ಆ್ಯಪ್ನಗರ

ಸಚಿವ ಖರ್ಗೆ ಕ್ಷಮೆಯಾಚಿಸಲಿ: ಸಂಸದ ಜೋಶಿ

ಹುಬ್ಬಳ್ಳಿ : ರಾಜ್ಯದಲ್ಲಿ ಶೋಕಾಚರಣೆ ಇರುವ ಸಂದರ್ಭದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ದೇಶ ವಿರೋಧಿ ಹೇಳಿಕೆ ನೀಡಿದ ಕನ್ಹಯ್ಯ ಅವರನ್ನು ಕರೆ ತಂದು ಕಾರ್ಯಕ್ರಮ ಮಾಡಿದ್ದು ಖಂಡನೀಯ. ಕೂಡಲೇ ಪ್ರಿಯಾಂಕ ಖರ್ಗೆ ರಾಜ್ಯದ ಜನತೆಗೆ ಕ್ಷಮೆಯಾಚಿಸಬೇಕು ಎಂದು ಸಂಸದ ಪ್ರಹ್ಲಾದ ಜೋಶಿ ಆಗ್ರಹಿಸಿದರು.

Vijaya Karnataka 24 Jan 2019, 5:14 pm
ಹುಬ್ಬಳ್ಳಿ : ರಾಜ್ಯದಲ್ಲಿ ಶೋಕಾಚರಣೆ ಇರುವ ಸಂದರ್ಭದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ದೇಶ ವಿರೋಧಿ ಹೇಳಿಕೆ ನೀಡಿದ ಕನ್ಹಯ್ಯ ಅವರನ್ನು ಕರೆ ತಂದು ಕಾರ್ಯಕ್ರಮ ಮಾಡಿದ್ದು ಖಂಡನೀಯ. ಕೂಡಲೇ ಪ್ರಿಯಾಂಕ ಖರ್ಗೆ ರಾಜ್ಯದ ಜನತೆಗೆ ಕ್ಷಮೆಯಾಚಿಸಬೇಕು ಎಂದು ಸಂಸದ ಪ್ರಹ್ಲಾದ ಜೋಶಿ ಆಗ್ರಹಿಸಿದರು.
Vijaya Karnataka Web minister kharge ask apologizes mp joshi
ಸಚಿವ ಖರ್ಗೆ ಕ್ಷಮೆಯಾಚಿಸಲಿ: ಸಂಸದ ಜೋಶಿ


ನಗರದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಇದು ಅಕ್ಷ ಮ್ಯ ಅಪರಾಧವಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದರು.

''ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರು ಪ್ರಿಯಾಂಕ ಖರ್ಗೆ ಹೇಳಿಕೆ ಬಗ್ಗೆ ಕ್ಷಮೆ ಕೇಳಬೇಕು. ಅಲ್ಲದೆ, ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಈ ಕುರಿತು ರಾಜ್ಯದ ಜನತೆಗೆ ಉತ್ತರ ನೀಡಬೇಕು'' ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ ಡ್ರಾಮಾ

''ಶಾಸಕರಾದ ಆನಂದಸಿಂಗ್‌ ಹಾಗೂ ಗಣೇಶ ನಡುವಿನ ಗಲಾಟೆ ಪ್ರಕರಣ ಕಾಂಗ್ರೆಸ್‌ ಪಕ್ಷದ ದೊಡ್ಡ ಡ್ರಾಮಾ ಆಗಿದೆ. ಕಾಂಗ್ರೆಸ್‌ ಶಾಸಕರೆಲ್ಲರನ್ನೂ ರೆಸಾರ್ಟ್‌ಗೆ ಕರೆದೊಯ್ದು ಶಾಸಕರು ಪರಸ್ಪರ ಬಡಿದಾಡಿಕೊಳ್ಳುವಂತಹ ವಾತಾವರಣ ನಿರ್ಮಿಸಿದೆ. ನಂತರ ಸ್ವಪಕ್ಷೀಯ ಶಾಸಕರ ವಿರುದ್ಧ 307 ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಶಾಸಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು'' ಎಂದು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ