ಆ್ಯಪ್ನಗರ

ಹುಬ್ಬಳ್ಳಿ-ಧಾರವಾಡ ಬೈಪಾಸ್‌ ಬಳಿ ಭೀಕರ ಅಪಘಾತ: 8 ಮಂದಿ ಸಾವು

ಭೀಕರ ಅಪಘಾತ ಸಂಭವಿಸಿದ ನಂತರ ಹುಬ್ಬಳ್ಳಿ-ಧಾರವಾಡ ಬೈಪಾಸ್‌ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು ಆಗಮಿಸಿ ಎಲ್ಲವನ್ನೂ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Vijaya Karnataka Web 24 May 2022, 8:45 am
ಹುಬ್ಬಳ್ಳಿ: ಹುಬ್ಬಳ್ಳಿ: ಧಾರವಾಡದ ಬಾಡ ಕ್ರಾಸ್‌ನಲ್ಲಿ ನಡೆದ ಅಪಘಾತ ಪ್ರಕರಣ ಮಾಸುವ ಮುನ್ನವೇ ಇದೀಗ ಹುಬ್ಬಳ್ಳಿ ಹೊರವಲಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
Vijaya Karnataka Web ಅಪಘಾತ
ಅಪಘಾತ


ತಾರಿಹಾಳ ಬೈಪಾಸ್‌ನ ಧಾರಾವತಿ ದೇವಸ್ಥಾನದ ಬಳಿ ರಾತ್ರಿ 1.30ರ ವೇಳೆ ಸರಣಿ ಅಪಘಾತ ನಡೆದಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಕೆಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಕೊಲ್ಲಾಪುರದಿಂದ ಬೆಂಗಳೂರಿನತ್ತ ಖಾಸಗಿ ಬಸ್‌ ಹೊರಟ್ಟಿತ್ತು. ಬೆಂಗಳೂರಿನಿಂದ ಪುಣೆಯ ಕಡೆಗೆ ಲಾರಿ ಪ್ರಯಾಣ ಬೆಳೆಸಿತ್ತು. ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆಯಲ್ಲಿ ಎರಡು ಮುಖಾಮುಖಿ ಡಿಕ್ಕಿ ಆಯಿತು.

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ವೇಳಾಪಟ್ಟಿ ಪರಿಷ್ಕರಣೆ!

‘ಸದ್ಯದ ಮಾಹಿತಿ ಪ್ರಕಾರ, ಮುಂದೆ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ನ್ಯಾಷನಲ್ ಟ್ರಾವೆಲ್ಸ್ ಟೂರಿಸ್ಟ್ ಬಸ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು.

ಸ್ಥಳಕ್ಕೆ ಉತ್ತರ ಸಂಚಾರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತರ ಪೈಕಿ ನಾಲ್ವರನ್ನು ಬಸ್ ಚಾಲಕರಾದ ಅತಾವುಲ್ಲಾ ಹಾಗೂ ನಾಗರಾಜ, ಚಿಕ್ಕೋಡಿಯ ಬಾಬುಸಾಹೇಬ್ (55), ಮೈಸೂರು ಮೂಲದ ಮಹ್ಮದ್ ದಯ್ಯಾನ್ (17) ಎಂದು ಗುರುತಿಸಲಾಗಿದೆ. ಇನ್ನುಳಿದವರ ಹೆಸರು ಗೊತ್ತಾಗಬೇಕಿದೆ. 25 ಮಂದಿ ಕಿಮ್ಸ್‌ನಲ್ಲಿ ದಾಖಲಾಗಿದ್ದಾರೆ. ಐವರ ಸ್ಥಿತಿ ಚಿಂತಾಜನಕವಾಗಿದೆ‌ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ತಿಳಿಸಿದರು.

ಸಾವಿನ ರಹದಾರಿ
ಹುಬ್ಬಳ್ಳಿ - ಧಾರವಾಡ ಬೈಪಾಸ್ ರಸ್ತೆ ಸಾವಿನ ಹೆದ್ದಾರಿ ಎಂದು ಬಿಂಬಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯೂ ಆಗಿರೋ ಇಲ್ಲಿ, ಆಗಾಗ ಅಪಘಾತಗಳು ಸಂಭವಿಸುತ್ತಲೇ ಇರುತ್ತೆ. ಈ ಹಿನ್ನೆಲೆಯಲ್ಲಿ ಇದನ್ನು ದಶ ಪಥ ರಸ್ತೆಯನ್ನಾಗಿಸೋಕೆ ಶಿಲನ್ಯಾಸ ನೆರವೇರಿಸಲಾಗಿತ್ತು. ಇದರ ಬೆನ್ನ ಹಿಂದೆಯೇ ಇದೇ ರಸ್ತೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನೋಡಿದರೆ ಇದಕ್ಕೆ ಕೊನೆ ಇಲ್ವಾ ಎಂಬುದು ಕೇಳಿ ಬರುತ್ತದೆ.

ನಾವೇ ಶವ ಸಾಗಿಸಿದೆವು

ಇನ್ನು ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿರುವ ಲಾರಿ ನೋಡಿದರೆ ಎಂತ ಅಪಘಾತ ನಮಗೆ ಹೆದರಿಕೆಯಾಯಿತು . ಸ್ಥಳಕ್ಕೆ ಇನ್ನು ಯಾರು ಬಂದಿರಲಿಲ್ಲ. ಪೊಲೀಸರಿಗೆ ನಾವೇ ಮಾಹಿತಿ ನೀಡಿದವು. ನಂತರ ಸಾವನ್ನಪ್ಪಿದವರ ಶವ ಹುಬ್ಬಳ್ಳಿ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಗೆ ಶವ ಸಾಗಿಸಿದೆವು ಎಂದು ಸ್ಥಳೀಯ ನಿಂಗಪ್ಪ ಮಾಹಿತಿ ನೀಡಿದರು.

ಅಪಘಾತ ಸಂಭವಿಸುತ್ತಿದ್ದ ಹಾಗೇ ಬೈಪಾಸ್ ಹೆದ್ದಾರಿ ಬಂದ್ ಆಗಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸ್ ಕಮೀಷನರ್ ಲಾಬುರಾಮ್ ಅಪಘಾತದಲ್ಲಿ ಗಾಯಗೊಂಡ 26 ಜನರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಖಾಸಗಿ ಬಸ್‌ ನ್ಯಾಷನಲ್‌ ಟ್ರಾವೆಲ್ಸ್‌ಗೆ ಸೇರಿದ್ದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

7 ಬಾರಿ ಗೆದ್ದಿರುವ ಗುರುವನ್ನು ಬೀಳಿಸಲು ಶಿಷ್ಯನ ಪಣ..! ಮೇಲ್ಮನೆ ಅಖಾಡದಲ್ಲಿ ಹೊರಟ್ಟಿ V/S ಗಡದಿನ್ನಿ..!

ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ