ಆ್ಯಪ್ನಗರ

ನವಲೂರ ಬ್ರಿಜ್‌ ಕುಸಿತ ಪ್ರಕರಣ : 3 ತಿಂಗಳಲ್ಲಿ ವರದಿಗೆ ಸಿಎಂ ಸೂಚನೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್‌ ಮಾರ್ಗದ ನವಲೂರ ಬ್ರಿಜ್‌ ಕುಸಿತ ಹಾಗೂ ಈ ವಿಚಾರದಲ್ಲಿಅಧಿಕಾರಿಗಳು ತೋರಿದ ನಿರ್ಲಕ್ಷ್ತ್ಯ್ಯ ಕುರಿತು ತನಿಖೆ ನಡೆಸಿ ಮೂರು ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಸ್ಪಷ್ಟ ಸೂಚನೆ ನೀಡಿದ್ದಾರೆ.

Vijaya Karnataka 26 Sep 2020, 5:00 am
ಧಾರವಾಡ: ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್‌ ಮಾರ್ಗದ ನವಲೂರ ಬ್ರಿಜ್‌ ಕುಸಿತ ಹಾಗೂ ಈ ವಿಚಾರದಲ್ಲಿಅಧಿಕಾರಿಗಳು ತೋರಿದ ನಿರ್ಲಕ್ಷ್ತ್ಯ್ಯ ಕುರಿತು ತನಿಖೆ ನಡೆಸಿ ಮೂರು ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಸ್ಪಷ್ಟ ಸೂಚನೆ ನೀಡಿದ್ದಾರೆ.
Vijaya Karnataka Web 25NIJAGUNI3_21
ಬೆಂಗಳೂರಿನಲ್ಲಿಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಶಾಸಕ ಅರವಿಂದ ಬೆಲ್ಲದ.


ಮೇಲ್ಸೆತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಕೊಳ್ಳಬೇಕು. ಗುತ್ತಿಗೆದಾರ ಹಾಗೂ ಎಂಜನಿಯರ್‌ಗಳ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ಶಾಸಕ ಅರವಿಂದ ಬೆಲ್ಲದ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದಾರೆ.

ಬಹುಕೇತಕ ಕಾಮಗಾರಿ ಅವೈಜ್ಞಾನಿಕ
ಬಿಆರ್‌ಎಟಿಎಸ್‌ ಸಂಸ್ಥೆಯವರು ಅವಳಿನಗರದಲ್ಲಿಕೈಕೊಂಡ ಬಹುತೇಕ ಎಲ್ಲಕಾಮಗಾರಿಗಳು ಅವೈಜ್ಞಾನಿಕವಾಗಿವೆ. ಸಮೀಪದ ನವಲೂರ ಬಳಿ ನಿರ್ಮಿಸಿರುವ ಮೇಲು ಸೇತುವೆಯ ತಡೆಗೋಡೆಯ ಕಾಂಕ್ರೀಟ ಪ್ಯಾನೆಲ್‌ಗಳು ಕಳಚಿ ಬೀಳುತ್ತಿವೆ. ಇದರಿಂದ ಅವಳಿ ನಗರದ ಮಧ್ಯೆ ಸಂಚರಿಸುವ ಜನರು ಆತಂಕದಲ್ಲಿದ್ದಾರೆ. ಈ ಕುರಿತು ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ನಿರ್ಲಕ್ಷ್ತ್ಯ್ಯವಹಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಮಗ್ರ ಮಾಹಿತಿ ನೀಡಲಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿನಡೆದ ಸಭೆಯಲ್ಲಿತಿಳಿಸಿದರೂ ಯಾವುದೇ ಕ್ರಮ ಜರುಗಿಸಿಲ್ಲ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕಐಗೊಂಡು ಸೇತುವೆ ದುರಸ್ತಿ ಕಾರ್ಯವನ್ನು ತ್ವರಿತವಾಗಿ ನಡೆಸಬೇಕು ಎಂದು ಬೆಲ್ಲದ ಅವರು ಸಿಎಂಗೆ ಸಲ್ಲಿಸಿದ ಮನವಿಯಲ್ಲಿತಿಳಿಸಿದ್ದಾರೆ.

ಪ್ರಕರಣ ಗಂಭೀರಗೊಳ್ಳುತ್ತಿದ್ದಂತೆಯೇ ಇದೀಗ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ತ್ವರಿತವಾಗಿ ವರದಿ ನೀಡುವಂತೆ ನಿರ್ದೇಶಿಸಿದ್ದಾರೆ. ಹೀಗಾಗಿ ನವಲೂರ ಬ್ರಿಜ್‌ ಕಾಮಗಾರಿ ಕಳಪೆಯಿಂದ ಕೂಡಿದೆಯೇ? ಅಧಿಕಾರಿಗಳ ನಿರ್ಲಕ್ಷ್ತ್ಯ್ಯಕ್ಕೆ ಏನು ಕಾರಣ ಎಂಬುದು ತನಿಖೆ ನಂತರ ಗೊತ್ತಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ