ಆ್ಯಪ್ನಗರ

ಮಂದಿರ ನಿರ್ಮಾಣ ವಿಳಂಬ ಬೇಡ: ಮುತಾಲಿಕ್‌

ಧಾರವಾಡ : ಲೋಕಸಭೆ ಚುನಾವಣೆ ಪೂರ್ವದಲ್ಲಿ ರಾಮ ಮಂದಿರ ನಿರ್ಮಾಣ ಪ್ರಕ್ರಿಯೆ ಆರಂಭವಾಗಬೇಕು. ಇಲ್ಲದಿದ್ದರೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದ್ರೋಹ ಮಾಡಿದಂತಾಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಗುಡುಗಿದ್ದಾರೆ.

Vijaya Karnataka 1 Dec 2018, 5:00 am
ಧಾರವಾಡ : ಲೋಕಸಭೆ ಚುನಾವಣೆ ಪೂರ್ವದಲ್ಲಿ ರಾಮ ಮಂದಿರ ನಿರ್ಮಾಣ ಪ್ರಕ್ರಿಯೆ ಆರಂಭವಾಗಬೇಕು. ಇಲ್ಲದಿದ್ದರೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದ್ರೋಹ ಮಾಡಿದಂತಾಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಗುಡುಗಿದ್ದಾರೆ.
Vijaya Karnataka Web DRW-30RANGA03


ಇಲ್ಲಿನ ನರೇಂದ್ರ ಬೈಪಾಸ್‌ ಬಳಿ ಅಕ್ರಮ ಗೋಮಾಂಸ ಸಾಗಣೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರ ಯೋಗಕ್ಷೇಮವನ್ನು ಶುಕ್ರವಾರ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

''30 ವರ್ಷಗಳಿಂದ ನಿರಂತರವಾಗಿ ರಾಮ ಮಂದಿರ ನಿರ್ಮಾಣಕ್ಕೆ ಹೋರಾಟ ಮಾಡಲಾಗುತ್ತಿದೆ. ಇದರಿಂದ ಬಿಜೆಪಿಗೆ ಸಾಕಷ್ಟು ಲಾಭವಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ 100 ಕೋಟಿ ಹಿಂದೂಗಳ ಒತ್ತಾಸೆಯಿದೆ. ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆ ಪೂರ್ವದಲ್ಲಿಯೇ ಮಂದಿರ ನಿರ್ಮಾಣ ಕಾರ್ಯ ಆರಂಭಿಸಬೇಕು'' ಎಂದು ಒತ್ತಾಯಿಸಿದರು.

''ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಆಡಳಿತದ ಅವಧಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡದ ಕಾರಣ ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲನ್ನು ಅನುಭವಿಸಿತು. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಮಂದಿರ ನಿರ್ಮಾಣಕ್ಕೆ ಕೇಂದ್ರ ಸರಕಾರ ಮುಂದಾಗಬೇಕು'' ಎಂದು ತಿಳಿಸಿದರು.

ಪೊಲೀಸ್‌ ವಿರುದ್ಧ ಕಿಡಿ : ''ಅಕ್ರಮ ಗೋಮಾಂಸ ಸಾಗಣೆ ವಿಷಯ ಪೊಲೀಸರಿಗಿಂತಲೂ ಮೊದಲು ಹಿಂದೂ ಕಾರ್ಯಕರ್ತರಿಗೆ ತಿಳಿಯುತ್ತದೆ. ಪೊಲೀಸರು ಏನು ಮಾಡುತ್ತಿರುತ್ತಾರೆ?'' ಎಂದು ಪೊಲೀಸ್‌ ಇಲಾಖೆ ವಿರುದ್ಧ ಹರಿಹಾಯ್ದರು.

''ಅಕ್ರಮವಾಗಿ ಗೋಮಾಂಸ ಸಾಗಿಸುತ್ತಾರೆ. ಇಂಥ ಅಕ್ರಮ ಚಟುವಟಿಕೆ ತಡೆಯಬೇಕಾದ ಪೊಲೀಸರೇ ಅಕ್ರಮ ಇಲ್ಲ, ಪರವಾನಗಿ ಇದೆ ಎನ್ನುತ್ತಿದ್ದಾರೆ. ಪರವಾನಗಿ ಇದ್ದರೆ ತೋರಿಸಬೇಕಲ್ಲವೆ. ಪರವಾನಗಿ ಇದ್ದರೆ ಕಾರುಗಳಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಏಕೆ ಗೋಮಾಂಸ ಸಾಗಿಸುತ್ತಿದ್ದರು? ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವುದು ನಿಲ್ಲಬೇಕು'' ಎಂದು ಮುತಾಲಿಕ್‌ ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ