ಆ್ಯಪ್ನಗರ

ರೈತ ವಿರೋಧಿ ಕಾಯಿದೆಗಳು ಬೇಡ, ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಪ್ರತಿಭಟನೆ

ಹುಬ್ಬಳ್ಳಿ: ರೈತರಿಗೆ ಮಾರಕವಾದ ಭೂ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್‌ ಕಾಯ್ದೆಗಳನ್ನು ಜಾರಿ ಮಾಡಬಾರದೆಂದು ಒತ್ತಾಯಿಸಿ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಗುರುವಾರ ಪ್ರತಿಭಟನೆ ನಡೆಸಿತು.

Vijaya Karnataka 25 Sep 2020, 5:00 am
ಹುಬ್ಬಳ್ಳಿ: ರೈತರಿಗೆ ಮಾರಕವಾದ ಭೂ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್‌ ಕಾಯ್ದೆಗಳನ್ನು ಜಾರಿ ಮಾಡಬಾರದೆಂದು ಒತ್ತಾಯಿಸಿ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಗುರುವಾರ ಪ್ರತಿಭಟನೆ ನಡೆಸಿತು.
Vijaya Karnataka Web 24 FARMER PROTEST 1_21
ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಕರ್ನಾಟಕ ಕಳಸಾ ಬಂಡೂರಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.


ಇಲ್ಲಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರಕಾರ ಜಾರಿಗೆ ತರುತ್ತಿರುವ ಕಾಯ್ದೆಗಳಿಂದ ಬಹುದೊಡ್ಡ ನಷ್ಟವಾಗುತ್ತದೆ. ಈ ಕಾಯ್ದೆಗಳಿಂದ ರೈತರು ಬದುಕು ಕಟ್ಟಿಕೊಳ್ಳಲು ಸಮಸ್ಯೆ ಆಗಲಿದೆ ಎಂದು ಕಿಡಿಕಾರಿದರು.

ಕಾಯ್ದೆ ಜಾರಿಯಿಂದ ಸರಕಾರದಿಂದ ಲಭ್ಯವಾಗುವ ಸೌಲಭ್ಯಗಳಿಂದ ರೈತರು ವಂಚಿತರಾಗಬೇಕಾಗುತ್ತದೆ. ಎಪಿಎಂಸಿ ಕಾಯ್ದೆ ಮೂಲಕ ಖಾಸಗೀಕರಣ ಮಾಡುವುದರಿಂದ ರೈತರ ಬದುಕು ಬರಡಾಗುತ್ತದೆ. ಭೂ ಕಾಯ್ದೆಯಿಂದ ರೈತರ ಕೃಷಿ ಜಮೀನು ಹಣವಂತರ ಪಾಲಾಗುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಈ ಕಾಯ್ದೆಗಳನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಬಳಿಕ ತಹಸೀಲ್ದಾರ ಕಚೇರಿಗೆ ತೆರಳಿ ತಹಸೀಲ್ದಾರ ಮೂಲಕ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಸಮಿತಿ ಮನವಿ ಸಲ್ಲಿಸಿತು. ಪ್ರತಿಭಟನೆಯಲ್ಲಿಸಮಿತಿ ಅಧ್ಯಕ್ಷ ಸಿದ್ದು ತೇಜಿ, ಬಾಬಾಜಾಮ ಮುಧೋಳ, ರಾಜಶೇಖರ ಮೆಣಸಿನಕಾಯಿ, ಬಂಗಾರೇಶ ಹಿರೇಮಠ, ನಬೀಸಾಬ ನಧಾಫ್‌, ಮುಸ್ತಾಕ ಕರ್ಜಗಿ, ಚಿದಾನಂದ ಸವದತ್ತಿ, ಪುಂಡಲೀಕ ಬಡಿಗೇರ, ರಮೇಶ ಭೋಸ್ಲೆ, ಆಂಜನೇಯ ಪೂಜಾರ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ