ಆ್ಯಪ್ನಗರ

ಮಾರ್ಗಸೂಚಿ ಕಡ್ಡಾಯ ಪಾಲಿಸದಿದ್ದರೆ ಕ್ರಮಕ್ಕೆ ಸೂಚನೆ

ಧಾರವಾಡ : ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಮೋಸ ಮಾಡಲಾಗುತ್ತಿರುವ ಬಗ್ಗೆ ದೂರು ಬಂದಿದ್ದು, ಯೋಜನೆಯ ಮಾರ್ಗಸೂಚಿ ಕಡ್ಡಾಯ ಪಾಲಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Vijaya Karnataka 13 Jul 2019, 5:00 am
ಧಾರವಾಡ : ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಮೋಸ ಮಾಡಲಾಗುತ್ತಿರುವ ಬಗ್ಗೆ ದೂರು ಬಂದಿದ್ದು, ಯೋಜನೆಯ ಮಾರ್ಗಸೂಚಿ ಕಡ್ಡಾಯ ಪಾಲಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
Vijaya Karnataka Web notice of action if the guideline is not complied with
ಮಾರ್ಗಸೂಚಿ ಕಡ್ಡಾಯ ಪಾಲಿಸದಿದ್ದರೆ ಕ್ರಮಕ್ಕೆ ಸೂಚನೆ


ಪಡಿತರ ವಿತರಣೆಯಲ್ಲಿ ನ್ಯಾಯಬೆಲೆ ಅಂಗಡಿ ಮಾಲಿಕರು ಅನಕ್ಷ ರಸ್ಥರಿಗೆ ಮತ್ತು ಅಮಾಯಕರಿಗೆ ಮೋಸ ಮಾಡುತ್ತಿದ್ದಾರೆ. ಅನರ್ಹರು ಆದ್ಯತಾ ಪಡಿತರ ಚೀಟಿ ಹೊಂದಿ ಪಡಿತರದ ಜತೆಗೆ ಇತರೆ ಸವಲತ್ತು ಅಕ್ರಮ ಪಡೆಯುತ್ತಿದ್ದಾರೆ. ಹೊಸ ಪಡಿತರ ಹಂಚಿಕೆಯಲ್ಲಿ ಅವ್ಯವಹಾರ ನಡೆಯುತ್ತಿದ್ದು, ಇದರಲ್ಲಿ ಕೆಲ ನ್ಯಾಯಬೆಲೆ ಅಂಗಡಿ ಮಾಲಿಕರು ಆಹಾರ ನಿರೀಕ್ಷ ಕರೊಂದಿಗೆ ಕೈಜೋಡಿಸಿ ಫಲಾನುಭವಿಗಳಿಗೆ ಕಡಿಮೆ ಪ್ರಮಾಣದ ಆಹಾರ ಧಾನ್ಯ ವಿತರಿಸುತ್ತಿದ್ದಾರೆ. ಖಾಸಗಿಯಾಗಿ ಇತರೇ ಸಾಮಾಗ್ರಿ ಒತ್ತಾಯಪೂರ್ವಕ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಅಕ್ರಮವೆಸಗುತ್ತಿರುವ ಬಗ್ಗೆ ಕೇಂದ್ರ ಕಚೇರಿಗೆ ಸಾರ್ವಜನಿಕರಿಂದ ಹಲವಾರು ದೂರು ಸ್ವೀಕೃತವಾಗಿವೆ.

ಈ ಹಿನ್ನೆಲೆಯಲ್ಲಿ ಅನ್ನಭಾಗ್ಯ ಯೋಜನೆಯ ಮಾರ್ಗಸೂಚಿ ನ್ಯಾಯಬೆಲೆ ಅಂಗಡಿಕಾರರಿಗೆ ಕಡ್ಡಾಯವಾಗಿ ಪಾಲಿಸಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸೂಚಿಸಿದೆ. ಆದತ್ಯಾ ಪಡಿತರ ಚೀಟಿಗೆ ಪ್ರತಿ ಸದಸ್ಯರಿಗೆ (ಯೂನಿಟ್‌) ತಲಾ 7 ಕೆಜಿಯಂತೆ ಉಚಿತ ಅಕ್ಕಿ, ಅಂತ್ಯೋದಯ ಪ್ರತಿ ಕಾರ್ಡಿಗೆ 35 ಕೆಜಿ ಅಕ್ಕಿ ನೀಡಬೇಕು. ತೊಗರಿಬೇಳೆ ಕೆಜಿ 1ಕ್ಕೆ 38ರೂ. ಮಾತ್ರ ಪಡೆಯಬೇಕು. ಬಯೋಮೆಟ್ರಿಕ್‌ ಪಡೆಯಲು ಪಡಿತರದಾರರಿಗೆ ಯಾವುದೇ ಶುಲ್ಕ ವಿಧಿಸದೇ ಉಚಿತ ನೀಡಬೇಕು. ಸರಕಾರ ನಿಗದಿಪಡಿಸಿದ ದರ ಮತ್ತು ಪ್ರಮಾಣದಲ್ಲಿ ಪಡಿತರ ಆಹಾರಧಾನ್ಯ ವಿತರಣೆ ಆಗಬೇಕು. ಪಡಿತರ ವಸ್ತುಗಳೊಂದಿಗೆ ಮಾರುಕಟ್ಟೆಯ ಯಾವುದೇ ವಸ್ತುಗಳನ್ನು ಒತ್ತಾಯ ಪೂರ್ವಕವಾಗಿ ಪಡಿತರ ಚೀಟಿದಾರರಿಗೆ ವಿತರಣೆ ಮಾಡುವಂತಿಲ್ಲ. ನ್ಯಾಯಬೆಲೆ ಅಂಗಡಿಗಳನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಬೇಕು.

ಪ್ರತಿ ತಿಂಗಳ ಒಂದನೇ ತಾರೀಖಿನಿಂದಲೇ ಪಡಿತರ ವಿತರಣೆ ಮಾಡಬೇಕು. ಬಯೋಮೆಟ್ರಿಕ್‌ ಪಡೆದ ದಿನವೇ ಪಡಿತರವನ್ನು ವಿತರಣೆ ಮಾಡಬೇಕು. ದಾಸ್ತಾನು ವಿವರ, ದರಪಟ್ಟಿ, ಸಹಾಯವಾಣಿ, ಜಾಗೃತ ಸಮಿತಿ ಸದಸ್ಯರ ವಿವರ ಹಾಗೂ ಅನ್ನಭಾಗ್ಯ ಫಲಕಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ನ್ಯಾಯಬೆಲೆ ಅಂಗಡಿಕಾರರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆ ಮೂಲಕ ಸೂಚನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ