ಆ್ಯಪ್ನಗರ

ನಿವೃತ್ತ ನ್ಯಾಯಾಧೀಶರಿಂದ ತನಿಖೆ ಆಗಲಿ: ಜೋಶಿ

ಧಾರವಾಡ : ಕುಮಾರೇಶ್ವರ ನಗರದಲ್ಲಿ ಬಹು ಮಹಡಿ ಕಟ್ಟಡ ಕುಸಿತ ಪ್ರಕರಣವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಸಂಸದ ಪ್ರಹ್ಲಾದ ಜೋಶಿ ಆಗ್ರಹಿಸಿದರು.

Vijaya Karnataka 21 Mar 2019, 5:00 am
ಧಾರವಾಡ : ಕುಮಾರೇಶ್ವರ ನಗರದಲ್ಲಿ ಬಹು ಮಹಡಿ ಕಟ್ಟಡ ಕುಸಿತ ಪ್ರಕರಣವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಸಂಸದ ಪ್ರಹ್ಲಾದ ಜೋಶಿ ಆಗ್ರಹಿಸಿದರು.
Vijaya Karnataka Web lets look into retired judges joshi
ನಿವೃತ್ತ ನ್ಯಾಯಾಧೀಶರಿಂದ ತನಿಖೆ ಆಗಲಿ: ಜೋಶಿ


ಬುಧವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಅವಳಿ ನಗರದಲ್ಲಿ ಕಾನೂನುಬಾಹಿರವಾಗಿ ಸಿಸಿ ನೀಡುವುದು ಸಾಮಾನ್ಯವಾಗಿದೆ. ಅಲ್ಲದೇ ಸೆಟ್‌ಬ್ಯಾಕ್‌ ಬಿಡದಿದ್ದರೂ ಸಿಸಿ ನೀಡುತ್ತಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು'' ಎಂದರು.

''ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿ ಹಾಗೂ ಬಿಲ್ಡಿಂಗ್‌ ಪರ್ಮಿಶನ್‌ ಕೊಟ್ಟವರು ಸ್ಥಳ ಪರಿಶೀಲನೆ ನಡೆಸಿದ್ದಾರೆಯೇ ಎಂಬುದು ಬಯಲಾಗಬೇಕು. ಅಲ್ಲದೇ ಈ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸಬೇಕು'' ಎಂದು ಒತ್ತಾಯಿಸಿದರು.

''ಈ ದುರಂತಕ್ಕೆ ಕಾರಣರಾದ ಮಾಲೀಕರು, ಎಂಜಿನಿಯರ್‌ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ತಪ್ಪಿತಸ್ಥರಿಗೆ ನ್ಯಾಯಾಲಯದಲ್ಲಿ ಜಾಮೀನು ಸಿಗದಂತೆ ಅಗತ್ಯ ಕ್ರಮ ಕೈಕೊಳ್ಳಬೇಕು'' ಎಂದರು.

''ಮಂಗಳವಾರ ದಿಲ್ಲಿಯಲ್ಲಿದ್ದ ಕಾರಣ ಸ್ಥಳಕ್ಕೆ ಬರಲು ಆಗಿರಲಿಲ್ಲ. ಹೀಗಾಗಿ ಇಂದು ಭೇಟಿ ನೀಡಿರುವೆ. ಮೊದಲು ಕಟ್ಟಡದ ಕೆಳಗೆ ಸಿಲುಕಿದವರ ರಕ್ಷ ಣಾ ಕಾರ್ಯಾಚರಣೆ ಮುಗಿಯಲಿ'' ಎಂದು ಜೋಶಿ ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಅಮೃತ ದೇಸಾಯಿ, ಮುಖಂಡರಾದ ಶಿವು ಹಿರೇಮಠ, ಈರೇಶ ಅಂಚಟಗೇರಿ, ಈರಣ್ಣ ಹಪ್ಪಳಿ, ನಿಜನಗೌಡ ಪಾಟೀಲ, ಶರಣು ಅಂಗಡಿ, ದೇವರಾಜ ಶಹಪೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ