ಧಾರವಾಡ : ರಾಷ್ಟ್ರೀಯ ಲೋಕ್ ಅದಾಲತ್ನ್ನು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಶನಿವಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಈಶಪ್ಪ ಕೆ.ಭೂತೆ ಮಾರ್ಗದರ್ಶನದಲ್ಲಿ ನಾನಾ ರೀತಿಯ ಸುಮಾರು 2,782ಗಳಲ್ಲಿ 659 ಚಾಲ್ತಿ ಇರುವ ಹಾಗೂ 85 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸಲಾಯಿತು. ಸುಮಾರು 6,38,57,701ರೂ. ಗಳ ಮೊತ್ತವನ್ನು ವಸೂಲು ಮಾಡಲಾಯಿತು.
ಸದರಿ ಲೋಕ ಅದಾಲತ್ನಲ್ಲಿ ಜಿಲ್ಲೆಯ ನ್ಯಾಯಾಧೀಶರು, ವಿವಿಧ ವಿಮೆ ಕಂಪನಿಯ ಅಧಿಕಾರಿಗಳು, ವಿಮೆ ಕಂಪನಿಯ ಪ್ಯಾನಲ್ ವಕೀಲರು, ಎನ್.ಡಬ್ಲೂ.ಕೆ.ಆರ್.ಟಿ.ಸಿ. ಅಧಿಕಾರಿಗಳು, ಅರ್ಜಿದಾರರ ಪರ ವಕೀಲರು, ಕಕ್ಷಿದಾರರು, ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸಿ ಸದರಿ ಲೋಕ ಅದಾಲತ್ನ್ನು ಯಶಸ್ವಿಗೊಳಿಸಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಿಣ್ಣನ್ನವರ್ ಆರ್.ಎಸ್.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದರಿ ಲೋಕ ಅದಾಲತ್ನಲ್ಲಿ ಜಿಲ್ಲೆಯ ನ್ಯಾಯಾಧೀಶರು, ವಿವಿಧ ವಿಮೆ ಕಂಪನಿಯ ಅಧಿಕಾರಿಗಳು, ವಿಮೆ ಕಂಪನಿಯ ಪ್ಯಾನಲ್ ವಕೀಲರು, ಎನ್.ಡಬ್ಲೂ.ಕೆ.ಆರ್.ಟಿ.ಸಿ. ಅಧಿಕಾರಿಗಳು, ಅರ್ಜಿದಾರರ ಪರ ವಕೀಲರು, ಕಕ್ಷಿದಾರರು, ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸಿ ಸದರಿ ಲೋಕ ಅದಾಲತ್ನ್ನು ಯಶಸ್ವಿಗೊಳಿಸಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಿಣ್ಣನ್ನವರ್ ಆರ್.ಎಸ್.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.