ಆ್ಯಪ್ನಗರ

ಪರಿಸರ ರಕ್ಷಣೆ ಶಪಥ ಮಾಡಿ

ಧಾರವಾಡ : ಜಗತ್ತಿನಾದ್ಯಂತ ದಿನನಿತ್ಯ ಪರಿಸರ ನಾಶಗೊಳಿಸುವ ಕಾರ್ಯ ಅವ್ಯಾಹತವಾಗಿ ನಡೆಯುತ್ತಿದ್ದು ಜಾಗತಿಕ ತಾಪಮಾನ ಏರುತ್ತಾ ವಾತಾವರಣದಲ್ಲಿ ಅಸಮತೋಲನ ಉಂಟಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಕೆ. ಭೂತೆ ಕಳವಳ ವ್ಯಕ್ತಪಡಿಸಿದರು.

Vijaya Karnataka 6 Jun 2019, 5:00 am
ಧಾರವಾಡ : ಜಗತ್ತಿನಾದ್ಯಂತ ದಿನನಿತ್ಯ ಪರಿಸರ ನಾಶಗೊಳಿಸುವ ಕಾರ್ಯ ಅವ್ಯಾಹತವಾಗಿ ನಡೆಯುತ್ತಿದ್ದು ಜಾಗತಿಕ ತಾಪಮಾನ ಏರುತ್ತಾ ವಾತಾವರಣದಲ್ಲಿ ಅಸಮತೋಲನ ಉಂಟಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಕೆ. ಭೂತೆ ಕಳವಳ ವ್ಯಕ್ತಪಡಿಸಿದರು.
Vijaya Karnataka Web DRW-05RANGA01
ಧಾರವಾಡ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್‌)ದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ-2019 ರ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶ ಈಶಪ್ಪ ಕೆ. ಭೂತೆ ಸಸಿಗೆ ನೀರು ಹಾಕಿದರು.


ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್‌)ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ವಿವಿಧ ಇಲಾಖೆಗಳು,ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ-2019 ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗಿಡ ಮರ ರಕ್ಷಿಸುವ, ಬೆಳೆಸುವ ಹೊಣೆಯನ್ನು ಇಡೀ ಮಾನವ ಸಂಕುಲ ಹೊತ್ತುಕೊಳ್ಳಬೇಕಾಗಿದೆ. ಪರಿಸರ ಸಂರಕ್ಷ ಣೆಯ ಶಪಥ ಮಾಡಿ ಅನುಷ್ಠಾನಗೊಳಿಸುವ ಕಾರ್ಯ ತುರ್ತಾಗಿ ಆಗಬೇಕಾಗಿದ್ದು ಈ ನಿಟ್ಟಿನಲ್ಲಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗೋಣ ಎಂದು ಹೇಳಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್‌.ಎಸ್‌.ಚಿಣ್ಣನ್ನವರ್‌,ಉಪ ಅರಣ್ಯ ಸಂರಕ್ಷ ಣಾಧಿಕಾರಿ ಮಹೇಶಕುಮಾರ್‌ ಮಾತನಾಡಿ, ಒಟ್ಟು ಭೂ ಪ್ರದೇಶದ ಶೇ.33 ರಷ್ಟು ಅರಣ್ಯ ಇರಬೇಕು. ಆದರೆ ನಮ್ಮ ಜಿಲ್ಲೆಯಲ್ಲಿ ಕೇವಲ ಶೇ.9 ರಷ್ಟು ಮಾತ್ರ ಅರಣ್ಯ ಪ್ರದೇಶವಿರುವದು ಗಂಭೀರವಾಗಿ ಎಲ್ಲರೂ ಆಲೋಚಿಸಬೇಕಾದ ಅಗತ್ಯವಿದೆ ಎಂದರು.

ಅಧ್ಯಕ್ಷ ತೆ ವಹಿಸಿದ್ದ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ಪ್ರತಿ ಸೋಮವಾರ ಸರಕಾರದ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಕಾರದ ಅಥವಾ ಸ್ವಂತ ವಾಹನ ಬಳಸದೇ ಕಾಲ್ನಡಿಗೆಯಿಂದ ಇಲ್ಲವೇ ಸಾರ್ವಜನಿಕ ಬಸ್‌ಗಳ ಮೂಲಕ ಕಚೇರಿಗಳಿಗೆ ಆಗಮಿಸಬೇಕು ಎಂಬ ನಿರ್ಧಾರ ಜಿಲ್ಲಾಡಳಿತ ತೆಗೆದುಕೊಂಡಿದೆ, ಇನ್ನು ಮುಂದೆ ಈ ಕಾರ್ಯ ಆಚರಣೆಗೆ ಬರಲಿದೆ ಎಂದರು. ಪ್ಲಾಸ್ಟಿಕ್‌ ಬಳಕೆ ಸಾಧ್ಯವಾದಷ್ಟೂ ಕಡಿಮೆ ಮಾಡಲು ನಾವು ಮುಂದಾಗಬೇಕು.ಜೂನ್‌ 11 ರಂದು ಸ್ವಚ್ಛ ಮೇವ ಜಯತೆ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಒಂದು ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿ.ಡಿ.ಕರ್ಪೂರಮಠ, ಧಾರವಾಡ ಗ್ರೋಥ್‌ ಸೆಂಟರ್‌ ನ ಶಿರೀಷ್‌ ಉಪ್ಪಿನ, ವಕೀಲರ ಸಂಘದ ಅಧ್ಯಕ್ಷ ಆರ್‌.ಯು.ಬೆಳ್ಳಕ್ಕಿ ಮಾತನಾಡಿದರು.

ಇದಕ್ಕೂ ಮುನ್ನ ಬೇಲೂರು ಕೈಗಾರಿಕಾ ಪ್ರದೇಶದ ಕೆರೆ ಆವರಣದಲ್ಲಿ ಗಣ್ಯರು ನೂರಾರು ಸಸಿಗಳನ್ನು ನೆಟ್ಟ ನಿರುಣಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ,ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷ ಣಾಧಿಕಾರಿ ಇ.ಎಸ್‌.ಡಿಸೋಜ, ಸಿಡಾಕ್‌ ನಿರ್ದೇಶಕ ಬಸವರಾಜ ಗೋಟೂರ, ಬೇಲೂರು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಶ್ರೀಕಾಂತ್‌ ಹುಲಮನಿ ಸೇರಿದಂತೆ ಇತರರು ಇದ್ದರು.

ಅನೀಲ ಮೇತ್ರಿ ತಂಡ ಹಾಗೂ ಅನಾಥ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಂಕರ ಕುಂಬಿ ಸ್ವಾಗತಿಸಿದರು. ಹಿರಿಯ ಪರಿಸರ ಅಧಿಕಾರಿ ವಿಜಯಕುಮಾರ್‌ ಕಡಕ್‌ ಭಾವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಎಚ್‌.ನಾಯಕ ನಿರೂಪಿಸಿದರು.ಉಪ ಪರಿಸರ ಅಧಿಕಾರಿ ಶೋಭಾ ಪೋಳ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ