ಆ್ಯಪ್ನಗರ

ನೆರೆ ಪೀಡಿತ ಪ್ರದೇಶಗಳಿಗೆ ಮೋದಿ ಭೇಟಿ ಅಗತ್ಯವಿಲ್ಲ: ಜಗದೀಶ್ ಶೆಟ್ಟರ್

"ಈಗಾಗಲೇ ರಾಜ್ಯದ ಅತಿವೃಷ್ಟಿ ಕುರಿತು ರಾಜ್ಯ ಸರ್ಕಾರದಿಂದ ಸಮಗ್ರ ಅಧ್ಯಯನ ನಡೆದಿದೆ. ಕೇಂದ್ರ ಸಚಿವ ಅಮಿತ್ ಶಾ ಅವರೂ ನೆರೆ ಹಾವಳಿ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ" - ಜಗದೀಶ್‌ ಶೆಟ್ಟರ್‌

Vijaya Karnataka Web 8 Sep 2019, 3:26 pm
ಹುಬ್ಬಳ್ಳಿ: ನೆರೆ ಪೀಡಿತ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಅಗತ್ಯವಿಲ್ಲ ಎಂದು ಸಚಿವ ಜಗದೀಶ್‌ ಶೆಟ್ಟರ್‌ ವಾದಿಸಿದ್ದಾರೆ. ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪ್ರಧಾನಿ ಭೇಟಿ ನೀಡುತ್ತಿಲ್ಲ ಎಂಬ ಕಾಂಗ್ರೆಸ್‌ನ ಆಕ್ಷೇಪಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
Vijaya Karnataka Web Jagadish Shettar


ಕಾಂಗ್ರೆಸ್ ಇದನ್ನು ರಾಜಕೀಯಕರಣಗೊಳಿಸುತ್ತಿದೆ ಎಂದು ಆರೋಪಿಸಿರುವ ಶೆಟ್ಟರ್‌, “ಈಗಾಗಲೇ ರಾಜ್ಯದ ಅತಿವೃಷ್ಟಿ ಕುರಿತು ರಾಜ್ಯ ಸರ್ಕಾರದಿಂದ ಸಮಗ್ರ ಅಧ್ಯಯನ ನಡೆದಿದೆ. ಕೇಂದ್ರ ಸಚಿವ ಅಮಿತ್ ಶಾ ಅವರೂ ನೆರೆ ಹಾವಳಿ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ. ಇದರಲ್ಲಿ ಯಾವುದು ತಪ್ಪು ಯಾವುದೇ ಸರಿ ಎಂದು ತಿಳಿಯಬೇಕಿದೆ,” ಎಂದರು.

ನೆರೆ ಪರಿಹಾರ ಸಹ ಸರಿಯಾಗಿ ನಡೆಯುತ್ತಿದೆ ಎಂದು ಹೇಳಿದ ಶೆಟ್ಟರ್‌, ಕಾಂಗ್ರೆಸ್‌ನವರಿಗೆ ನಿಜವಾದ ಕಳಕಳಿ ಇಲ್ಲ ಎಂದು ತಿರುಗೇಟು ನೀಡಿದರು.

ಬೆಳಗಾವಿಯಲ್ಲಿ ಸಂತ್ರಸ್ತರಿಗೆ 10 ಸಾವಿರ ನೀಡಿದ್ದೇ ದೊಡ್ಡದು ಎಂಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಈಶ್ವರಪ್ಪ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಈ ಬಗ್ಗೆ ನಾನು ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುತ್ತೇನೆ. ಈಶ್ವರಪ್ಪ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಪರಿಹಾರ‌ ಧನವಾಗಿ ನಿಗದಿಗಿಂತ ಹೆಚ್ಷಿನ ಹಣ ಕೊಡುತ್ತಿದ್ದೇವೆ ಎಂದು ಅವರು ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ