ಆ್ಯಪ್ನಗರ

21ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್‌

ಧಾರವಾಡ:ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಸ್ವರಾಜ… ಇಂಡಿಯಾ ಪಾರ್ಟಿ ವತಿಯಿಂದ ರೈತರ ವಿವಿಧ ಬೇಡಿಕೆಗೆ ಆಗ್ರಹಿಸಿ 39ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಜುಲೈ 21ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆ ಹಿಟ್ನಾಳ ಕ್ರಾಸ್‌ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಲಾಗುವುದು ಎಂದು ಸ್ವರಾಜ… ಇಂಡಿಯಾ ಪಾರ್ಟಿ ಗೌರವ ಅಧ್ಯಕ್ಷ ಚಾಮರಸ ಮಾಲಿ ಪಾಟೀಲ್‌ ತಿಳಿಸಿದರು.

Vijaya Karnataka 16 Jul 2018, 5:00 am
ಧಾರವಾಡ:ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಸ್ವರಾಜ… ಇಂಡಿಯಾ ಪಾರ್ಟಿ ವತಿಯಿಂದ ರೈತರ ವಿವಿಧ ಬೇಡಿಕೆಗೆ ಆಗ್ರಹಿಸಿ 39ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಜುಲೈ 21ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆ ಹಿಟ್ನಾಳ ಕ್ರಾಸ್‌ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಲಾಗುವುದು ಎಂದು ಸ್ವರಾಜ… ಇಂಡಿಯಾ ಪಾರ್ಟಿ ಗೌರವ ಅಧ್ಯಕ್ಷ ಚಾಮರಸ ಮಾಲಿ ಪಾಟೀಲ್‌ ತಿಳಿಸಿದರು.
Vijaya Karnataka Web national highway band on 21st
21ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್‌


ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಂಪೂರ್ಣ ಸಾಲ ಮನ್ನಾ ಹಾಗೂ ಗ್ರಾಮೀಣ ಪ್ರದೇದ ಕೃಷಿ ಪುನಶ್ಚೇತನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಸ ವಿಶೇಷ ಪ್ಯಾಕೇಜ… ನೀಡುವಂತೆ ಆಗ್ರಹಿಸಲಾಗುವುದು ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಹೇಳಿ ಬಜೆಚ್‌ನಲ್ಲಿ ಕೇವಲ ಎರಡು ಲಕ್ಷ ಅದು ಹಲವು ಶರತ್ತು ವಿಧಿಸಿ ಮನ್ನಾ ಮಾಡುವ ಮೂಲಕ ರೈತರಿಗೆ ಅನ್ಯಾಯ ಮಾಡಿದ್ದಾರೆ. 2009ರ ಹಿಂದೆ ಸಾಲ ತೆಗೆದುಕೊಂಡವರಿಗೆ ಸಾಲ ಮನ್ನಾದಿಂದ ಹೊರಗಿಟ್ಟಿದ್ದು ನೋವಿನ ಸಂಗತಿ ಅಂದ ಅವರು, ಸಾಲ ಮನ್ನಾ ಮಾಡಿದ ಮೇಲೆ ಐದರಿಂದ ಆರು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಘೋಷಿಸಿದ ಬೆಂಬಲ ಬೆಲೆಯಿಂದ ರೈತರಿಗೆ ಅನುಕೂಲವಿಲ್ಲ. ಸ್ಥಿರ ಬೆಲೆ ಹಾಗೂ ಲಾಭದಾಯಕ ಬೆಲೆ ಘೋಷಣೆ ಮಾಡಿದರೆ ರೈತರ ಸಾಲ ಮನ್ನಾ ಮಾಡಿ ಎಂದು ಕೇಳುವ ಅವಶ್ಯಕತೆ ಬರುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರ ಕೃಷಿಯನ್ನು ರಕ್ಷ ಣೆ ಮಾಡಬೇಕು. ಕೃಷಿ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ… ನೀಡಬೇಕು. ಕಳಸಾ ಬಂಡೂರಿ ಹೋರಾಟವನ್ನು ಗಂಭೀರವಾಗಿ ತೆಗೆದುಕೊಂಡು ಕಾಲಮಿತಿಯಲ್ಲಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಅಂದಿನ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ 26 ಜಿಲ್ಲೆಗಳಿಂದ 25 ಸಾವಿರ ರೈತರು ಭಾಗವಹಿಸುವರು. ಕೂಡಲೇ ಸರಕಾರ ಎಚ್ಚೆತ್ತುಕೊಳ್ಳಬೇಕು. ಒಂದು ವೇಳೆ ರೈತರ ಸಹನೆಯ ಕಟ್ಟೆ ಒಡೆದರೆ ಮುಂದೆ ಆಗುವ ಅನಾಹುತಕ್ಕೆ ಸರಕಾರವೇ ಹೋಣೆ ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ವಿರಣ್ಣ ಬೆಳಗಿ, ಕೆ.ಜಿ.ಶಾಂತಸ್ವಾಮಿಮಠ,ನಾಗಪ್ಪ ಉಂಡಿ,ಬಸವರಾಜ ಸಾಬಳೆ, ರಾಮನಾಳ. ಇಸ್ಮಾಯಿಲ್‌ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ