ಆ್ಯಪ್ನಗರ

ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ವಿರೋಧ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಹೆಗ್ಗೇರಿಯಲ್ಲಿರುವ ಡಾ.ಬಾಬಾಸಾಹೇಬ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿವಾಣಿಜ್ಯ ಮಳಿಗೆ ನಿರ್ಮಿಸಬಾರದು ಎಂದು ಒತ್ತಾಯಿಸಿ ಬಹುಜನ ಸಮಾಜ ಪಾರ್ಟಿಯಿಂದ ಪಾಲಿಕೆ ಆಯುಕ್ತರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

Vijaya Karnataka 4 Jul 2020, 5:00 am
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಹೆಗ್ಗೇರಿಯಲ್ಲಿರುವ ಡಾ.ಬಾಬಾಸಾಹೇಬ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿವಾಣಿಜ್ಯ ಮಳಿಗೆ ನಿರ್ಮಿಸಬಾರದು ಎಂದು ಒತ್ತಾಯಿಸಿ ಬಹುಜನ ಸಮಾಜ ಪಾರ್ಟಿಯಿಂದ ಪಾಲಿಕೆ ಆಯುಕ್ತರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
Vijaya Karnataka Web opposition to commercial store building
ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ವಿರೋಧ


ಹಳೇ ಹುಬ್ಬಳ್ಳಿ ಭಾಗದಲ್ಲಿಆಟಕ್ಕೆ ಇದೊಂದೆ ಮೈದಾನವಾಗಿದೆ. ಇದನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ. ಹೀಗಿರುವಾಗ ಇಲ್ಲಿವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲು ಮುಂದಾಗಿರುವುದು ಖಂಡನೀಯ. ಅಲ್ಲದೇ, ಇದು ವ್ಯಾಪಾರ ವಹಿವಾಟು ನಡೆಸಲು ಸೂಕ್ತ ಸ್ಥಳವೂ ಅಲ್ಲ. ಹೀಗಾಗಿ ವಾಣಿಜ್ಯ ಮಳಿಗೆ ನಿರ್ಮಿಸುವ ನಿರ್ಧಾರದಿಂದ ಸರಕಾರ ಹಿಂದೆ ಸರಿಯಬೇಕು ಎಂದು ಮನವಿಯಲ್ಲಿತಿಳಿಸಲಾಗಿದೆ. ಬಿಎಸ್‌ಪಿ ಮುಖಂಡ ರೇವಣಸಿದ್ಧಪ್ಪ ಹೊಸಮನಿದೇಸಾಯಿ, ನಿಸಾರ್‌ ಅಹಮದ್‌, ಹನುಮಂತಪ್ಪ ಯಮನಾಳ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ