ಆ್ಯಪ್ನಗರ

ಯುವಕರು ಗಾಂಧೀಜಿ ತತ್ತ್ವಾದರ್ಶ ಮೈಗೂಡಿಸಿಕೊಳ್ಳಲಿ

ಧಾರವಾಡ : ನಗರದ ಜೆಎಸ್‌ಎಸ್‌ ಕಾಲೇಜಿನ ಉತ್ಸವ ಸಭಾಂಗಣದಲ್ಲಿ ನಾಲ್ಕು ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ವರ್ಷಾಚರಣೆ ಪ್ರಯುಕ್ತ ಗಾಂಧೀಜಿ ಕುರಿತಾದ ಛಾಯಾಚಿತ್ರ ಪ್ರದರ್ಶನ ನಡೆಯಿತು.

Vijaya Karnataka 29 Aug 2019, 5:00 am
ಧಾರವಾಡ : ನಗರದ ಜೆಎಸ್‌ಎಸ್‌ ಕಾಲೇಜಿನ ಉತ್ಸವ ಸಭಾಂಗಣದಲ್ಲಿ ನಾಲ್ಕು ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ವರ್ಷಾಚರಣೆ ಪ್ರಯುಕ್ತ ಗಾಂಧೀಜಿ ಕುರಿತಾದ ಛಾಯಾಚಿತ್ರ ಪ್ರದರ್ಶನ ನಡೆಯಿತು.
Vijaya Karnataka Web DRW-28MAILAR01
ಧಾರವಾಡದ ಜೆಎಸ್‌ಎಸ್‌ ಕಾಲೇಜಿನ ಉತ್ಸವ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ವರ್ಷಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಗಾಂಧೀಜಿ ಕುರಿತಾದ ಛಾಯಾಚಿತ್ರ ಪ್ರದರ್ಶನವನ್ನು ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ್‌ ಉದ್ಘಾಟಿಸಿದರು.


ಕೇಂದ್ರ ಸರಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಧಾರವಾಡ ಮತ್ತು ಬಳ್ಳಾರಿ ಜೆಎಸ್‌ಎಸ್‌ ಶ್ರೀ ಮಂಜುನಾಥೇಶ್ವರ ಸ್ನಾತಕ, ಸ್ನಾತಕೋತ್ತರ ಅಧ್ಯಯನ ಕೇಂದ್ರ, ಜೆಎಸ್‌ಎಸ್‌ ಬನಶಂಕರಿ ಕಲಾ, ವಾಣಿಜ್ಯ ಹಾಗೂ ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ, ಎನ್‌ಎಸ್‌ಎಸ್‌ ಕೋಶ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಬುಧವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ್‌ ಉದ್ಘಾಟಿಸಿ, ಮಾತನಾಡಿ, ಸತ್ಯದ ಹಾದಿಯಲ್ಲಿ ನಡೆದ ಗಾಂಧೀಜಿಯವರ ತತ್ವಗಳು ಮತ್ತು ಆದರ್ಶಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು ಎಂದರು.

ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬರಲು ಸಾಕಷ್ಟು ಮಹನೀಯರ ಹೋರಾಟದ ಫಲ ಹಾಗೂ ಪ್ರಾಣ ತ್ಯಾಗದಿಂದ ಇವತ್ತು ಎಲ್ಲರೂ ನೆಮ್ಮದಿಯಿಂದ ಇರುವಂತಾಗಿದೆ. ಇಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ವಿದ್ಯಾರ್ಥಿಗಳಿಗೆ ಹೋರಾಟಗಾರರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸ್ವಾತಂತ್ರ್ಯ ಹೋರಾಟಗಾರ ಎಸ್‌.ಬಿ.ಕಬ್ಬಿಣಕಂತಿನಮಠ, ದೇಶದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಯುವಕರು, ವಿದ್ಯಾರ್ಥಿಗಳು ಹೋರಾಟಕ್ಕಿಳಿಯುವ ಮೂಲಕ ಭ್ರಷ್ಟಾಚಾರ ಹೋಗಲಾಡಿಸಬೇಕು ಎಂದರು.

ಸ್ವಾತಂತ್ರ್ಯ ಹೋರಾಟಗಾರ ಎಸ್‌.ಬಿ.ತಾಂಬೆ ಮಾತನಾಡಿ, ಬ್ರಿಟಿಷರ ಕಾಲದಲ್ಲಿ ರಾತ್ರಿಯೂ ದೇಶ ರಕ್ಷ ಣೆಗೆ ಹೋರಾಟ ಮಾಡಿದ್ದೇನೆ. ಆದರೆ, ನನ್ನ ಜತೆಗೆ ಹೋರಾಟ ಮಾಡಿದ ಸೂರ್ಯ ನಾರಯಣ ಸೇರಿದಂತೆ ಇತರ ಹೋರಾಟಗಾರರು ಯಾರು ಇಲ್ಲ ಎಂಬುದು ದುಃಖವಾಗುತ್ತದೆ. ಮನುಷ್ಯ ಜೀವನದಲ್ಲಿ ಏರಳಿತಗಳು ಇದ್ದೇ ಇರುತ್ತವೆ. ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಸ್ವಾತಂತ್ರ್ಯ ಹೋರಾಟಗಾರ ಕೆ.ಜಿ.ಕುಲಕರ್ಣಿ, ಜೆಎಸ್‌ಎಸ್‌ ಕಾಲೇಜಿನ ಇತಿಹಾಸ ವಿಭಾಗ ಪ್ರಾಧ್ಯಾಪಕ ಆರ್‌.ವಿ. ಚಿಟ್ಟಗುಬ್ಬಿ ಹಾಗೂ ಅಧ್ಯಕ್ಷ ತೆ ವಹಿಸಿದ್ದ ಜೆಎಸ್‌ಎಸ್‌ ಕಾಲೇಜಿನ ವಿತ್ತಾಧಿಕಾರಿ ಡಾ. ಅಜೀತ ಪ್ರಸಾದ ಮಾತನಾಡಿದರು.

ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರಾದ ಎಸ್‌.ಎಂ. ಕಬ್ಬಿಣಕಂತಿಮಠ, ಕೆ.ಜಿ. ಕುಲಕರ್ಣಿ, ಎಸ್‌.ವಿ. ತಾಂಬೆ ಅವರನ್ನು ಸನ್ಮಾನಿಸಲಾಯಿತು.

ಪ್ರಮಾಣಪತ್ರ ವಿತರಣೆ: ಕ್ರೀಡೆ, ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗಿಯಾಗಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಿರು ಕಾಣಿಕೆ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. ಅಲ್ಲದೇ ಸಭಾ ಕಾರ್ಯಕ್ರಮಕ್ಕೂ ಮುನ್ನ ಮಹಾತ್ಮ ಗಾಂಧೀಜಿಯವರ ಕುರಿತು ಛಾಯಾಚಿತ್ರ ಪ್ರದರ್ಶನದ ಮಳಿಗೆಯನ್ನು ಜಿಪಂ ಅಧ್ಯಕ್ಷೆ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಜೆಎಸ್‌ಎಸ್‌ ಕಾಲೇಜ್‌ ಪ್ರಾಚಾರ್ಯ ಡಾ.ಜಿ.ಕೃಷ್ಣಮೂರ್ತಿ, ಎನ್‌ಎಸ್‌ಎಸ್‌ ಅಧಿಕಾರಿ ಪ್ರೊ.ಎಸ್‌.ಕೆ.ಸಜ್ಜನ್‌ ಸೇರಿದಂತೆ ವಿದ್ಯಾರ್ಥಿಗಳು ಇದ್ದರು. ಭಾರತ ಸರಕಾರದ ವಾರ್ತಾ ಶಾಖೆಯ ಬೆಂಗಳೂರಿನ ಮಾಧ್ಯಮ ಮತ್ತು ಸಂವಹನ ಅಧಿಕಾರಿ ಪಿ.ಜಿ.ಪಾಟೀಲ ಪ್ರಾಸ್ತಾವಿಸಿದರು. ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪನಿರ್ದೇಶಕ ಡಾ.ಜಿ.ಹಳ್ಳಿಕೇರಿ ಸ್ವಾಗತಿಸಿದರು.

ಗಾಂಧಿ ಛಾಯಾಚಿತ್ರ ಪ್ರದರ್ಶನ: ಗಾಂಧಿ ಕುರಿತಾಗಿ ಸಮಗ್ರ ಮಾಹಿತಿ, ಸ್ವಚ್ಛ ಭಾರತದ ಕುರಿತು ತಿಳುವಳಿಕೆ ಮೂಡಿಸುವ ವಸ್ತು ಪ್ರದರ್ಶನವಿದೆ. ಅಲ್ಲದೇ ಸರಕಾರ ಹಾಗೂ ಸರಕಾರೇತರ ಸಂಸ್ಥೆಗಳ ಮಳಿಗೆಗಳು ಇದ್ದು, ಖಾದಿ ಬಟ್ಟೆಗಳು ಮಾರಾಟಕ್ಕಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ