ಆ್ಯಪ್ನಗರ

ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲಿ

ಧಾರವಾಡ: ಕರಕುಶಲ ಕಲೆ ಮತ್ತು ಲೋಹ ಕಸಬುಗಳಲ್ಲಿಪ್ರಾವೀಣ್ಯ ಸಾಧಿಸಿರುವ ವಿಶ್ವಕರ್ಮ ಸಮುದಾಯಗಳು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಜಿಲ್ಲಾಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷಿತ್ರ್ಮೕ ಪಾಟೀಲ ಹೇಳಿದರು.

Vijaya Karnataka 18 Sep 2019, 5:00 am
ಧಾರವಾಡ: ಕರಕುಶಲ ಕಲೆ ಮತ್ತು ಲೋಹ ಕಸಬುಗಳಲ್ಲಿಪ್ರಾವೀಣ್ಯ ಸಾಧಿಸಿರುವ ವಿಶ್ವಕರ್ಮ ಸಮುದಾಯಗಳು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಜಿಲ್ಲಾಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷಿತ್ರ್ಮೕ ಪಾಟೀಲ ಹೇಳಿದರು.
Vijaya Karnataka Web lets develop academically
ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲಿ


ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿಮಂಗಳವಾರ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿಆಯೋಜಿಸಿದ್ದ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಅವರು ಮಾತನಾಡಿ, ಭಾರತೀಯ ಪರಂಪರೆಯ ಪ್ರಾಚೀನ ಸಂಸ್ಕೃತಿ ಮತ್ತು ಇತಿಹಾಸಕ್ಕೆ ವಿಶ್ವಕರ್ಮ ಜನಾಂಗವು ಅಭೂತಪೂರ್ವ ಕೊಡುಗೆ ನೀಡಿದೆ ಎಂದರು.

ನಿವೃತ್ತ ಬಾನುಲಿ ಕೃಷಿ ಅಧಿಕಾರಿ ಡಾ. ವಿರೂಪಾಕ್ಷ ಬಡಿಗೇರ ಅವರು ವಿಶ್ವಕರ್ಮ ಸಂಸ್ಕೃತಿ ಹಾಗೂ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಭಾರತೀಯ ಪರಂಪರೆ ಮತ್ತು ಸಂಸ್ಕೃತಿಗೆ ವಿಶ್ವಕರ್ಮ ಸಮುದಾಯ ನೀಡಿದ ಕೊಡುಗೆಯನ್ನು ಇತಿಹಾಸ ಸ್ಮರಿಸುತ್ತದೆ ಎಂದು ತಿಳಿಸಿದರು.

ಇದೇ ವೇಳೆ ವಿವಿಧ ಕ್ಷೇತ್ರದಲ್ಲಿಸಾಧನೆಗೈದ ಪ್ರತಿಭಾವಂತರನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ಕಾಮನಕಟ್ಟಿಯ ಮೌನೇಶ್ವರ ದೇವಸ್ಥಾನದಿಂದ ವಿಶ್ವಕರ್ಮ ಭಾವಚಿತ್ರ ಮೆರವಣಿಗೆ ಆರಂಭವಾಗಿ ವಿವಿಧ ಕಲಾ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿಸಂಚರಿಸಿ ಕರ್ನಾಟಕ ವಿದ್ಯಾವರ್ಧಕ ಸಂಘದ ಆವರಣ ತಲುಪಿ ಸಂಪನ್ನಗೊಂಡಿತು.

ಜಿಪಂ ಸದಸ್ಯೆ ಭಾವನಾ ಬೇಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಪಿಎಸ್‌ಐ ಶರಣಪ್ಪ ದೇಸಾಯಿ, ಮುಖಂಡರಾದ ವಸಂತ ಅರ್ಕಾಚಾರ, ಕಾಳಪ್ಪ ಬಡಿಗೇರ, ಸಂತೋಷ ಬಡಿಗೇರ, ಸುರೇಶ ಬಡಿಗೇರ, ಮಂಜುನಾಥ ಬಡಿಗೇರ, ರಾಮಣ್ಣಾ ಬಡಿಗೇರ, ದೇವೆಂದ್ರ ಬಡಿಗೇರ ಸೇರಿದಂತೆ ಇತರರು ಇದ್ದರು.

ವೀಣಾ ಬಡಿಗೇರ ಹಾಗೂ ಸಂಗಡಿಗರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಆರತಿ ದೇವಶಿಖಾಮಣಿ ನಿರೂಪಿಸಿ, ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ