ಆ್ಯಪ್ನಗರ

ಕುಂದಗೋಳ ಉಪ ಚುನಾವಣೆ: ಒಂದು ನಾಮಪತ್ರ ತಿರಸ್ಕೃತ, 33 ಕ್ರಮಬದ್ಧ

ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಉಪ ಚುನಾವಣೆಯ ನಾಮಪತ್ರಗಳ ಪರಿಶೀಲನೆ ಕಾರ್ಯ ಮಂಗಳವಾರ ನಡೆಯಿತು. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ದಯಾನಂದ ಚಿಕ್ಕಮಠ ಅವರ ನಾಮಪತ್ರ ತಿರಸ್ಕಾರಗೊಂಡಿದೆ. ಅವರು ಬೈಲಹೊಂಗಲ ತಾಲೂಕಿನ

Vijaya Karnataka 1 May 2019, 5:00 am
ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಉಪ ಚುನಾವಣೆಯ ನಾಮಪತ್ರಗಳ ಪರಿಶೀಲನೆ ಕಾರ್ಯ ಮಂಗಳವಾರ ನಡೆಯಿತು.
Vijaya Karnataka Web kundagola sub election a nomination rejected 33 valid
ಕುಂದಗೋಳ ಉಪ ಚುನಾವಣೆ: ಒಂದು ನಾಮಪತ್ರ ತಿರಸ್ಕೃತ, 33 ಕ್ರಮಬದ್ಧ

ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ದಯಾನಂದ ಚಿಕ್ಕಮಠ ಅವರ ನಾಮಪತ್ರ ತಿರಸ್ಕಾರಗೊಂಡಿದೆ. ಅವರು ಬೈಲಹೊಂಗಲ ತಾಲೂಕಿನ ನಿವಾಸಿಯಾಗಿದ್ದು, ನಾಮಪತ್ರ ಅರ್ಜಿಯೊಂದಿಗೆ ಅಲ್ಲಿನ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಪ್ರಮಾಣೀಕೃತ ಪ್ರತಿಯನ್ನು ಬೈಲಹೊಂಗಲ ಚುನಾವಣಾಧಿಕಾರಿಗಳಿಂದ ಪಡೆದು ಸಲ್ಲಿಸಿರಲಿಲ್ಲ ಎಂದು ಚುನಾವಣಾಧಿಕಾರಿ ವಿ.ಪ್ರಸನ್ನ ತಿಳಿಸಿದ್ದಾರೆ.

ಒಟ್ಟು 22 ಅಭ್ಯರ್ಥಿಗಳ 33 ನಾಮಪತ್ರಗಳು ಕ್ರಮಬದ್ಧವಾಗಿವೆ. ನಾಮಪತ್ರ ಹಿಂಪಡೆಯಲು ಮೇ 2 ಕೊನೆಯ ದಿನವಾಗಿದೆ.

ಜಾತ್ರೆ, ಸಂತೆ ನಿಷೇಧ

ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 19 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಅಂದು ನಡೆಯಬೇಕಿದ್ದ ಜಾತ್ರೆ ಹಾಗೂ ಸಂತೆಗಳನ್ನು ನಿಷೇಧಿಸಲಾಗಿದೆ.

ಹುಬ್ಬಳ್ಳಿ ತಾಲೂಕು ಛಬ್ಬಿ ಹೋಬಳಿಯ ಅಂಚಟಗೇರಿ, ನೂಲ್ವಿ ಹಾಗೂ ಛಬ್ಬಿ ಗ್ರಾಮಗಳಲ್ಲಿ ನಡೆಯಬೇಕಿದ್ದ ಸಂತೆಗಳು ಮತ್ತು ಕುಂದಗೋಳ ಹೋಬಳಿಯ ಕಮಡೊಳ್ಳಿ ಗ್ರಾಮದ ಶ್ರೀ ಲೋಚನೇಶ್ವರ ಮಠದ ಜಾತ್ರೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ದೀಪಾ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ