ಆ್ಯಪ್ನಗರ

ಹುಬ್ಬಳ್ಳಿಯಲ್ಲಿ ಇನ್‌ವೆಸ್ಟ್‌ ಕರ್ನಾಟಕ, 700ಕ್ಕೂ ಹೆಚ್ಚು ಹೂಡಿಕೆದಾರರ ಆಗಮನ ನಿರೀಕ್ಷೆ: ಜಗದೀಶ ಶೆಟ್ಟರ್

​ಉತ್ತರ ಕರ್ನಾಟಕದ ಪರಿಚಯ ಮಾಡಿಕೊಟ್ಟು ಇಲ್ಲಿ ಹೂಡಿಕೆ ಮತ್ತು ಕೈಗಾರಿಕಾ ಸ್ಥಾಪನೆಯ ಅವಕಾಶ, ಸಾಧ್ಯತೆಗಳ ವಿವರ ಮಾಹಿತಿ ನೀಡಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್ ತಿಳಿಸಿದರು.

Vijaya Karnataka Web 13 Feb 2020, 8:55 pm
ಹುಬ್ಬಳ್ಳಿ: ಎರಡನೇ ಹಂತದ ನಗರಗಳಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಇನ್‌ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶದಲ್ಲಿ ದೇಶದ ವಿವಿಧ ಭಾಗಗಳಿಂದ ಸುಮಾರು 700 ಕ್ಕೂ ಹೆಚ್ಚು ಹೂಡಿಕೆದಾರರು ಆಗಮಿಸುವ ನಿರೀಕ್ಷೆ ಇದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
Vijaya Karnataka Web ಜಗದೀಶ್‌ ಶೆಟ್ಟರ್‌
ಜಗದೀಶ್‌ ಶೆಟ್ಟರ್‌


ಡೆನಿಸನ್ಸ್ ಹೋಟೆಲ್‌ನಲ್ಲಿ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಮಾಹಿತಿ ನೀಡಿದರು.

ಇನ್‌ವೆಸ್ಟ್‌ ಕರ್ನಾಟಕ ಶೃಂಗದಿಂದ 2ನೇ ಹಂತದ ನಗರಗಳ ವಿಕಾಸಕ್ಕೆ ಮಹತ್ವದ ಹೆಜ್ಜೆ: ಪ್ರಹ್ಲಾದ್‌ ಜೋಶಿ

ಸಮಾವೇಶದಲ್ಲಿ ಭಾಗವಹಿಸುವುದಾಗಿ ಈಗಾಗಲೇ 650ಕ್ಕೂ ಹೆಚ್ಚು ಉದ್ಯಮಿಗಳು ಖಚಿತಪಡಿಸಿದ್ದಾರೆ. ಸುಮಾರು 700 ಜನ ಉದ್ಯಮಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.100ಕ್ಕೂ ಹೆಚ್ಚು ಆಹ್ವಾನಿತರು ಆಗಮಿಸುವರು. ಹೈದರಾಬಾದ್, ಮುಂಬೈ, ಗುವಾಹತಿ ಸೇರಿದಂತೆ ಹಲವು ನಗರಗಳಿಂದಲೂ ಉದ್ಯಮಿಗಳು ಬರಲಿದ್ದಾರೆ ಎಂದರು.

ಉತ್ತರ ಕರ್ನಾಟಕದ ಪರಿಚಯ ಮಾಡಿಕೊಟ್ಟು ಇಲ್ಲಿ ಹೂಡಿಕೆ ಮತ್ತು ಕೈಗಾರಿಕಾ ಸ್ಥಾಪನೆಯ ಅವಕಾಶ, ಸಾಧ್ಯತೆಗಳ ವಿವರ ಮಾಹಿತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಮಧ್ಯಾಹ್ನ ಭೋಜನ ವಿರಾಮದ ನಂತರ ಆಸಕ್ತ ಉದ್ಯಮಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು. ಹೂಡಿಕೆಯ ವಿವರ ಒದಗಿಸಲಾಗುವುದು ಸಚಿವ ಜಗದೀಶ್‌ ಶೆಟ್ಟರ್‌ ಮಾಹಿತಿ ನೀಡಿದರು.

ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್‌ ಜೋಶಿ ಕೂಡ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ