ಆ್ಯಪ್ನಗರ

ಸ್ವಚ್ಛತೆ ನಿತ್ಯದ ಪರಿಪಾಠವಾಗಲಿ

ಧಾರವಾಡ : ಜಿಲ್ಲಾಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ವಾಲ್‌ನಟ್‌ ಸಂಸ್ಥೆಯ ಸಹಯೋಗದಲ್ಲಿರಾಯಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನವಿಕಾಸ ತರಬೇತಿ ಕೇಂದ್ರದಲ್ಲಿಬುಧವಾರ ಸ್ವಚ್ಛ ಭಾರತ ಮಿಶನ್‌(ಗ್ರಾಮೀಣ) ಯೋಜನೆಯಡಿ ಜಿಲ್ಲಾಮಟ್ಟದ ಸ್ವಚ್ಛತಾ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ನಡೆಯಿತು.

Vijaya Karnataka 12 Sep 2019, 5:00 am
ಧಾರವಾಡ : ಜಿಲ್ಲಾಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ವಾಲ್‌ನಟ್‌ ಸಂಸ್ಥೆಯ ಸಹಯೋಗದಲ್ಲಿರಾಯಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನವಿಕಾಸ ತರಬೇತಿ ಕೇಂದ್ರದಲ್ಲಿಬುಧವಾರ ಸ್ವಚ್ಛ ಭಾರತ ಮಿಶನ್‌(ಗ್ರಾಮೀಣ) ಯೋಜನೆಯಡಿ ಜಿಲ್ಲಾಮಟ್ಟದ ಸ್ವಚ್ಛತಾ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ನಡೆಯಿತು.
Vijaya Karnataka Web 11RANGA04_21
ಧಾರವಾಡ ರಾಯಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನವಿಕಾಸ ತರಬೇತಿ ಕೇಂದ್ರದಲ್ಲಿನಡೆದ ಜಿಲ್ಲಾಮಟ್ಟದ ಸ್ವಚ್ಛತೆ ರಸಪ್ರಶ್ನೆ ಸ್ಪರ್ಧೆಯಲ್ಲಿಪ್ರಥಮ ಸ್ಥಾನ ಪಡೆದ ಹುಬ್ಬಳ್ಳಿಯ ಚೇತನ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳಿಗೆ ಗಣ್ಯರು 10 ಸಾವಿರ ರೂ. ಚೆಕ್‌ ವಿತರಿಸಿದರು.


ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಸಿಇಒ ಡಾ.ಬಿ.ಸಿ.ಸತೀಶ ಮಾತನಾಡಿ, ಪ್ಲಾಸ್ಟಿಕ್‌ ಬಳಕೆ ಎಲ್ಲೆಡೆ ನಿಷೇಧಿಸಲಾಗಿದೆ. ಪ್ರತಿಯೊಬ್ಬರೂ ಪರಿಸರ ಸ್ನೇಹಿ ಜೀವನ ನಡೆಸಬೇಕು. ಗಿಡಗಳನ್ನು ನೆಡೆವುದಲ್ಲದೆ ಅವುಗಳನ್ನು ಉತ್ತಮವಾಗಿ ಪೋಷಿಸಿ ಬೆಳೆಸುವುದರ ಮೂಲಕ ಹಸಿರನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.

ಜ್ಞಾನವಿಕಾಸ ತರಬೇತಿ ಕೇಂದ್ರದ ನಿರ್ದೇಶಕ ಡಾ.ಪ್ರಕಾಶ್‌ ಭಟ್‌ ಮಾತನಾಡಿ, ಸ್ವಚ್ಛತೆ ಎಂಬುದು ನಿತ್ಯದ ಪರಿಪಾಠವಾಗಬೇಕು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಸ್ವಚ್ಛತೆ ಪರಿಕಲ್ಪನೆಗೆ ಪ್ರೇರಣೆಯಾಗಿದ್ದಾರೆ ಎಂದರು.

ನಂತರ ನಡೆದ ರಸಪ್ರಶ್ನೆಯ ಸ್ಪರ್ಧೆಯಲ್ಲಿಜಿಲ್ಲೆಯ 193 ಶಾಲೆಗಳಿಂದ 386 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮೊದಲ ಸುತ್ತಿನಲ್ಲಿಲಿಖಿತ ಪರೀಕ್ಷೆ ಮೂಲಕ ಅತಿ ಹೆಚ್ಚು ಅಂಕ ಪಡೆದ ಆರು ತಂಡಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಯಿತು. ಅಂತಿಮ ಸುತ್ತಿನಲ್ಲಿಅತಿ ಹೆಚ್ಚು ಅಂಕ ಗಳಿಸಿದ ಹುಬ್ಬಳ್ಳಿಯ ಚೇತನ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ, 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ಪಡೆದರು.

ಧಾರವಾಡದ ಜೆಎಸ್‌ಎಸ್‌ ಮಂಜುನಾಥೇಶ್ವರ ಪ್ರೌಢಶಾಲೆ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿ 7 ಸಾವಿರ ರೂ. ನಗದು ಬಹುಮಾನ ಗಳಿಸಿದರು. ಜೆಎಸ್‌ಎಸ್‌ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳು ತೃತೀಯ ಸ್ಥಾನದೊಂದಿಗೆ 5 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ಪಡೆದರು. ಬೆಂಗಳೂರಿನ ವಾಲ್‌ನಟ್‌ ಸಂಸ್ಥೆಯ ಅನಘ ಶ್ರೀಧರ ಹಾಗೂ ವಿಂಧ್ಯಾ ಕ್ವಿಜ್‌ ನಿರ್ವಹಿಸಿದರು.

ಜಿಪಂ ಅಧ್ಯಕ್ಷೆ ವಿಜಯಲಕ್ಷಿತ್ರ್ಮ ಕೆಂಪೇಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಲ್ಲಪ್ಪ ಪುಡಕಲಕಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶಾರದಾ ಕಿರೇಸೂರ, ಜಿಪಂ ಯೋಜನಾ ನಿರ್ದೇಶಕ ಬಿ.ಎಸ್‌.ಮೂಗನೂರಮಠ, ಶಿಕ್ಷಣಾಧಿಕಾರಿ ಎನ್‌.ಕೆ.ಸಾವ್ಕಾರ, ಪ್ರಮೋದ ಮಹಾಲೆ, ಬಿಇಒ ಅಕ್ಬರ್‌ ಅಲಿ ಖಾಜಿ, ಉಮಾದೇವಿ ಬಸಾಪೂರ, ಸ್ವಾಮಿ ವಿವೇಕಾನಂದ ಯುತ್‌ ಮೂವ್‌ಮೆಂಟ್‌ನ ಜಯಂತ್‌ ಕೆ.ಎಸ್‌ ಇದ್ದರು.

ರಾಯಾಪುರದ ಕೆಎಲ್‌ಇ ಪ್ರೌಢಶಾಲೆಯ ಮಕ್ಕಳು ಪ್ರಾರ್ಥಿಸಿದರು. ಶಿವಲೀಲಾ ಕಳಸಣ್ಣವರ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ