ಆ್ಯಪ್ನಗರ

ಪತ್ನಿ ತವರಿಗೆ ಹೋಗಿದ್ದಕ್ಕೆ ಪತಿ ನೇಣಿಗೆ

ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಆಳ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Karnataka 10 Mar 2019, 8:30 am
ಧಾರವಾಡ: ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಮಾನಸಿಕವಾಗಿ ನೊಂದ ಪತಿ ವಿಷಕಾರಕ ಎಣ್ಣೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳ್ನಾವರ ತಾಲೂಕಿನ ಕಾಶೆನಟ್ಟಿ ಗ್ರಾಮದಲ್ಲಿ ನಡೆದಿದೆ.
Vijaya Karnataka Web Dead Body


ಕಾಶೆನಟ್ಟಿ ಗ್ರಾಮದ ಮಂಜುನಾಥ ಗೇನಪ್ಪನವರ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ಎರಡು ವರ್ಷದಿಂದ ಪತ್ನಿ ಸಂಸಾರ ಮಾಡಲು ನಿರಾಕರಿಸಿ ತವರು ಮನೆಗೆ ಹೋಗಿದ್ದರಿಂದ ನೊಂದ ಮಂಜುನಾಥ ಮಾ.8 ರಂದು ಬೆಳಿಗ್ಗೆ ಹೊಲದಲ್ಲಿ ವಿಷಕಾರಕ ಎಣ್ಣೆ ಸೇವಿಸಿದ್ದಾನೆ. ಈ ವೇಳೆ ಅಸ್ವಸ್ಥಗೊಂಡಿದ್ದ ಈತನನ್ನು ಚಿಕಿತ್ಸೆಗಾಗಿ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಆಳ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ