ಆ್ಯಪ್ನಗರ

ಎಂ. ಎಂ. ಕಲ್ಬುರ್ಗಿ ಹತ್ಯೆ ಪ್ರಕರಣ: ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾದ ಆರೋಪಿಗಳು

2015ರಲ್ಲಿ ಹತ್ಯೆಯಾಗಿದ್ದ ಸಂಶೋಧಕ ಡಾ‌. ಎಂ.ಎಂ‌. ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಪ್ರಕರಣದ ತನಿಖೆಯನ್ನು ಎಸ್‌ಐಟಿ ಕೈಗೆತ್ತಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಆರೋಪಿಗಳನ್ನು ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕುರಿತು ಒಂದು ವರದಿ.

Vijaya Karnataka Web 17 Oct 2019, 2:43 pm
ಧಾರವಾಡ: ಸಂಶೋಧಕ ಡಾ‌. ಎಂ.ಎಂ‌. ಕಲಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಎಂ.ಎಂ‌. ಕಲಬುರ್ಗಿ ಹತ್ಯೆ ಪ್ರಕರಣದ ಚಾರ್ಜ್ಶೀಟ್ ಸಲ್ಲಿಕೆ ಬಳಿಕ ಮೊದಲ ಬಾರಿಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆಗಸ್ಟ್ 17ರಂದು ಎಸ್.ಐ.ಟಿ. ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಈ ಹಿನ್ನೆಲೆ ಚಾರ್ಜ್‌ಶೀಟ್‌ ಸಲ್ಲಿಕೆ ಬಳಿಕ ನ್ಯಾಯಾಲಯ ಈ ಪ್ರಕರಣದ ವಿಚಾರಣೆಯನಗನು ಕೈಗೆತ್ತಿಕೊಂಡಿದೆ.
Vijaya Karnataka Web mm kalburgi.


ಈ ಸುದ್ದಿ ಓದಿ: ಎಂಎಂ ಕಲ್ಬುರ್ಗಿ ಹತ್ಯೆ: ದೋಷಾರೋಪಣ ಪಟ್ಟಿ ಸಲ್ಲಿಸಿದ ವಿಶೇಷ ತನಿಖಾ ತಂಡ

ಇನ್ನು, ಸಂಶೋಧಕ ಡಾ‌. ಎಂ.ಎಂ‌. ಕಲಬುರ್ಗಿ ಹತ್ಯೆ ಪ್ರಕರಣದ ಆರು ಆರೋಪಿಗಳ ಪೈಕಿ ಐವರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದರು. ಗಣೇಶ ಮಿಸ್ಕಿನ್, ಅಮಿತ್ ಬದ್ದಿ, ಪ್ರವೀಣ ಚತುರ, ವಾಸುದೇವ ಸೂರ್ಯವಂಶಿ, ಶರದ ಕಳಾಸ್ಕರ್ ಸೇರಿ ಐವರು ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಮುಂಬೈ ಮತ್ತು ಧಾರವಾಡ ಜೈಲಿನಲ್ಲಿದ್ದ ಈ ಅರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: ಎಂ.ಎಂ. ಕಲ್ಬುರ್ಗಿ ಹತ್ಯೆ ಕೇಸ್: ಎಸ್‌ಐಟಿಯಿಂದ ಮತ್ತೊಬ್ಬ ಆರೋಪಿ ಬಂಧನ

ಇನ್ನೊಂದೆಡೆ, ಅನಾರೋಗ್ಯ ಹಿನ್ನೆಲೆ ಒಬ್ಬ ಆರೋಪಿ ಗೈರಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿರೋ ಆರೋಪಿ ಅಮೋಲ್ ಕಾಳೆ ಗೈರು ಹಾಜರಾಗಿದ್ದಾನೆ.

ಎಂಎಂ ಕಲ್ಬುರ್ಗಿ ಹತ್ಯೆ ತನಿಖೆ ವಿಳಂಬ: ಎನ್‌ಐಎ, ಸಿಬಿಐ, ಕರ್ನಾಟಕಕ್ಕೆ ಸುಪ್ರೀಂ ನೋಟಿಸ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ