ಆ್ಯಪ್ನಗರ

ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿ

ಧಾರವಾಡ: ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರಹಾಕಲು ಅವಕಾಶ ಕಲ್ಪಿಸಬೇಕು. ಈ ಉದ್ದೇಶದಿಂದ ಕಾಲೇಜಿನಲ್ಲಿಪ್ರಯುಕ್ತಿ- 2020 ಕಾರ್ಯಕ್ರಮ ಆಚರಿಸಲಾಗುತ್ತದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಜೆಎಸ್‌ಎಸ್‌ ಕಾರ್ಯದರ್ಶಿ ಡಾ. ನ. ವಜ್ರಕುಮಾರ ಹೇಳಿದರು.

Vijaya Karnataka 23 Feb 2020, 5:00 am
ಧಾರವಾಡ: ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರಹಾಕಲು ಅವಕಾಶ ಕಲ್ಪಿಸಬೇಕು. ಈ ಉದ್ದೇಶದಿಂದ ಕಾಲೇಜಿನಲ್ಲಿಪ್ರಯುಕ್ತಿ- 2020 ಕಾರ್ಯಕ್ರಮ ಆಚರಿಸಲಾಗುತ್ತದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಜೆಎಸ್‌ಎಸ್‌ ಕಾರ್ಯದರ್ಶಿ ಡಾ. ನ. ವಜ್ರಕುಮಾರ ಹೇಳಿದರು.
Vijaya Karnataka Web make room for talent show
ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿ


ಇಲ್ಲಿಯ ಜೆಎಸ್‌ಎಸ್‌ ಬನಶಂಕರಿ ಕಲಾ, ವಾಣಿಜ್ಯ ಮತ್ತು ಎಸ್‌.ಕೆ. ಗುಬ್ಬಿ ಜ್ಞಾನ ಮಹಾದ್ಯಾಲಯದ 75ನೇ ವರ್ಷದ (ಅಮೃತಮಹೋತ್ಸವ)ನಿಮಿತ್ತ ಶನಿವಾರ ಹಮ್ಮಿಕೊಂಡಿರುವ ಪ್ರಯುಕ್ತಿ- 2020ರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಲ್ಲಿನಡೆಯುವ ಪ್ರತಿಯೊಂದು ಕಾರ್ಯಕ್ರಮಗಳಿಗೆ ಅದರದೇ ಆದ ವಿಶಿಷ್ಟತೆ ಇರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಶಿಸ್ತಿನಿಂದ ವರ್ತಿಸುವುದು ಅಗತ್ಯವಿದೆ ಎಂದರು.

ವಿತ್ತಾಧಿಕಾರಿ ಡಾ. ಅಜಿತ ಪ್ರಸಾದ್‌ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಯೊಂದು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಪಾಲ್ಗೊಳ್ಳಬೇಕು. ಅದಕ್ಕೆ ಜೆಎಸ್‌ಎಸ್‌ ಮಹಾವಿದ್ಯಾಲಯ ಪ್ರೋತ್ಸಾಹ ನೀಡುತ್ತದೆ ಎಂದರು. ಡಾ. ಜಿ. ಕೃಷ್ಣಮೂರ್ತಿ, ಡಾ. ಸೂರಜ್‌ ಜೈನ, ಡಾ. ಚಿತ್ರಾ ದೈಜೋಡೆ, ಡಾ. ಗಾಯತ್ರಿ ಭಟ್‌, ಡಾ. ಎಂ.ಸಿ. ಕೃಷ್ಣಮೂರ್ತಿ, ಡಾ. ಎಂ.ಎನ್‌. ರಾಶೀನಕರ್‌, ಡಾ. ಜಿನದತ್ತ ಹಡಗಲಿ, ಡಾ. ಶೌಖತ್‌ ಅಲಿ, ಡಾ. ಇಂದು ಪಂಡಿತ, ಡಾ. ಜಿ.ಎಂ. ಖಾಜಿ, ಜಯಶ್ರೀ ಹೆಗಡೆ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ