ಆ್ಯಪ್ನಗರ

ಹೊರಗುತ್ತಿಗೆ ಕಾರ್ಮಿಕರಿಗೆ ವೇತನ ನೀಡಿ

ಧಾರವಾಡ: ಹಾಸ್ಟೆಲ್‌, ವಸತಿಶಾಲೆ, ಆಶ್ರಮ ಶಾಲೆಗಳ ಹೊರಗುತ್ತಿಗೆ ಕಾರ್ಮಿಕರಿಗೆ ಲಾಕ್‌ಡೌನ್‌ ಅವಧಿಯ ವೇತನ ಮತ್ತು ಎಂದಿನಂತೆ ಜೂನ್‌ ತಿಂಗಳಿನ ವೇತನ ನೀಡಬೇಕು ಎಂದು ಎಐಯುಟಿಯುಸಿ ಹಾಗೂ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ ಆಗ್ರಹಿಸಿದೆ.

Vijaya Karnataka 15 Jun 2020, 5:00 am
ಧಾರವಾಡ: ಹಾಸ್ಟೆಲ್‌, ವಸತಿಶಾಲೆ, ಆಶ್ರಮ ಶಾಲೆಗಳ ಹೊರಗುತ್ತಿಗೆ ಕಾರ್ಮಿಕರಿಗೆ ಲಾಕ್‌ಡೌನ್‌ ಅವಧಿಯ ವೇತನ ಮತ್ತು ಎಂದಿನಂತೆ ಜೂನ್‌ ತಿಂಗಳಿನ ವೇತನ ನೀಡಬೇಕು ಎಂದು ಎಐಯುಟಿಯುಸಿ ಹಾಗೂ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ ಆಗ್ರಹಿಸಿದೆ.
Vijaya Karnataka Web pay wages to outsourced workers
ಹೊರಗುತ್ತಿಗೆ ಕಾರ್ಮಿಕರಿಗೆ ವೇತನ ನೀಡಿ


ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳ ಸಚಿವರಿಗೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿದ ಸಂಘದ ಪದಾಧಿಕಾರಿಗಳು ತಮ್ಮ ಬೇಡಿಕೆಯನ್ನು ತಕ್ಷಣವೇ ಈಡೇರಿಸಬೇಕು ಎಂದು ಆಗ್ರಹಿಸಿದರು.

ಲಾಕ್‌ಡೌನ್‌ ಅವಧಿಯಲ್ಲಿಎಲ್ಲಗುತ್ತಿಗೆ ಕಾರ್ಮಿಕರಿಗೂ ವೇತನ ನೀಡಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ. ಆದರೆ ಕೆಲವು ಜಿಲ್ಲೆಗಳಲ್ಲಿಅಧಿಕಾರಿಗಳು ವೇತನ ನೀಡಿದರೆ ಕೆಲವು ಜಿಲ್ಲೆಗಳಲ್ಲಿನಿರಾಕರಿಸಲಾಗಿದೆ ಎಂದು ಬೇಸರಿಸಿದರು.

ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ, ಕಾರ್ಯದರ್ಶಿ ರಮೇಶ ಹೊಸಮನಿ, ಮುಖಂಡರಾದ ಮಹಾದೇವಿ ಹಡಪದ, ಸುಮಾ ಶಿಂಧೆ, ಲಕ್ಷ್ಮೇ, ಸುಧಾ ಮುಂತಾದವರು ಮನವಿ ಸಲ್ಲಿಸುವ ನಿಯೋಗದಲ್ಲಿಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ