ಆ್ಯಪ್ನಗರ

ಲಿಂಗಾಯತ ಪ್ರತ್ಯೇಕ‌ ಧರ್ಮ: ವಿರೋಧಿಸಿದ್ದ ಮಹಿಳೆ ಸೆರೆ

ಧಾರವಾಡ ತಾಲೂಕಿನ ಗರಗ ಗ್ರಾಮದವರಾಗಿರುವ ಶೃತಿ, ಧರ್ಮ ವಿಚಾರವಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು, ಸೋನಿಯಾ ಗಾಂಧಿ ಅವರಿಗೆ ಬರೆದಿದ್ದರೆನ್ನಲಾದ ಪತ್ರದ ವಿಚಾರವಾಗಿ ಮಾತನಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಠಾಣೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.

Vijaya Karnataka Web 24 Apr 2019, 3:11 pm
ಧಾರವಾಡ: ಲಿಂಗಾಯತ ಪ್ರತ್ಯೇತ ಧರ್ಮ ಹೋರಾಟವನ್ನು ವಿರೋಧಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಪ್ರಸಂಗ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ.

ಶೃತಿ ಬೆಳ್ಳಕ್ಕಿ ಬಂಧಿತ ಮಹಿಳೆಯಾಗಿದ್ದಾರೆ.

ಧಾರವಾಡ ತಾಲೂಕಿನ ಗರಗ ಗ್ರಾಮದವರಾಗಿರುವ ಶೃತಿ, ಧರ್ಮ ವಿಚಾರವಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು, ಸೋನಿಯಾ ಗಾಂಧಿ ಅವರಿಗೆ ಬರೆದಿದ್ದರೆನ್ನಲಾದ ಪತ್ರದ ವಿಚಾರವಾಗಿ ಮಾತನಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಠಾಣೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.

ಎಂ.ಬಿ.ಪಾಟೀಲ್‌ ಸೇರಿದಂತೆ ಹಲವರ ವಿರುದ್ಧ ಹರಿಹಾಯ್ದಿದ್ದ ಮಹಿಳೆ ಹಿಂದೂ ಧರ್ಮ ಒಡೆಯಲು ಯತ್ನಿಸುತ್ತಿದ್ದಾರೆ, ಎಂದು ಆರೋಪಿಸಿದ್ದಳು.


ಶೃತಿಯನ್ನು ಬಂಧಿಸಿರೋ ಗ್ರಾಮೀಣ ಠಾಣೆ ಪೊಲೀಸರು ಇದೀಗ‌ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರ ಕ್ರಮಕ್ಕೆ ಶೃತಿ ಪತಿ ಪರಮೇಶ ಉಳವಣ್ಣವರ್ ಸೇರಿದಂತೆ ಕುಟುಂಬದ ಸದಸ್ಯರು, ಸ್ಥಳೀಯ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ತಮ್ಮನ್ನು ಬಂಧಿಸಲು ಪೊಲೀಸರು ಬಂದಾಗ ಆತಂಕ ತೋರದ ಶೃತಿ ಅವರು ನಗುತ್ತಲೇ ಪೊಲೀಸ್ ಜೀಪನ್ನೇರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ