ಆ್ಯಪ್ನಗರ

ಸೋಮವಾರ: 4 ನಾಮಪತ್ರ ಸಲ್ಲಿಕೆ

ಧಾರವಾಡ : 2019ರ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ 4ನೇ ದಿನ ಸೋಮವಾರ ನಾಲ್ವರು ಅಭ್ಯರ್ಥಿಗಳು ನಾಲ್ಕು ನಾಮಪತ್ರಗಳನ್ನು ಸಲ್ಲಿಸಿದರು.

Vijaya Karnataka 2 Apr 2019, 5:00 am
ಧಾರವಾಡ : 2019ರ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ 4ನೇ ದಿನ ಸೋಮವಾರ ನಾಲ್ವರು ಅಭ್ಯರ್ಥಿಗಳು ನಾಲ್ಕು ನಾಮಪತ್ರಗಳನ್ನು ಸಲ್ಲಿಸಿದರು.
Vijaya Karnataka Web DRW-01RANGA06
ಧಾರವಾಡ ಲೋಕಸಭಾ ಚುನಾವಣೆ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನಗೌಡ ಬಾಳನಗೌಡ್ರು ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.


ಈ ವೇಳೆ ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷ ದ ಅಭ್ಯರ್ಥಿಯಾಗಿ ರೇವಣಸಿದ್ದಪ್ಪ ಬಸವರಾಜ ತಳವಾರ, ಜನತಾದಳ (ಸಂಯುಕ್ತ) ಪಕ್ಷ ದ ಅಭ್ಯರ್ಥಿಯಾಗಿ ಗುರಪ್ಪ ತೋಟದ, ಪಕ್ಷೇತರ ಅಭ್ಯರ್ಥಿಗಳಾಗಿ ಮಲ್ಲಿಕಾರ್ಜುನಗೌಡ ಬಾಳನಗೌಡ್ರು ಹಾಗೂ ಉದಯಕುಮಾರ್‌ ಅಂಬಿಗೇರ ಅವರು ನಾಮಪತ್ರಗಳನ್ನು ಚುನಾವಣಾಧಿಕಾರಿ ಎಂ.ದೀಪಾ ಅವರಿಗೆ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿ ಡಾ. ಸುರೇಶ್‌ ಇಟ್ನಾಳ್‌ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನಗೌಡ ಬಾಳನಗೌಡ್ರು ಇಲ್ಲಿನ ಶಿವಾಜಿ ವೃತ್ತದ ಬಳಿಯ ಈಶ್ವರಲಿಂಗ ದೇವಸ್ಥಾನದಿಂದ ನೂರಾರು ರೈತ ಮುಖಂಡರರೊಂದಿಗೆ ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, 8 ತಾಲೂಕುಗಳ ರೈತರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. 2 ರಾಷ್ಟ್ರೀಯ ಪಕ್ಷ ಗಳು ರೈತರಿಗೆ ಏನು ಮಾಡದೇ ಬರಿ ಅನ್ಯಾಯ ಮಾಡಿದ್ದಾರೆ ಹೀಗಾಗಿ ರೈತರ ಧ್ವನಿ ಆಗಿ ನಾನು ಸ್ಪರ್ಧೆ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ನಾಮಪತ್ರ ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಫಾರೂಖ ಕಿಲ್ಲೆದಾರ, ಕಲ್ಲಪ್ಪ ಲಿಗಾಡೆ, ಬೈರವಿ, ಈನಗೌಡ, ಗುರುನಾಥ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ