ಆ್ಯಪ್ನಗರ

ಮೋದಿ ಮತ್ತೆ ಪ್ರಧಾನಿ ಮಾಡಲು ಪಣ

ಹುಬ್ಬಳ್ಳಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಮ್ಮ ಪಕ್ಷ ಪಣ ತೊಟ್ಟಿದೆ ಎಂದು ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಹೇಳಿದರು.

Vijaya Karnataka 21 Apr 2019, 5:00 am
ಹುಬ್ಬಳ್ಳಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಮ್ಮ ಪಕ್ಷ ಪಣ ತೊಟ್ಟಿದೆ ಎಂದು ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಹೇಳಿದರು.
Vijaya Karnataka Web narendra modi to be pm again
ಮೋದಿ ಮತ್ತೆ ಪ್ರಧಾನಿ ಮಾಡಲು ಪಣ


ಶನಿವಾರ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ದೇಶದ ಭದ್ರತೆ ಮತ್ತು ಸರ್ವತೋಮುಖ ಅಭಿವೃದ್ಧಿಯೇ ಮೋದಿಯವರ ಆದ್ಯತೆಯಾಗಿದೆ. ದೇಶದ ಜನರ ವಿಶ್ವಾಸವನ್ನು ಹುಸಿಗೊಳಿಸದೇ ಆಡಳಿತದಲ್ಲಿ ಕ್ರಾಂತಿಕಾರಕ ಬದಲಾವಣೆ ಮಾಡಿದ್ದಾರೆ. ಅದಕ್ಕಾಗಿ ಅವರೇ ಪ್ರಧಾನಿಯಾಗಿ ಮುಂದುವರೆಯಬೇಕು ಎನ್ನುವುದು ಎನ್‌ಡಿಎ ಭಾಗವಾಗಿರುವ ಆರ್‌ಪಿಐ ದೇಶಾದ್ಯಂತ ಪ್ರಚಾರ ನಡೆಸಿದೆ ಎಂದರು.

ಒಂದೆಡೆ ಬೆಂಬಲ, ಇನ್ನೊಂದಡೆ ಸ್ಪರ್ಧೆ

ರಾಜ್ಯದ 28 ಕ್ಷೇತ್ರಗಳಲ್ಲಿ 20ಕ್ಕೂ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದ ಡಾ.ಎಂ.ವೆಂಕಟಸ್ವಾಮಿಯವರು, ರಾಜ್ಯದಲ್ಲಿ ಬಿಜೆಪಿ ಜತೆ ಸೀಟು ಹೊಂದಾಣಿಕೆ ಸಾಧ್ಯವಾಗಲಿಲ್ಲ. ಅದಕ್ಕಾಗಿ ಕೋಲಾರ ಮೀಸಲು, ಬೆಂಗಳೂರು ಗ್ರಾಮಾಂತರ, ಚಿಕ್ಕೋಡಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧವೇ ಸ್ಪರ್ಧೆ ಮಾಡಿದ್ದೇವೆ. ಉಳಿದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದೇವೆ ಎಂದು ಹೇಳಿದರು.

ಬಿಜೆಪಿ ಪರ ಮತ ಕೇಳುತ್ತಿರುವ ನೀವು, ಈ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಹೇಗೆ ಪ್ರಚಾರ ಮಾಡುತ್ತೀರಿ ಎಂದರೆ, ನಾವು ನಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡಿದರೂ, ಬಿಜೆಪಿಯವರೇ ಗೆಲ್ಲುತ್ತಾರೆ. ಇದರ ಬಗ್ಗೆ ಸಂಶಯಬೇಡ ಎಂದರು. ಹಾಗಾದರೆ, ನಿಮ್ಮದು ನೆಪಮಾತ್ರದ ಸ್ಪರ್ಧೆಯೇ ಎಂದರೆ, ಹಾಗೇ ತಿಳಿದುಕೊಳ್ಳಿ ಎಂದು ಹೇಳುತ್ತಾ ಪತ್ರಿಕಾಗೋಷ್ಠಿಯಿಂದ ಎದ್ದು ಹೋದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ