ಆ್ಯಪ್ನಗರ

ಹುಬ್ಬಳ್ಳಿ-ಧಾರವಾಡ: ದ್ರೌಪದಿ ಮುರ್ಮು ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬ್ಯಾನರ್ ಹಾಕಿ ಪೇಚಿಗೆ ಒಳಗಾದ ಶಾಸಕ ಅರವಿಂದ ಬೆಲ್ಲದ್

ಧಾರವಾಡ ನಗರದ ಹೊರವಲಯದಲ್ಲಿರುವ ಐಐಟಿ ನೂತನ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಇಂದು ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಸ್ವಾಗತಿಸುವ ಬ್ಯಾನರ್ ಗಳನ್ನ ಹಾಕಲಾಗಿದೆ. ಅದರಲ್ಲಿ ‘ರಾಷ್ಟ್ರದ ಮೊದಲ ಮಹಿಳಾ ರಾಷ್ಟ್ರಪತಿ’ ಎಂದು ನಮೂದಿಸಲಾಗಿದೆ. ಈ ವಾಕ್ಯವೇ ಇದೀಗ ಹಲವು ರೀತಿಯಲ್ಲಿ ಚರ್ಚೆಗೆ ಕಾರಣವಾಗಿದೆ.

Lipi 26 Sep 2022, 11:45 am
ಹುಬ್ಬಳ್ಳಿ-ಧಾರವಾಡ: ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಧಾರವಾಡ ಜಿಲ್ಲೆಯ ಪ್ರವಾಸಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ ಅವರು ವಿದ್ಯಾಕಾಶಿಗೆ ಆಗಮಿಸುತ್ತಿರುವ ಸಮಯದಲ್ಲೇ ಧಾರವಾಡದಲ್ಲಿ ಗಲಿಬಿಲಿ ಉಂಟಾಗಿದೆ.
Vijaya Karnataka Web president banner


ಹೌದು, ಧಾರವಾಡ ನಗರದ ಹೊರವಲಯದಲ್ಲಿರುವ ಐಐಟಿ ನೂತನ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಇಂದು ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಸ್ವಾಗತಿಸುವ ಬ್ಯಾನರ್ ಗಳನ್ನ ಹಾಕಲಾಗಿದೆ. ಅದರಲ್ಲಿ ‘ರಾಷ್ಟ್ರದ ಮೊದಲ ಮಹಿಳಾ ರಾಷ್ಟ್ರಪತಿ’ ಎಂದು ನಮೂದಿಸಲಾಗಿದೆ. ಈ ವಾಕ್ಯವೇ ಇದೀಗ ಹಲವು ರೀತಿಯಲ್ಲಿ ಚರ್ಚೆಗೆ ಕಾರಣವಾಗಿದೆ.

ರಾಷ್ಟ್ರಪತಿಗೆ ರಸ್ತೆಗುಂಡಿಗಳ ಸ್ವಾಗತ: ದೇಶದ ಪ್ರಥಮ ಪ್ರಜೆ ಬರುವ ರಸ್ತೆಗೆ ತೇಪೆ ಹಾಕಲು ಹುಬ್ಬಳ್ಳಿ-ಧಾರವಾಡ ಪಾಲಿಕೆ ನಿರ್ಧಾರ
ಶಾಸಕ ಅರವಿಂದ ಬೆಲ್ಲದ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತಿಸುವ ಬ್ಯಾನರ್ ನ್ನು ಧಾರವಾಡದಲ್ಲಿ ಅಳವಡಿಸಿದ್ದಾರೆ. ಇದರಲ್ಲಿ ಶಾಸಕರು ಹಾಗೂ ಸಂಸದರು ತಮ್ಮ ವಿಶೇಷ ಪ್ರಯತ್ನದಿಂದ ಐಐಐಟಿ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ರಾಷ್ಟ್ರದ ಮೊದಲ ಮಹಿಳಾ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹೃತ್ಪೂರ್ವಕ ಸ್ವಾಗತ ಎಂದು ಬರೆಯಲಾಗಿದೆ‌.

ಇದೀಗ ಈ ಬ್ಯಾನರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಈ ಬಗ್ಗೆ ಪ್ರಶ್ನೆ ಮಾಡುವಂತಾಗಿದೆ. ಇವರು ಮೊದಲ ರಾಷ್ಟ್ರಪತಿಯಾದರೇ ಪ್ರತಿಭಾ ಪಾಟೀಲ್ ಅವರು ಏನಾಗಿದ್ರು ಅಂತಾ ಜನ ಪ್ರಶ್ನೆ ಮಾಡುತ್ತಿದ್ದಾರೆ. ಇದರ ಜೊತೆಗೆ ಐಐಟಿ ಬರಲು ಶಾಸಕ ಅರವಿಂದ ಬೆಲ್ಲದ ಮತ್ತು ಸಂಸದ ಪ್ರಹ್ಲಾದ ಜೋಶಿಯವರಷ್ಟೇ ಕಾರಣ ಎಂಬ ರೀತಿಯಲ್ಲಿ ಬರೆಯುವ ಮೂಲಕ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಹೆಸರನ್ನು ಕೈ ಬಿಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ