ಆ್ಯಪ್ನಗರ

ಕೋನರಡ್ಡಿ ಹಸ್ತಕ್ಷೇಪಕ್ಕೆ ಮುನೇನಕೊಪ್ಪ ಆಕ್ಷೇಪ

ಹುಬ್ಬಳ್ಳಿ : ಸಿಎಂ ರಾಜಕೀಯ ಕಾರ್ಯದರ್ಶಿ ಎನ್‌.ಎಚ್‌.ಕೋನರಡ್ಡಿಯವರು ನವಲಗುಂದ ಕ್ಷೇತ್ರದಲ್ಲಿ ತೀವ್ರ ಹಸ್ತಕ್ಷೇಪ ಮಾಡುತ್ತಿದ್ದು, ಕ್ಷೇತ್ರದ ಜನಪ್ರತಿನಿಧಿಗಳು ಯಾರು ಎಂಬ ಪ್ರಶ್ನೆ ಜನರಲ್ಲಿ ಕಾಡುತ್ತಿದೆ ಎಂದು ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಆರೋಪಿಸಿದ್ದಾರೆ.

Vijaya Karnataka 13 Jun 2019, 5:00 am
Vijaya Karnataka Web opposition to the intervention of konaradi
ಕೋನರಡ್ಡಿ ಹಸ್ತಕ್ಷೇಪಕ್ಕೆ ಮುನೇನಕೊಪ್ಪ ಆಕ್ಷೇಪ
ಹುಬ್ಬಳ್ಳಿ : ಸಿಎಂ ರಾಜಕೀಯ ಕಾರ್ಯದರ್ಶಿ ಎನ್‌.ಎಚ್‌.ಕೋನರಡ್ಡಿಯವರು ನವಲಗುಂದ ಕ್ಷೇತ್ರದಲ್ಲಿ ತೀವ್ರ ಹಸ್ತಕ್ಷೇಪ ಮಾಡುತ್ತಿದ್ದು, ಕ್ಷೇತ್ರದ ಜನಪ್ರತಿನಿಧಿಗಳು ಯಾರು ಎಂಬ ಪ್ರಶ್ನೆ ಜನರಲ್ಲಿ ಕಾಡುತ್ತಿದೆ ಎಂದು ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಆರೋಪಿಸಿದ್ದಾರೆ.

ಈ ಕುರಿತು ಸಿಎಂ ಎಚ್‌.ಡಿ.ಕುಮಾರಸ್ವಾಮಿ, ವಿಧಾನಸಭಾ ಸಭಾಪತಿ ಕೆ.ಆರ್‌.ರಮೇಶಕುಮಾರ, ಪ್ರತಿಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್‌, ಸಿದ್ಧರಾಮಯ್ಯನವರಿಗೆ ಪತ್ರದ ಮೂಲಕ ದೂರು ಸಲ್ಲಿಸಿದ್ದಾರೆ.

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಮಸ್ಯೆಗಳ ಪರಿಶೀಲನೆಯ ನೆಪದಲ್ಲಿ ವಿನಾಕಾರಣ ಅಧಿಕಾರಿಗಳ ಸಭೆ ಕರೆದು ಅವರಿಗೆ ನಿರ್ದೇಶನ ಹಾಗೂ ಸೂಚನೆ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ಅನಾವಶ್ಯಕ ಹಸ್ತಕ್ಷೇಪ ಮಾಡುತ್ತಿರುವುದರಿಂದ ಅಧಿಕಾರಿ ಹಾಗೂ ಜನರಿಗೆ ಗೊಂದಲ ಸೃಷ್ಠಿಸುತ್ತಿದ್ದಾರೆ. ಇದರಿಂದ ಮಾಜಿ ಶಾಸಕ ಕೋನರಡ್ಡಿಯವರ ಕ್ಷೇತ್ರದ ಅಭಿವೃದ್ಧಿ ಹಾಗೂ ನನ್ನ ಕರ್ತವ್ಯಕ್ಕೆ ಅಡ್ಡಿಪಸುತ್ತಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಕೆಲ ವಿಷಯಕ್ಕಷ್ಟೆ ಸೀಮಿತವಾದ ಹುದ್ದೆಯಾಗಿದೆ. ಚುನಾಯಿತ ಪ್ರತಿನಿಧಿ, ಪರ್ಯಾಯ ಶಾಸಕರ ರೀತಿಯಲ್ಲಿ ವರ್ತಿಸುವುದು ಸರಿಯಲ್ಲ ಎಂದು ಈಗಾಗಲೇ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಅಭಿಪ್ರಾಯ ಪಟ್ಟಿದ್ದಾರೆ. ಕೂಡಲೇ ಸಿಎಂ ಕುಮಾರಸ್ವಾಮಿಯವರು ಸಿಎಂ ರಾಜಕೀಯ ಕಾರ್ಯದರ್ಶಿ ಎನ್‌.ಎಚ್‌.ಕೋನರಡ್ಡಿಯವರಿಗೆ ತಮ್ಮ ಚೌಕಟ್ಟಿನ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯಡಿ ಮಾತ್ರ ಕೆಲಸ ಮಾಡುವಂತೆ ಸೂಚನೆ ನೀಡಬೇಕು ಎಂದು ಶಾಸಕ ಮುನೇನಕೊಪ್ಪ ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ