ಆ್ಯಪ್ನಗರ

ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗೆಹರಿಸಲು ಬಿಜೆಪಿ ಎಂದಿಗೂ ಪ್ರಯತ್ನ ಮಾಡಿಲ್ಲ; ಸಿದ್ದರಾಮಯ್ಯ

ರಾಜ್ಯದ ಇತಿಹಾಸದಲ್ಲೇ ನಾನು ಕಂಡ ಅತ್ಯಂತ ಕೆಟ್ಟ ಸರಕಾರ ಇದು. ಸರಕಾರದ ನಿರ್ಧಾರದಿಂದ ಪ್ರಜಾಪ್ರಭುತ್ವ ಅಪಾಯ ಎದುರಿಸುತ್ತಿದೆ. ಅಲ್ಲದೇ, ಆರ್ಥಿಕ ಸ್ಥಿತಿ ಬಿಗಡಾಯಿಸಿದೆ. ನಿರೀಕ್ಷೆಯಂತೆ ಬಜೆಟ್‌ನಲ್ಲಿ 50-60 ಸಾವಿರ ಕೋಟಿ ರೂ. ಕಡಿಮೆ ಆಗುವುದಾಗಿ ಸ್ವತಃ ಮುಖ್ಯಮಂತ್ರಿ ಹೇಳಿದ್ದಾರೆ. ಇವುಗಳ ಬಗ್ಗೆ ಹೋರಾಟ ಅಗತ್ಯವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

Vijaya Karnataka Web 12 Jan 2021, 9:33 am
ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗೆಹರಿಸಲು ಬಿಜೆಪಿ ಎಂದಿಗೂ ಪ್ರಯತ್ನ ಮಾಡಿಲ್ಲ ಮತ್ತು ಮಾಡುವುದೂ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Vijaya Karnataka Web Siddaramaiah
ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ (ಸಂಗ್ರಹ ಚಿತ್ರ)


ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗೆಹರಿಸಲು ಬಿಜೆಪಿ ಎಂದಿಗೂ ಪ್ರಯತ್ನ ಮಾಡಿಲ್ಲ. ಪ್ರಮುಖವಾಗಿ ಮಹದಾಯಿ ಸಮಸ್ಯೆ ಬಗೆಹರಿಸಿಲ್ಲ, ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿಲ್ಲ, ಕಲ್ಯಾಣ ಕರ್ನಾಟಕ ಭಾಗಕ್ಕೆ ಅನುದಾನ ನೀಡಿಲ್ಲ, ಎಲ್ಲಕ್ಕಿಂತ ಮುಖ್ಯವಾಗಿ ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶವನ್ನೇ ಕರೆಯುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಆರಂಭದಲ್ಲಿಯೇ ನಮಗೆ ಸಂಪೂರ್ಣ ಬಹುಮತ ಸಿಕ್ಕಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ; ಈಶ್ವರಪ್ಪ
ಪ್ರಾದೇಶಿಕ ಅಸಮತೋಲನ ನಿವಾರಿಸಲು ನಂಜುಂಡಪ್ಪನವರು ನೀಡಿದ್ದ ವರದಿಯ ಅವಧಿ ಮುಗಿದು ಮೂರು ವರ್ಷ ಕಳೆದಿದೆ. ನಮ್ಮ ಅವಧಿಯಲ್ಲಿ ನೀರಾವರಿಗೆ 60 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ. ರೈತರಿಗೆ ಬೇಷರತ್‌ ಸಾಲ ಮನ್ನಾ ಮಾಡಿದ್ದೇವೆ. ಮತ್ತೊಂದು ಬಾರಿ ಅಧಿಕಾರಕ್ಕೆ ಬಂದಿದ್ದರೆ ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣವಾಗುತ್ತಿತ್ತು ಎಂದು ಇದೇ ವೇಳೆ ಹೇಳಿದರು. ಬೆಳಗಾವಿ ಅಧಿವೇಶನ ಕರೆಯದ ಯಡಿಯೂರಪ್ಪ ಇಲ್ಲಿನ ಯೋಜನೆಗೆ ಹಣ ಕೊಡುತ್ತಾರಾ? ಎಂದು ಸಿದ್ದರಾಮಯ್ಯ, ತಿಂಗಳಲ್ಲಿ ಮಹದಾಯಿ ಸಮಸ್ಯೆ ಬಗೆಹರಿಸುತ್ತೇವೆ ಎಂದವರು ಈಗ ನೋಟಿಫಿಕೇಶನ್‌ ಕೂಡ ಹೊರಡಿಸದೆ ಸುಮ್ಮನಾಗಿರುವುದು ಏಕೆ? ಬಿಜೆಪಿಯವರಿಗೆ ಯಾವುದೆ ಸಮಸ್ಯೆ ಇತ್ಯರ್ಥ ಮಾಡಲು ಮನಸ್ಸಿಲ್ಲ. ರಾಜಕೀಯ ಮಾಡಲು ಸಮಸ್ಯೆಗಳನ್ನು ಹಾಗೆ ಉಳಿಸಿಕೊಳ್ಳುತ್ತಾರೆ ಎಂದು ದೂರಿದರು.
ಭಾರತದಲ್ಲಿ ತಿಂದರಷ್ಟೇ ಗೋವು ಮಾತೆಯೇ? ವಿದೇಶಗಳಿಗೆ ರಫ್ತಾಗುತ್ತಿರೋ ಗೋವುಗಳು ಮಾತೆಯಲ್ಲವೇ?; ಸಿದ್ದರಾಮಯ್ಯ
ಇನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ 371 ಜೆ ಘೋಷಿಸಿ 1500 ಕೋಟಿ ರೂ. ನೀಡಿದ್ದೆ. ಈಗ ಯಡಿಯೂರಪ್ಪ ಒಂದು ರೂಪಾಯಿ ಕೊಟ್ಟಿಲ್ಲ. ಇಷ್ಟೆಲ್ಲ ಬೆಳವಣಿಗೆ ಆದರೂ ಜನತೆ ಪ್ರಶ್ನಿಸುತ್ತಲೆ ಇಲ್ಲ. ಹೀಗಾಗಿ ಜನತೆ ಇಂತ ಪ್ರಶ್ನೆಗಳನ್ನು ಎತ್ತುವಂತೆ ಕಾಂಗ್ರೆಸ್ಸಿಗರು ಅರಿವು ಮೂಡಿಸಬೇಕು. ಅಲ್ಲದೇ, ರಾಜ್ಯದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ ಎಂದರು. ರಾಜ್ಯದ ಇತಿಹಾಸದಲ್ಲೇ ನಾನು ಕಂಡ ಅತ್ಯಂತ ಕೆಟ್ಟ ಸರಕಾರ ಇದು. ಸರಕಾರದ ನಿರ್ಧಾರದಿಂದ ಪ್ರಜಾಪ್ರಭುತ್ವ ಅಪಾಯ ಎದುರಿಸುತ್ತಿದೆ. ಅಲ್ಲದೇ, ಆರ್ಥಿಕ ಸ್ಥಿತಿ ಬಿಗಡಾಯಿಸಿದೆ. ನಿರೀಕ್ಷೆಯಂತೆ ಬಜೆಟ್‌ನಲ್ಲಿ 50-60 ಸಾವಿರ ಕೋಟಿ ರೂ. ಕಡಿಮೆ ಆಗುವುದಾಗಿ ಸ್ವತಃ ಮುಖ್ಯಮಂತ್ರಿ ಹೇಳಿದ್ದಾರೆ. ಇವುಗಳ ಬಗ್ಗೆ ಹೋರಾಟ ಅಗತ್ಯವಿದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ