ಧಾರವಾಡ :ಲಾರಿಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸಲಾಗುತ್ತಿದೆ ಎಂಬ ಅನುಮಾನ ವ್ಯಕ್ತಪಡಿಸಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಲಾರಿ ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ನಗರದ ಕಲಘಟಗಿ ರಸ್ತೆಯಲ್ಲಿ ನಡೆದಿದೆ.
ಇಲ್ಲಿನ ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜು ಬಳಿ ಲಾರಿಯಲ್ಲಿ ಮೂಳೆಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಕೆಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ ಕಲಘಟಗಿ ರಸ್ತೆ ಬಳಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಲಾರಿಯನ್ನು ತಡೆಯುತ್ತಿದ್ದಂತೆ ಲಾರಿ ಮಾಲೀಕ ಪರಾರಿಯಾಗಿದ್ದಾನೆ. ನಂತರ ಲಾರಿ ಚಾಲಕ ಹಾಗೂ ಕ್ಲೀನರ್ನನ್ನು ಕಾರ್ಯಕರ್ತರು ವಶಕ್ಕೆ ಪಡೆದು ವಿದ್ಯಾಗಿರಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಂತರ ಸ್ಥಳಕ್ಕೆ ಬಂದ ವಿದ್ಯಾಗಿರಿ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದರು. ನಂತರ ದಾಖಲೆ ಪರಿಶೀಲಿಸಿ ಬಿಟ್ಟು ಕಳುಹಿಸಿದ್ದಾರೆ.
''ಲಾರಿಯಲ್ಲಿ ಯಾವುದೇ ಮಾಂಸ ಸಾಗಾಟ ಮಾಡುತ್ತಿರಲಿಲ್ಲ. ಮೂಳೆಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಅವರ ಮೂಳೆಸಾಗಾಟಕ್ಕೆ ಸಂಬಂಧಿಸಿದ ಲೈಸನ್ಸ್ ಇದ್ದ ಹಿನ್ನೆಲೆ ವಿಚಾರಣೆ ಮಾಡಿ ಕಳುಹಿಸಲಾಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ''ಎಂದು ವಿದ್ಯಾಗಿರಿ ಠಾಣೆ ಇನ್ಸ್ಪೆಕ್ಟರ್ ಅಲ್ತಾಪ್ ಹುಸೇನ್ ಮುಲ್ಲಾ ವಿಕಕ್ಕೆ ತಿಳಿಸಿದ್ದಾರೆ.
ಇಲ್ಲಿನ ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜು ಬಳಿ ಲಾರಿಯಲ್ಲಿ ಮೂಳೆಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಕೆಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ ಕಲಘಟಗಿ ರಸ್ತೆ ಬಳಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಲಾರಿಯನ್ನು ತಡೆಯುತ್ತಿದ್ದಂತೆ ಲಾರಿ ಮಾಲೀಕ ಪರಾರಿಯಾಗಿದ್ದಾನೆ. ನಂತರ ಲಾರಿ ಚಾಲಕ ಹಾಗೂ ಕ್ಲೀನರ್ನನ್ನು ಕಾರ್ಯಕರ್ತರು ವಶಕ್ಕೆ ಪಡೆದು ವಿದ್ಯಾಗಿರಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಂತರ ಸ್ಥಳಕ್ಕೆ ಬಂದ ವಿದ್ಯಾಗಿರಿ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದರು. ನಂತರ ದಾಖಲೆ ಪರಿಶೀಲಿಸಿ ಬಿಟ್ಟು ಕಳುಹಿಸಿದ್ದಾರೆ.
''ಲಾರಿಯಲ್ಲಿ ಯಾವುದೇ ಮಾಂಸ ಸಾಗಾಟ ಮಾಡುತ್ತಿರಲಿಲ್ಲ. ಮೂಳೆಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಅವರ ಮೂಳೆಸಾಗಾಟಕ್ಕೆ ಸಂಬಂಧಿಸಿದ ಲೈಸನ್ಸ್ ಇದ್ದ ಹಿನ್ನೆಲೆ ವಿಚಾರಣೆ ಮಾಡಿ ಕಳುಹಿಸಲಾಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ''ಎಂದು ವಿದ್ಯಾಗಿರಿ ಠಾಣೆ ಇನ್ಸ್ಪೆಕ್ಟರ್ ಅಲ್ತಾಪ್ ಹುಸೇನ್ ಮುಲ್ಲಾ ವಿಕಕ್ಕೆ ತಿಳಿಸಿದ್ದಾರೆ.