ಆ್ಯಪ್ನಗರ

ಅಚ್ಚುಕಟ್ಟಾಗಿ ಗಣರಾಜ್ಯೋತ್ಸವ ಆಚರಿಸಲು ಸೂಚನೆ

ಹುಬ್ಬಳ್ಳಿ : ತಾಲೂಕು ಆಡಳಿತದಿಂದ ನಗರದ ನೆಹರು ಮೈದಾನದಲ್ಲಿ ಜ.26ರಂದು ಅಚ್ಚುಕಟ್ಟಾಗಿ ಗಣರಾಜ್ಯೋತ್ಸವ ಆಚರಣೆ ಮಾಡಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ತಹಸೀಲ್ದಾರ ಶಶಿಧರ ಮಾಢ್ಯಾಳ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Vijaya Karnataka 12 Jan 2019, 5:00 am
ಹುಬ್ಬಳ್ಳಿ : ತಾಲೂಕು ಆಡಳಿತದಿಂದ ನಗರದ ನೆಹರು ಮೈದಾನದಲ್ಲಿ ಜ.26ರಂದು ಅಚ್ಚುಕಟ್ಟಾಗಿ ಗಣರಾಜ್ಯೋತ್ಸವ ಆಚರಣೆ ಮಾಡಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ತಹಸೀಲ್ದಾರ ಶಶಿಧರ ಮಾಢ್ಯಾಳ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web notice to celebrate a neat republic day
ಅಚ್ಚುಕಟ್ಟಾಗಿ ಗಣರಾಜ್ಯೋತ್ಸವ ಆಚರಿಸಲು ಸೂಚನೆ


ಹುಬ್ಬಳ್ಳಿ ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವ ಆಚರಣೆ ಸುವ್ಯವಸ್ಥಿತವಾಗಿ ಜರುಗಬೇಕು. ಅಚ್ಚುಕಟ್ಟಾದ ವೇದಿಕೆ, ಉತ್ತಮ ಧ್ವನಿವರ್ಧಕ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಪ್ರತಿಯೊಂದು ಇಲಾಖೆ ಅಧಿಕಾರಿಗಳು ಸ್ವಇಚ್ಛೆಯಿಂದ ಭಾಗವಹಿಸಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಸಿ ಕುಂಡಗಳು, ಕುಡಿಯುವ ನೀರು, ಪೊಲೀಸ್‌ ರಕ್ಷ ಣೆ, ತುರ್ತು ಸಂದರ್ಭಗಳಲ್ಲಿ ಸಿದ್ದವಾಗಿರುವಂತೆ ಆರೋಗ್ಯ ಸಿಬ್ಬಂದಿ ನಿಯೋಜಿಸಬೇಕು. ಮಾಧ್ಯಮದವರಿಗೆ ಪ್ರತ್ಯೇಕ ಸ್ಥಳಾವಕಾಶ ನೀಡಬೇಕು. ಪ್ರತಿಯೊಂದು ಶಾಲೆಯ ಮುಖ್ಯಸ್ಥರು ಶಾಲಾ ಮಕ್ಕಳು ಮೈದಾನಕ್ಕೆ ಕರೆತಂದು ಸುರಕ್ಷಿತವಾಗಿ ಕೊಂಡಯ್ಯಬೇಕು ಎಂದು ಹೇಳಿದರು.

ಸಭೆಯಲ್ಲಿ ಅಪರ ತಹಸೀಲ್ದಾರ ಪ್ರಕಾಶ್‌ ನಾಸಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಲಿಂಗರಾಜ ಅಂಗಡಿ, ತಾಪಂ ಸಹಾಯಕ ನಿರ್ದೇಶಕ ಗಂಗಾಧರ ಕಂದಕೂರ, ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ