ಆ್ಯಪ್ನಗರ

ನೆರೆ ಸಂತ್ರಸ್ತರಿಗೆ ಮನೆ ನಿರ್ಮಿಸಲು ಒತ್ತಾಯ

ಧಾರವಾಡ: ನೆರೆ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿ ಕಟ್ಟಿಕೊಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಶುಕ್ರವಾರ ಪ್ರತಿಭಟನೆ ನಡೆಯಿತು.

Vijaya Karnataka 15 Dec 2019, 5:00 am
ಧಾರವಾಡ: ನೆರೆ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿ ಕಟ್ಟಿಕೊಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಶುಕ್ರವಾರ ಪ್ರತಿಭಟನೆ ನಡೆಯಿತು.
Vijaya Karnataka Web neighbors forced the victims to build a house
ನೆರೆ ಸಂತ್ರಸ್ತರಿಗೆ ಮನೆ ನಿರ್ಮಿಸಲು ಒತ್ತಾಯ


ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ಪದಾಧಿಕಾರಿಗಳು, ಮೂರು ತಿಂಗಳ ಹಿಂದೆ ಸುರಿದ ಮಳೆಯಿಂದ ವಾರ್ಡ್‌ ನಂ.24ರ ರಾಜೀವಗಾಂಧಿ ನಗರದ ಮನೆಗಳು ಸಂಪೂರ್ಣ ಕುಸಿದು ಹೋಗಿವೆ. ಇರಲು ವಸತಿ ಸೌಲಭ್ಯವಿಲ್ಲ. ಮನೆ ನಿರ್ಮಿಸಿಕೊಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಹಲವು ಭಾರಿ ಮನವಿ ಸಲ್ಲಿಸಿದರೂ ಕೇವಲ ಭರವಸೆ ನೀಡಿದ್ದಾರೆ. ಈವರೆಗೆ ಮನೆ ನಿರ್ಮಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೀದಿ ದ್ವೀಪ, ಚರಂಡಿ ಸ್ವಚ್ಛತೆ, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ. ಅಧಿಕಾರಿಗಳ ಗಮನಕ್ಕೂ ತಂದರೂ, ಕ್ಯಾರೆ ಎನ್ನುತ್ತಿಲ್ಲ. ತಕ್ಷಣವೇ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪರಮೇಶ್ವರ ಕಾಳೆ, ಗೋಪಾಲ ಮಾದರ, ಶಿವಾಜಿ ಬಡಗೇರ, ಸಿದ್ದಪ್ಪ ಹರಣಿಶಿಕಾರಿ, ಲಕ್ಷತ್ರ್ಮಣ ಬಂಡಿವಡ್ಡರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ