ಆ್ಯಪ್ನಗರ

ಪೇ ಸಿಎಂ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡದಲ್ಲಿ ಪೇ ಮೇಯರ್ ಅಭಿಯಾನ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ವೈರಲ್

‘ಕೈ’ ನಾಯಕರಿಂದ ಪೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಅಭಿಯಾನ ಆರಂಭವಾಗಿದ್ದು, ರಾಷ್ಟ್ರಪತಿ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ ಸುಮಾರು 1.5 ಕೋಟಿ ದುಂದು ವೆಚ್ಚ ಮಾಡಿದ್ದಕ್ಕೆ ಪೇ ಮೇಯರ್ ಅಭಿಯಾನ ಆರಂಭಿಸಿದ್ದಾರೆ ಎನ್ನಲಾಗಿದೆ. ಪೆಂಡಾಲ್ ಹಾಕಿದ ನಂತರ ಕೊಟೇಶನ್ ಕೇಳಿ ಹುಬ್ಬಳ್ಳಿಯ ಮಾನ ಕಳೆದ ಮೇಯರ್ ತಕ್ಷಣ ರಾಜೀನಾಮೆ ಕೊಡಿ ಎಂದು ಅಭಿಯಾ‌ನ ನಡೆಸಿದ್ದಾರೆ. ರಾಜಕೀಯ ಪಕ್ಷ ಹಾಗೂ ರಾಜಕಾರಣಿಗಳ ವಿರುದ್ದ ಜನಸಾಮಾನ್ಯರು ಸಹ ವಿವಿಧ ಸಂಘಟನೆಗಳು ಸಿಡಿದೆದಿದ್ದಾರೆ. ಈ ನಡುವೆ ಕೈ, ಕಮಲ ಗದ್ದಲ ಆರೋಪ ಪ್ರತ್ಯಾರೋಪದಿಂದ ಅನ್ನದಾತರು ರೊಚ್ಚಿಗೆದ್ದಿದ್ದಾರೆ.

Lipi 28 Sep 2022, 12:00 pm
ಹುಬ್ಬಳ್ಳಿ-ಧಾರವಾಡ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಬೆಂಗಳೂರು ಹಾಗೂ ಮೈಸೂರು ಮಾದರಿಯಲ್ಲಿ ಪೇ ಮೇಯರ್ ಅಭಿಯಾನ ಆರಂಭವಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Vijaya Karnataka Web pay mayor


ಹೌದು, ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಮೇಯರ್ ಈರೇಶ್ ಅಂಚಟಗೇರಿ ವಿರುದ್ಧ ಪೇ ಮೇಯರ್ ಅಭಿಯಾನ ಸದ್ದು ಮಾಡಿದೆ.

Pay Cm Poster Campaign: ಕಾಂಗ್ರೆಸ್ಸಿನದ್ದು ಡರ್ಟಿ ಪಾಲಿಟಿಕ್ಸ್: ಬಸವರಾಜ ಬೊಮ್ಮಾಯಿ
‘ಕೈ’ ನಾಯಕರಿಂದ ಪೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಅಭಿಯಾನ ಆರಂಭವಾಗಿದ್ದು, ರಾಷ್ಟ್ರಪತಿ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ ಸುಮಾರು 1.5 ಕೋಟಿ ದುಂದು ವೆಚ್ಚ ಮಾಡಿದ್ದಕ್ಕೆ ಪೇ ಮೇಯರ್ ಅಭಿಯಾನ ಆರಂಭಿಸಿದ್ದಾರೆ ಎನ್ನಲಾಗಿದೆ.

ಪೆಂಡಾಲ್ ಹಾಕಿದ ನಂತರ ಕೊಟೇಶನ್ ಕೇಳಿ ಹುಬ್ಬಳ್ಳಿಯ ಮಾನ ಕಳೆದ ಮೇಯರ್ ತಕ್ಷಣ ರಾಜೀನಾಮೆ ಕೊಡಿ ಎಂದು ಅಭಿಯಾ‌ನ ನಡೆಸಿದ್ದಾರೆ. ರಾಜಕೀಯ ಪಕ್ಷ ಹಾಗೂ ರಾಜಕಾರಣಿಗಳ ವಿರುದ್ದ ಜನಸಾಮಾನ್ಯರು, ವಿವಿಧ ಸಂಘಟನೆಗಳು ಸಿಡಿದೆದಿದ್ದಾರೆ. ಈ ನಡುವೆ ಕೈ, ಕಮಲ ಗದ್ದಲ ಆರೋಪ ಪ್ರತ್ಯಾರೋಪದಿಂದ ಅನ್ನದಾತರು ರೊಚ್ಚಿಗೆದ್ದಿದ್ದಾರೆ.

ವಿಧಾನಸಭಾ ಕಲಾಪದಲ್ಲಿ ಬರಿ ಪೇ ಸಿಎಂ, ಪೇ ಫಾರ್ ಕಾಂಗ್ರೆಸ್ ಸದ್ದು ಗದ್ದಲ ಹಿನ್ನೆಲೆ ಬರಿ ಆರೋಪಗಳನ್ನ ಮಾಡುತ್ತಿರುವ ರಾಜಕಾರಣಿಗಳಿಗೆ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳು ಜ್ವಲಂತ ಸಮಸ್ಯೆ ಬಗ್ಗೆ ಚರ್ಚಿಸದೆ ಸಮಯ ವ್ಯರ್ಥ ಮಾಡುತ್ತಿರುವ ರಾಜಕಾರಣಿಗಳು ಎಂದು ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ರೈತರ ಬಗ್ಗೆ ಕಾಳಜಿ ಹೊಂದಿರದ ರಾಜಕೀಯ ಪಕ್ಷ ಹಾಗೂ ರಾಜಕಾರಣಿಗಳಿಗೆ ಜನರು ಛೀಮಾರಿ ಹಾಕುತ್ತಿದ್ದಾರೆ.

ಮುಂದಿನ ಲೇಖನ