ಆ್ಯಪ್ನಗರ

ಆಸ್ತಿ ಕರ ಹೆಚ್ಚಳಕ್ಕೆ ವಿರೋಧ

ಧಾರವಾಡ: ಹು-ಧಾ ಮಹಾನಗರ ಪಾಲಿಕೆಯು ಆಸ್ತಿ ತೆರಿಗೆ ಹೆಚ್ಚಿಗೆ ಮಾಡಿರುವುದನ್ನು ರಾಷ್ಟ್ರೀಯ ಅಪರಾಧ, ಭ್ರಷ್ಟಾಚಾರ ನಿಯಂತ್ರಣ ಮತ್ತು ಮಾನವ ಹಕ್ಕುಗಳ ರಕ್ಷಣಾ ದಳದ ಸದಸ್ಯರು ಖಂಡಿಸಿ ಮುಖ್ಯಮಂತ್ರಿಯವರಿಗೆ ಮನವಿ ರವಾನಿಸಿದ್ದಾರೆ.

Vijaya Karnataka 23 May 2020, 5:00 am
ಧಾರವಾಡ: ಹು-ಧಾ ಮಹಾನಗರ ಪಾಲಿಕೆಯು ಆಸ್ತಿ ತೆರಿಗೆ ಹೆಚ್ಚಿಗೆ ಮಾಡಿರುವುದನ್ನು ರಾಷ್ಟ್ರೀಯ ಅಪರಾಧ, ಭ್ರಷ್ಟಾಚಾರ ನಿಯಂತ್ರಣ ಮತ್ತು ಮಾನವ ಹಕ್ಕುಗಳ ರಕ್ಷಣಾ ದಳದ ಸದಸ್ಯರು ಖಂಡಿಸಿ ಮುಖ್ಯಮಂತ್ರಿಯವರಿಗೆ ಮನವಿ ರವಾನಿಸಿದ್ದಾರೆ.
Vijaya Karnataka Web opposition to increase in asset ties
ಆಸ್ತಿ ಕರ ಹೆಚ್ಚಳಕ್ಕೆ ವಿರೋಧ


ಜನಪ್ರತಿನಿಧಿಗಳಿಲ್ಲದ ಮಹಾನಗರ ಪಾಲಿಕೆಯಲ್ಲಿಸರಕಾರ ಈ ರೀತಿಯ ಅಕ್ರಮಣಕಾರಿ ಕ್ರಮ ಕೈಗೊಳ್ಳುವುದು ಸಂವಿಧಾನ ವಿರೋಧಿಯಾಗಿದೆ. ಲಾಕ್‌ಡೌನ್‌ನಿಂದ ಅವಳಿನಗರದ ಜನರು ಸಾಕಷ್ಟು ಆರ್ಥಿಕ ತೊಂದರೆ ಎದುರಿಸುತ್ತಿದ್ದಾರೆ. ವ್ಯಾಪಾರಸ್ಥರು ವ್ಯಾಪಾರವಿಲ್ಲದೆ ಮಳಿಗೆ ಮುಚ್ಚಿದ್ದಾರೆ. ಕೈಗಾರಿಕೆಗಳು ಸ್ಥಗಿತಗೊಂಡಿವೆ. ಶೇ. 30ರಷ್ಟು ತೆರಿಗೆ ಹೆಚ್ಚಳ ಮಾಡಿದ್ದು ಸರಿಯಲ್ಲ. 2020-21ನೇ ಸಾಲಿನ ಆಸ್ತಿ ತೆರಿಗೆಯನ್ನು ರಾಜ್ಯ ಸರಕಾರದ ಆದೇಶದ ಅನ್ವಯ ಕಡ್ಡಾಯವಾಗಿ ಪರಿಷ್ಕರಣೆ ಮಾಡಿದ್ದು ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಜಾರಿಗೆ ತರಲಾಗಿದೆ. ಇದರಿಂದ ನಾಗರಿಕರಿಗೆ ತೊಂದರೆ ಆಗಲಿದೆ. ಹೀಗಾಗಿ ಕೂಡಲೇ ಸರಕಾರ ತನ್ನ ನಿಲುವನ್ನು ಬದಲಿಸಿ ಆದೇಶವನ್ನು ಹಿಂಪಡೆಯಬೇಕು. ಈ ಕುರಿತು ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ರವಿ ಹಂದಿಗೋಳ ಅವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ