ಆ್ಯಪ್ನಗರ

ಚರ್ಚೆ ಮೂಲಕ ಮಹದಾಯಿ ಇತ್ಯರ್ಥ: ಜೋಶಿ

ಹುಬ್ಬಳ್ಳಿ: ಮಹದಾಯಿ ನೀರು ಹಂಚಿಕೆ ಸಂಬಂಧಿಸಿ ನ್ಯಾಯಾಧಿಕರಣ ನೀಡಿರುವ ತೀರ್ಪು ಜಾರಿಗೊಳಿಸುವ ಬಗ್ಗೆ ಸೌಹಾರ್ದಯುತ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಕರ್ನಾಟಕ ಮತ್ತು ಗೋವಾ ಸರಕಾರಗಳಿಗೆ ಮನವಿ ಮಾಡಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

Vijaya Karnataka 17 Sep 2019, 5:00 am
ಹುಬ್ಬಳ್ಳಿ: ಮಹದಾಯಿ ನೀರು ಹಂಚಿಕೆ ಸಂಬಂಧಿಸಿ ನ್ಯಾಯಾಧಿಕರಣ ನೀಡಿರುವ ತೀರ್ಪು ಜಾರಿಗೊಳಿಸುವ ಬಗ್ಗೆ ಸೌಹಾರ್ದಯುತ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಕರ್ನಾಟಕ ಮತ್ತು ಗೋವಾ ಸರಕಾರಗಳಿಗೆ ಮನವಿ ಮಾಡಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
Vijaya Karnataka Web mahadai settlement through discussion joshi
ಚರ್ಚೆ ಮೂಲಕ ಮಹದಾಯಿ ಇತ್ಯರ್ಥ: ಜೋಶಿ


ನಗರದಲ್ಲಿಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ''ಮಹದಾಯಿ ವಿಚಾರವಾಗಿ ಗೋವಾ ಸಿಎಂ ಸಾವಂತ ಅವರ ಜತೆ ಮಾತನಾಡಿದಾಗ ಮಾತುಕತೆಗೆ ಒಪ್ಪಿಗೆ ಸೂಚಿಸಿದ್ದರು. ಆದರೆ ಅಲ್ಲಿನ ರಾಜಕಾರಣವೋ ಏನೋ ಗೊತ್ತಿಲ್ಲ. ಮಾತುಕತೆಗೆ ಸಿದ್ಧವಿಲ್ಲಎಂದಿದ್ದಾರೆ. ಮಾತುಕತೆ ಮೂಲಕವೇ ಬಗೆಹರಿಸುವುದಕ್ಕೆ ಮೊದಲ ಆದ್ಯತೆ ನೀಡುತ್ತೇವೆ. ಈ ಸಂಬಂಧ ಜಲಶಕ್ತಿ ಸಚಿವರ ಜತೆ ಚರ್ಚಿಸುತ್ತೇವೆ. ನೋಟಿಫಿಕೇಶನ್‌ ಹೊರಡಿಸಲು ಕೇಂದ್ರಕ್ಕೆ ಮನವಿ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಕೋರಿದ್ದೇವೆ. ಅವರು ಕೂಡ ಸಹಮತ ವ್ಯಕ್ತಪಡಿಸಿದ್ದಾರೆ'' ಎಂದು ಜೋಶಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ