ಧಾರವಾಡ : ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳನ್ನು ಕೃಷಿ ಸಚಿವ ಎನ್.ಹೆಚ್. ಶಿವಶಂಕರ ರೆಡ್ಡಿ ಸೋಮವಾರ ವೀಕ್ಷಿಸಿ ರೈತರೊಂದಿಗೆ ಚರ್ಚಿಸಿದರು. ನಂತರ ಹೆಬ್ಬಳ್ಳಿ ಗ್ರಾಪಂಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿದ ಅವರು, ಹೊಂಡಗಳಿಗೆ ಸುರಕ್ಷ ತೆ ದೃಷ್ಟಿಯಿಂದ ನಿರ್ಮಿಸಿರುವ ತಂತಿ ಬೇಲಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಹುಬ್ಬಳ್ಳಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿರುವ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಪ್ತು ನಿಗಮ ನಿಯಮಿತ ಶೀತಲೀಕರಣ ಘಟಕಕ್ಕೆ ಭೇಟಿ ನೀಡಿ ರೈತರಿಗೆ ಒಣ ಮೆಣಸಿನಕಾಯಿ, ಹತ್ತಿ, ಮಾವು ಇತ್ಯಾದಿ ಬೆಳೆಗಳನ್ನು ರಫ್ತು ಮಾಡಲು ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.
ಈರುಳ್ಳಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ರೈತರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಶಾಸಕ ಅಮೃತ ಅ.ದೇಸಾಯಿ, ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಬಿ. ಮಟ್ಟಿ, ತಾಪಂ ಸದಸ್ಯ ಮಲ್ಲಪ್ಪ ಭಾವಿಕಟ್ಟಿ, ಹೆಬ್ಬಳ್ಳಿ ಗ್ರಾಪಂ ಅಧ್ಯಕ್ಷೆ ರತ್ನವ್ವ ಸುಣಗಾರ, ಹೆಬ್ಬಳ್ಳಿ ಗ್ರಾಪಂ ಉಪಾಧ್ಯಕ್ಷ ರಮೇಶ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಸಿ.ಜಿ. ಮೇತ್ರಿ ಉಪಸ್ಥಿತರಿದ್ದರು.
ನಂತರ ಹುಬ್ಬಳ್ಳಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿರುವ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಪ್ತು ನಿಗಮ ನಿಯಮಿತ ಶೀತಲೀಕರಣ ಘಟಕಕ್ಕೆ ಭೇಟಿ ನೀಡಿ ರೈತರಿಗೆ ಒಣ ಮೆಣಸಿನಕಾಯಿ, ಹತ್ತಿ, ಮಾವು ಇತ್ಯಾದಿ ಬೆಳೆಗಳನ್ನು ರಫ್ತು ಮಾಡಲು ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.
ಈರುಳ್ಳಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ರೈತರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಶಾಸಕ ಅಮೃತ ಅ.ದೇಸಾಯಿ, ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಬಿ. ಮಟ್ಟಿ, ತಾಪಂ ಸದಸ್ಯ ಮಲ್ಲಪ್ಪ ಭಾವಿಕಟ್ಟಿ, ಹೆಬ್ಬಳ್ಳಿ ಗ್ರಾಪಂ ಅಧ್ಯಕ್ಷೆ ರತ್ನವ್ವ ಸುಣಗಾರ, ಹೆಬ್ಬಳ್ಳಿ ಗ್ರಾಪಂ ಉಪಾಧ್ಯಕ್ಷ ರಮೇಶ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಸಿ.ಜಿ. ಮೇತ್ರಿ ಉಪಸ್ಥಿತರಿದ್ದರು.