ಆ್ಯಪ್ನಗರ

ಸಂಸತ್ ಕಲಾಪ ಸುಸೂತ್ರ ನಡೆಸಲು ಸಹಕರಿಸಿ: ಪ್ರತಿಪಕ್ಷಗಳಿಗೆ ಜೋಷಿ ಮನವಿ

ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಭಾನುವಾರ ಆಗಮಿಸಿದ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. 'ಧಾರವಾಡ ಲೋಕಸಭಾ ಕ್ಷೇತ್ರದ ಜನತೆಯ ಆಶೀರ್ವಾದದಿಂದ ಕೇಂದ್ರ ಸಚಿವನಾಗಿದ್ದು ಅವರಿಗೆ ಆಭಾರಿಯಾಗಿದ್ದೇನೆ; ನನಗೆ ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ' ಎಂದು ಜೋಷಿ ತಿಳಿಸಿದರು.

Vijaya Karnataka Web 2 Jun 2019, 12:43 pm
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಯಾವ್ಯಾವ ಯೋಜನೆಗಳು ಬೇಕು ಎಂಬ ಬಗ್ಗೆ ರಾಜ್ಯ ಸರಕಾರ ಪ್ರಸ್ತಾವಗಳನ್ನು ಸಲ್ಲಿಸಬೇಕು; ಅವುಗಳನ್ನು ಕೇಂದ್ರದಿಂದ ತರುವ ಕೆಲಸ ಮಾಡುತ್ತೇನೆ ಎಂದು ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.
Vijaya Karnataka Web Prhald Joshi in Hubli


ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಭಾನುವಾರ ಆಗಮಿಸಿದ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

'ಧಾರವಾಡ ಲೋಕಸಭಾ ಕ್ಷೇತ್ರದ ಜನತೆಯ ಆಶೀರ್ವಾದದಿಂದ ಕೇಂದ್ರ ಸಚಿವನಾಗಿದ್ದು ಅವರಿಗೆ ಆಭಾರಿಯಾಗಿದ್ದೇನೆ; ನನಗೆ ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ' ಎಂದು ಜೋಷಿ ತಿಳಿಸಿದರು.

'ಮುಂಬರುವ ಸಂಸತ್ ಅಧಿವೇಶನ ಸುಸೂತ್ರವಾಗಿ ನಡೆಯಲು ಪ್ರತಿಪಕ್ಷಗಳು ಸಹಕಾರ ನೀಡಬೇಕು. ಈ ಬಗ್ಗೆ ಎಲ್ಲ ಪ್ರತಿ ಪಕ್ಷಗಳ ನಾಯಕರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ' ಎಂದು ಜೋಷಿ ಹೇಳಿದರು.

ಮಹದಾಯಿ ಕುರಿತು ಕಾನೂನು ತಜ್ಞರು ಜೊತೆಗೆ ಚರ್ಚೆಸಲಿ. ಅಧಿಸೂಚನೆ ಹೊರಡಿಸುವುದು (ನೋಟಿಫಿಕೇಶನ್) ಬಾಕಿಯಿದೆ. ಹಾಗಾಗಿ ಕಾನೂನು ತಜ್ಞರ ಜೊತೆಗೆ ಚರ್ಚೆಸಲಿ. ಎಲ್ಲರೂ ಸೇರಿಕೊಂಡು ಮಹದಾಯಿ ಸಮಸ್ಯೆ ಬಗೆಹರಿಸೋಣ. ಇದರಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಸಚಿವರು ನುಡಿದರು.

ಕೋಯ್ನಾ ನದಿ ಸಮಸ್ಯೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆ ಚರ್ಚಿಸಿ ಬಗೆಹರಿಸುವುದಾಗಿ ಭರವಸೆ ನೀಡಿದ ಅವರು, ಈ ಕುರಿತು ರಾಜ್ಯ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದೇನೆ ಎಂದರು.

ಸಚಿವರಿಗೆ ಭರ್ಜರಿ ಸ್ವಾಗತ, ಬೈಕ್ ರ‍್ಯಾಲಿ: ಸಚಿವರಾದ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಸಚಿವ ಜೋಷಿ ಅವರಿಗೆ ನೂರಾರು ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ವಿಮಾನ ನಿಲ್ದಾಣದಿಂದ ಚನ್ನಮ್ಮ ವೃತ್ತದ ವರೆಗೂ ಬೃಹತ್ ಮೆರವಣಿಗೆ, ಬೈಕ್‌ ರ‍್ಯಾಲಿ ನಡೆಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ