ಆ್ಯಪ್ನಗರ

ಕಳಪೆ ಕಾಮಗಾರಿಗಳ ತನಿಖೆಗೆ ಆಗ್ರಹಿಸಿ ಸಿಎಂಗೆ ಪತ್ರ

ಹುಬ್ಬಳ್ಳಿ : ಹು-ಧಾ ಅವಳಿ ನಗರಗಳಲ್ಲಿ ಕೇಂದ್ರ ರಸ್ತೆ ನಿಧಿಯಡಿ ನಡೆದಿರುವ ಹಲವು ಕಾಂಕ್ರೀಟ್‌ ರಸ್ತೆಗಳ ಕಳಪೆ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಬೇಕೆಂದು ಹಾಗೂ ಗುಣಮಟ್ಟದ ಕಾಮಗಾರಿಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

Vijaya Karnataka 29 Jun 2019, 5:00 am
ಹುಬ್ಬಳ್ಳಿ : ಹು-ಧಾ ಅವಳಿ ನಗರಗಳಲ್ಲಿ ಕೇಂದ್ರ ರಸ್ತೆ ನಿಧಿಯಡಿ ನಡೆದಿರುವ ಹಲವು ಕಾಂಕ್ರೀಟ್‌ ರಸ್ತೆಗಳ ಕಳಪೆ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಬೇಕೆಂದು ಹಾಗೂ ಗುಣಮಟ್ಟದ ಕಾಮಗಾರಿಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
Vijaya Karnataka Web letter to cm demanding probe of poor works
ಕಳಪೆ ಕಾಮಗಾರಿಗಳ ತನಿಖೆಗೆ ಆಗ್ರಹಿಸಿ ಸಿಎಂಗೆ ಪತ್ರ


ಪ್ರಧಾನಿ ಮೋದಿ ಅವರ ಹಿಂದಿನ ಕೇಂದ್ರ ಸರಕಾರದ ಅವಧಿಯಲ್ಲಿ ಸುಮಾರು 640 ಕೋಟಿಗಿಂತಲೂ ಹೆಚ್ಚಿಗೆ ಕೇಂದ್ರ ರಸ್ತೆ ನಿಧಿ ಅಡಿ ಅವಳಿ ನಗರ ಸೇರಿದಂತೆ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಅನುದಾನ ಮತ್ತು ರಾಜ್ಯದ ವಿವಿಧ ಜಿಲ್ಲೆಗಳ ರಸ್ತೆ ಸುಧಾರಣೆಗಾಗಿ ಮೋದಿ ಸರಕಾರ ನೀಡಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅವಳಿ ನಗರಕ್ಕೆ ಸುಮಾರು 600 ಕೋಟಿ ರೂ. ಹೆಚ್ಚು ನೀಡಿದೆ. ಆದರೆ, ರಾಜ್ಯ ಸರಕಾರ ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಟೆಂಡರು ಕರೆಯಲು ವಿಳಂಬ ಮಾಡಿದ್ದಲ್ಲದೇ ಈಗ ಅನೇಕ ರಸ್ತೆಗಳ ಕಾಂಕ್ರೀಟ್‌ ಕಾಮಗಾರಿ ಕಳಪೆಯಾಗಿವೆ ಎಂದು ಸಾರ್ವನಿಕರು ದೂರುತ್ತಿದ್ದಾರೆ. ಕೂಡಲೇ ಕಳಪೆ ಕಾಮಗಾರಿಗಳ ಬಗ್ಗೆ ರಾಜ್ಯ ಸರಕಾರದಿಂದ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಅನುದಾನ ಕೇಂದ್ರದ್ದಾದರೂ ಕಾಮಗಾರಿಗಳನ್ನು ರಾಜ್ಯ ಸರಕಾರವೇ ನಿರ್ವಹಿಸುವುದರಿಂದ ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಹೆಚ್ಚಿನ ಮುತುವರ್ಜಿಯಿಂದ ಕಾಮಗಾರಿಗಳಿಗೆ ಚಾಲನೆ ನೀಡಬೇಕು. ರಾಜ್ಯ ಸರಕಾರದ ಹೆದ್ದಾರಿ ವಿಭಾಗದ ಲೋಕೋಪಯೋಗಿ ಅಧಿಕಾರಿಗಳಿಗೆ ಇದನ್ನು ಸರಿಪಡಿಸಿ ಗುಣಮಟ್ಟದ ಕಾಮಗಾರಿ ಮಾಡಲು ಹಾಗೂ ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಬೇಕೆಂದು ಎಂದು ಸಹ ಪತ್ರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸಿಎಂ ಅವರನ್ನು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ