ಆ್ಯಪ್ನಗರ

ಹುಬ್ಬಳ್ಳಿ: ಆಸ್ಪತ್ರೆ ಆವರಣದಲ್ಲಿ ಎಂಜಲು ಉಗಿದವನ ವಶಕ್ಕೆ ಪಡೆದ ಪೊಲೀಸರು

ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದು, ಆತ ಆಟೋ ಚಾಲಕ ಎಂದು ತಿಳಿದು ಬಂದಿದೆ. ಬಳಿಕ ಕಿಮ್ಸ್ ಗೆ ಕರೆದೊಯ್ದು ತಪಾಸಣೆ ಮಾಡಲಾಯಿತು. ಆತನಿಗೆ ಕೊರೊನಾ ಲಕ್ಷಣಗಳು ಇಲ್ಲ

Vijaya Karnataka Web 4 Apr 2020, 4:54 pm
ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರದಲ್ಲಿರುವ ನಿವೃತ್ತ ಸೈನಿಕರ ಆಸ್ಪತ್ರೆಗೆ ತೆರಳಿದ ವ್ಯಕ್ತಿ ಅಲ್ಲಿನ ಆವರಣದಲ್ಲಿ ಎಂಜಲು ಉಗುಳಿದ ಆರೋಪದ ಮೇಲೆ ಆತನನ್ನು ಪೊಲೀಸರು ವಶಕ್ಕೆ ಪಡೆದು ಕಿಮ್ಸ್ ಗೆ ಕರೆದೊಯ್ದು ಕೊರೊನಾ ಕೊರೊನಾ ತಪಾಸಣೆ ನಡೆಸಿದ್ದಾರೆ.
Vijaya Karnataka Web ಪೊಲೀಸ್‌
ಪೊಲೀಸ್‌


ಇಲ್ಲಿನ ಪ್ರಕಾಶ ಕಾಲೊನಿ ನಿವಾಸಿ ಇನಾಯಿತುಲ್ಲಾ ಪಠಾಣ (50) ಎಂಬಾತ ಆಸ್ಪತ್ರೆಗೆ ತೆರಳಿದ್ದಾನೆ. ಅಲ್ಲಿಂದ ಹೊರಗೆ ಬಂದು ಆಸ್ಪತ್ರೆಯ ‌ಆವರಣದಲ್ಲಿ ಎಂಜಲು ಉಗುಳಿದ್ದಾನೆ. ಅದರಿಂದ ಅನುಮಾನಗೊಂಡ ಅಲ್ಲಿನ ಸಿಬ್ಬಂದಿ ಹಾಗೂ ಚಿಕಿತ್ಸೆಗೆ ಆಗಮಿಸಿದ್ದವರು ಕೂಡಲೇ ಕೇಶ್ವಾಪುರ ಠಾಣೆಗೆ ಮಾಹಿತಿ ನೀಡಿದ್ದಾರೆ.

ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದು, ಆತ ಆಟೋ ಚಾಲಕ ಎಂದು ತಿಳಿದು ಬಂದಿದೆ. ಬಳಿಕ ಕಿಮ್ಸ್ ಗೆ ಕರೆದೊಯ್ದು ತಪಾಸಣೆ ಮಾಡಲಾಯಿತು. ಆತನಿಗೆ ಕೊರೊನಾ ಲಕ್ಷಣಗಳು ಇಲ್ಲ ಎಂದು ಆಸ್ಪತ್ರೆಯ ವೈದ್ಯರು ವರದಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್‌ ಸುರೇಶ್ ಕುಂಬಾರ ವಿಜಯ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ