ಆ್ಯಪ್ನಗರ

ಅನಧಿಕೃತ ಲೇಔಟ್‌ ದಂಡ ಬಳಿಕ ಅಧಿಕೃತ

ಹುಬ್ಬಳ್ಳಿ : ನಗರಾಭಿವೃದ್ದಿ ವ್ಯಾಪ್ತಿಯಲ್ಲಿ ತಲೆ ಎತ್ತಿರುವ ಅನಧಿಕೃತ ಲೇಔಟ್‌ಗಳಿಗೆ ದಂಡ ವಿಧಿಸಿ ಅಧಿಕೃತಗೊಳಿಸುವ ಪ್ರಸ್ತಾವನೆ ಸರಕಾರದ ಮುಂದಿದ್ದು, ಸಂಪುಟದಲ್ಲಿಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.

Vijaya Karnataka 7 Sep 2020, 5:00 am
ಹುಬ್ಬಳ್ಳಿ : ನಗರಾಭಿವೃದ್ದಿ ವ್ಯಾಪ್ತಿಯಲ್ಲಿ ತಲೆ ಎತ್ತಿರುವ ಅನಧಿಕೃತ ಲೇಔಟ್‌ಗಳಿಗೆ ದಂಡ ವಿಧಿಸಿ ಅಧಿಕೃತಗೊಳಿಸುವ ಪ್ರಸ್ತಾವನೆ ಸರಕಾರದ ಮುಂದಿದ್ದು, ಸಂಪುಟದಲ್ಲಿಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.
Vijaya Karnataka Web official after unauthorized layout fines
ಅನಧಿಕೃತ ಲೇಔಟ್‌ ದಂಡ ಬಳಿಕ ಅಧಿಕೃತ


ನಗರದಲ್ಲಿಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಅನಧಿಕೃತ ಲೇಔಟ್‌ಗಳ ಮಾಹಿತಿ ತರಿಸಿಕೊಳ್ಳಲಾಗುತ್ತಿದೆ. ಈ ಬಗೆ ಶೀಘ್ರ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ಅಭಿವೃದ್ಧಿಪಡಿಸುವ ವಸತಿ ವಿನ್ಯಾಸಗಳಲ್ಲಿಶೇ.5ರಷ್ಟನ್ನು ಪತ್ರಕರ್ತರಿಗೆ ಮೀಸಲಿಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಬಳ್ಳಾರಿ, ಮೈಸೂರ, ಕಲಬುರ್ಗಿ ಹಾಗೂ ವಿಜಯಪುರ ಪಾಲಿಕೆಗಳನ್ನು ಸ್ಮಾರ್ಟ್‌ಸಿಟಿ ಯೋಜನೆಗೆ ಒಳಪಡಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅನುಮೋದನೆ ಕೊಡಿಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿಸ್ಮಾರ್ಟ್‌ಸಿಟಿ ಯೋಜನೆಗೆ ಅನುದಾನದ ಕೊರತೆ ಇಲ್ಲ. ತ್ವರಿತ ಕೆಲಸ ಕೈಗೊಳ್ಳುವಂತೆ ತಿಳಿಸಲಾಗಿದೆ. 2800 ಕೋಟಿ ರೂ. ವೆಚ್ಚದಲ್ಲಿಹು-ಧಾ, ಬೆಳಗಾವಿ ಹಾಗೂ ಕಲಬುರಗಿ ಪಾಲಿಕೆ ವ್ಯಾಪ್ತಿಯಲ್ಲಿನಿರಂತರ ನೀರು ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ