಮಾಜಿಕ ವ್ಯವಸ್ಥೆಯಲ್ಲಿ ಸಾಮಾಜಿಕ ಮತ್ತು ಶೈಕ್ಷ ಣಿಕ ಕ್ರಾಂತಿಗೆ ಮುನ್ನುಡಿ ಹಾಕಿ ಸಾಮಾಜಿಕ ಸಮಾನತೆ ತಂದುಕೊಟ್ಟವರು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಎಂದು ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಹೇಳಿದರು.

Vijaya Karnataka 21 Aug 2019, 5:00 am
ಧಾರವಾಡ : ಸಂಕೀರ್ಣ ಸಾಮಾಜಿಕ ವ್ಯವಸ್ಥೆಯಲ್ಲಿ ಸಾಮಾಜಿಕ ಮತ್ತು ಶೈಕ್ಷ ಣಿಕ ಕ್ರಾಂತಿಗೆ ಮುನ್ನುಡಿ ಹಾಕಿ ಸಾಮಾಜಿಕ ಸಮಾನತೆ ತಂದುಕೊಟ್ಟವರು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಎಂದು ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಹೇಳಿದರು.
Vijaya Karnataka Web DRW-20RANGA04


ನಗರದ ಆಲೂರು ವೆಂಕಟರಾವ್‌ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 104ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇವರಾಜ ಅರಸು ಅವರು ರಾಜ್ಯದ ನೇತೃತ್ವ ವಹಿಸಿದ ನಂತರ ಸಾಮಾಜಿಕ, ಆರ್ಥಿಕ, ಶೈಕ್ಷ ಣಿಕ ಮತ್ತು ಆಡಳಿತಾತ್ಮಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾದವು. ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ಹೆಸರಾಂತ ಕಾನೂನು ತಜ್ಞ ಎಲ್‌.ಜಿ. ಹಾವನೂರ ಅವರ ನೇತೃತ್ವದಲ್ಲಿ ಆಯೋಗ ರಚಿಸಿದರು. ಮತ್ತು ಅದು ನೀಡಿದ ವರದಿಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು ಒಂದು ಐತಿಹಾಸಿಕ ಸಾಧನೆ ಎಂದು ತಿಳಿಸಿದರು.

ಅಧ್ಯಕ್ಷ ತೆ ವಹಿಸಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ ಮಾತನಾಡಿ, ಅತಿಯಾದ ಮಳೆ ಹಾಗೂ ನೆರೆಹಾವಳಿಯಿಂದ ಉತ್ತರ ಕರ್ನಾಟಕ ಇಂದು ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ನೊಂದವರ ಧ್ವನಿಯಾಗಿ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ್ದ ಸಮಾನತೆಯ ಹರಿಕಾರ ದೇವರಾಜ ಅರಸು ಅವರ ಜಯಂತಿಯನ್ನು ಸರಳವಾಗಿ ಆಚರಿಸಾಗುತ್ತಿದೆ. ಜಯಂತಿ ಆಚರಣೆಗೆ ಮೀಸಲಿಟ್ಟ ಹಣವನ್ನು ನೆರೆ ಸಂತ್ರಸ್ತರ ನಿಧಿಗೆ ನೀಡಲಾಗುವುದು ಎಂದು ತಿಳಿಸಿದರು.

ಪ್ರಾಥಮಿಕ ಹಂತದಿಂದ ಪಿಎಚ್‌ಡಿವರಗೆ ವಿದ್ಯಾಭ್ಯಾಸ ಪಡೆಯುವ ಎಲ್ಲ ವಿದ್ಯಾರ್ಥಿಗಳು ದೇವರಾಜ ಅರಸು ಅವರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಿ ಅವರ ಜೀವನದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಲಕ್ಷ ್ಮಣ ಬಕ್ಕಾಯಿ ಮಾತನಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪತ್ರಾಂಕಿತ ವ್ಯವಸ್ಥಾಪಕಿ ಸರೋಜಾ ಹಳಕಟ್ಟಿ, ವೈ.ಬಿ.ನಂದಿ, ನವೀನ ಶಿಂತ್ರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಗುರುರಾಜ ಕುಲಕರ್ಣಿ, ಅಬ್ದುಲ್‌ ರಶೀದ್‌ ಮಿರ್ಜಣ್ಣವರ , ಶಿವಣ್ಣ ಬಡಿಗೇರ, ಗುರುನಾಥ್‌ ಹುಲಗೂರ, ರಾಜು ಓಲೇಕಾರ ಸೇರಿದಂತೆ ವಿದ್ಯಾರ್ಥಿಗಳು, ನಿಲಯ ಪಾಲಕರು, ಸಾರ್ವಜನಿಕರು ಇದ್ದರು.

ಆನಂದ ಪಾಟೀಲ ಸ್ವಾಗತಿಸಿದರು. ರವಿ ಕುಲಕರ್ಣಿ ನಿರೂಪಿಸಿ, ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ