ಆ್ಯಪ್ನಗರ

ಸ್ಕೌಟ್ಸ್‌ ಸಂಸ್ಥೆ ಸ್ವಾವಲಂಬನೆ ಸಾಧಿಸಲಿ

ಧಾರವಾಡ: ಸ್ಕೌಟ್ಸ್‌ ಮತ್ತು ಗೈಡ್ಸ್‌ ಮಕ್ಕಳಿಗೆ ಶಿಕ್ಷಕರು ನೈತಿಕ ಶಿಕ್ಷಣ ನೀಡಿ ಆಧ್ಯಾತ್ಮಿಕವಾಗಿ ಬೆಳೆಸಬೇಕು. ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ಸಂಪೂರ್ಣವಾಗಿ ಸರಕಾರದ ಮೇಲೆ ಅವಲಂಬಿತವಾಗದೇ ಆದಾಯ ಹೆಚ್ಚಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಜ್ಯ ಸಂಸ್ಥೆಯ ಪ್ರಧಾನ ಆಯುಕ್ತ ಪಿ.ಜಿ.ಆರ್‌.ಸಿಂಧ್ಯಾ ಹೇಳಿದರು.

Vijaya Karnataka 1 Oct 2019, 5:00 am
ಧಾರವಾಡ: ಸ್ಕೌಟ್ಸ್‌ ಮತ್ತು ಗೈಡ್ಸ್‌ ಮಕ್ಕಳಿಗೆ ಶಿಕ್ಷಕರು ನೈತಿಕ ಶಿಕ್ಷಣ ನೀಡಿ ಆಧ್ಯಾತ್ಮಿಕವಾಗಿ ಬೆಳೆಸಬೇಕು. ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ಸಂಪೂರ್ಣವಾಗಿ ಸರಕಾರದ ಮೇಲೆ ಅವಲಂಬಿತವಾಗದೇ ಆದಾಯ ಹೆಚ್ಚಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಜ್ಯ ಸಂಸ್ಥೆಯ ಪ್ರಧಾನ ಆಯುಕ್ತ ಪಿ.ಜಿ.ಆರ್‌.ಸಿಂಧ್ಯಾ ಹೇಳಿದರು.
Vijaya Karnataka Web 30MAILAR14_21
ಧಾರವಾಡದ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮವನ್ನು
ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಜ್ಯ ಸಂಸ್ಥೆಯ ಪ್ರಧಾನ ಆಯುಕ್ತ ಪಿ.ಜಿ.ಆರ್‌.ಸಿಂಧ್ಯಾ ಉದ್ಘಾಟಿಸಿದರು.


ನಗರದ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಆರ್ಥಿಕ ನೆರವು
ಮುಖ್ಯ ಅತಿಥಿ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಧಾರವಾಡ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ ಅಭಿವೃದ್ಧಿ ಕೆಲಸಗಳು ಹಾಗೂ ಬೆಳವಣಿಗೆಗೆ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಹತ್ತು ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಪ್ರಕಟಿಸಿದರು.

ಇದೇ ವೇಳೆ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ ಜಿಲ್ಲಾಮುಖ್ಯ ಆಯುಕ್ತ ಎಂ.ಎಂ. ಲೋಂಡೆ ದಂಪತಿಗಳನ್ನು ಸನ್ಮಾನಿಸಲಾಯಿತು.
ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ ಉಪಾಧ್ಯಕ್ಷೆ ರಜನಿ ದಾಸ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಡಿಡಿಪಿಐ ಗಜಾನನ ಮನ್ನಿಕೇರಿ, ನವಲಗುಂದ ಬಿಇಒ ಗಿರೀಶ ಪದಕಿ, ಸ್ಕೌಟ್ಸ್‌ ಜಿಲ್ಲಾಆಯುಕ್ತ ವಿ.ವಿ.ಕಟ್ಟಿ, ಗೈಡ್ಸ್‌ ಆಯುಕ್ತÜ ವಿದ್ಯಾ ನಾಡಿಗೇರ, ಸುಭಾಷ್‌ ಮೊರಬ, ವಿ.ವಿ. ಸಿಂಧೆ, ಎನ್‌.ಎನ್‌. ಪೂಜಾರ ಉಪಸ್ಥಿತರಿದ್ದರು. ಪ್ರಭಾ ಲೋಂಡೆ ಹಾಗೂ ಮಕ್ಕಳು ಸಾಮೂಹಿಕ ಪ್ರಾರ್ಥಿಸಿದರು. ಮಹಾದೇವಿ ಯಕ್ಕುಂಡಿ ನಿರೂಪಿಸಿದರು. ಎನ್‌.ವಿ. ಕುರುವತ್ತಿಮಠ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ