ಆ್ಯಪ್ನಗರ

ನಾವು ಮುಳುಗಲ್ಲ, ದಡ ಸೇರಲು ಹೆಲಿಕಾಪ್ಟರ್ ಇಟ್ಟುಕೊಂಡಿದ್ದೇವೆ: ರೇವಣ್ಣ

ನಾವು ಮುಳಗಲ್ಲ, ದಡ ಸೇರಲು ಹೆಲಿಕಾಪ್ಟರ್ ಇಟ್ಟುಕೊಂಡಿದ್ದೇವೆ ಎಂದು ಎಚ್ ಡಿ ರೇವಣ್ಣ ಹೇಳಿದರು.

Vijaya Karnataka Web 20 Aug 2019, 12:17 pm
ಹುಬ್ಬಳ್ಳಿ: ನಮ್ಮದು (ಜೆಡಿಎಸ್) ರಾಜಕೀಯ ಪಕ್ಷವಲ್ಲ ಎನ್ನುವ ಭಾವನೆ ರಾಷ್ಟ್ರೀಯ ಪಕ್ಷಗಳಲ್ಲಿದೆ. ಇಂದು ಮುಳುಗುತ್ತಾರೋ, ನಾಳೆ ಮುಳಗುತ್ತಾರೋ ಎಂದು ಕಾದು ಕುಳಿತಿದ್ದಾರೆ. ಆದರೆ, ನಾವು ಮುಳಗಲ್ಲ, ದಡ ಸೇರಲು ಹೆಲಿಕಾಪ್ಟರ್ ಇಟ್ಟುಕೊಂಡಿದ್ದೇವೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದರು.
Vijaya Karnataka Web revanna


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

ಈ ಹಿಂದೆ ದೇವೇಗೌಡರ ಮೇಲೆಯೂ ಅನೇಕ ತನಿಖೆ ಮಾಡಿಸಿದ್ದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಆಪರೇಷನ್ ಕಮಲದ ಕುರಿತು ಎಸ್‌ಐಟಿ ತನಿಖೆ ಮಾಡಿಸದಂತೆ ಬಿಜೆಪಿ ನಾಯಕರು ಒತ್ತಾಯಿಸಿದ್ದರು.
ಬಸವರಾಜ್ ಬೊಮ್ಮಾಯಿ ಸೇರಿದಂತೆ ಮೂರ್ನಾಲ್ಕು ಬಿಜೆಪಿ ನಾಯಕರು ನಮ್ಮ ಬಳಿ ಬಂದಿದ್ದರು.
ಬೇಕಿದ್ದರೆ, ಈ ಬಗ್ಗೆ ಬಸವರಾಜ್ ಬೊಮ್ಮಾಯಿ ದೇವರ ಮೇಲೆ ಪ್ರಮಾಣ ಮಾಡಲಿ ನೋಡೋಣ ಎಂದು ಸವಾಲ್ ಎಸೆದರು.

ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಗೆ ಸಾವಿರಾರು ಕೋಟಿ ಕೊಟ್ಟಿದ್ದಾರೆ. ಆದರೆ, ಪ್ರವಾಹ ಸಂತ್ರಸ್ತರಿಗೆ ಕೊಡಲು ಹಣವಿಲ್ಲ ಎಂದು ಹೇಳುತ್ತಾರೆ. ಉತ್ತರ ಕರ್ನಾಟಕ ಭಾಗದ ಜನರು ಬಿಜೆಪಿ ಗೆಲ್ಲಿಸಿದ್ದಾರೆ. ಆದರೆ, ಈ ಭಾಗದ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ