ಧಾರವಾಡ : ಮಹದಾಯಿ ಅಚ್ಚುಕಟ್ಟು ಪ್ರದೇಶಕ್ಕೆ 5 ಟಿಎಂಸಿ ನೀರು ನೀಡುವಂತೆ ನ್ಯಾಯಾಲಯ ಆದೇಶ ನೀಡಿದರೂ ನೀರು ತರುವಲ್ಲಿ ನಾಲ್ಕು ಜಿಲ್ಲೆಯ ಶಾಸಕರು ಹಾಗೂ ಸಂಸದರು ವಿಫಲರಾಗಿದ್ದು ಈ ಕುರಿತು ಫೆ.16 ಬೆಳಗ್ಗೆ 11.30ಕ್ಕೆ ನರಗುಂದದಲ್ಲಿ ಚಿಂತನ ಮಂಥನ ಕಾರ್ಯಕ್ರಮ ಹಮಿಕೊಳ್ಳಲಾಗಿದೆ ಎಂದು ರೈತ ಸೇನಾ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷ ವಿರೇಶ ಸೊಬರದಮಠ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ಹೋರಾಟದಿಂದ ರೈತರ ಸಾವು, ಅಲ್ಲದೇ ಸಾಕಷ್ಟು ಪ್ರಮಾಣದಲ್ಲಿ ಜನರು, ರೈತರು ಗಾಯಗೊಂಡಿದ್ದಾರೆ. ಆದರೆ, ರಾಜ್ಯ ಹಾಗೂ ಕೇಂದ್ರ ಸರಕಾರಗಳು ಮಹದಾಯಿ ವಿಚಾರದಲ್ಲಿ ವಿಳಂಬ ಧೋರಣೆ ತೋರುತ್ತಿದ್ದು, ಈ ಕುರಿತು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅಲ್ಲದೇ ಮಹದಾಯಿ ಯೋಜನೆಯಲ್ಲಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಯ ಶಾಸಕರು ಹಾಗೂ ಸಂಸದರ ಇಚ್ಛಾಶಕ್ತಿ ಕೊರತೆಯಿಂದ ಯೋಜನೆ ವಿಳಂಬವಾಗುತ್ತಿದೆ ಎಂದರು.
ಈಗಾಗಲೇ ಮಹದಾಯಿ ಹೋರಾಟ ಸುಮಾರು ವರ್ಷಗಳಿಂದ ನಡೆಯುತ್ತಿದ್ದು ರೈತರು, ವ್ಯಾಪಾರಸ್ಥರು, ವಿವಿಧ ಸಂಘಟನೆಗಳು, ಬುದ್ಧಿಜೀವಿಗಳು ಸೇರಿದಂತೆ ಸಾರ್ವಜನಿಕರು ಈ ಹೋರಾಟವನ್ನು ಮಾಡುತ್ತಿದ್ದರು. ಸರಕಾರ ಮಾತ್ರ ರೈತರ ಬೇಡಿಕೆ ಈಡೇರಿಸುತ್ತಿಲ್ಲ. ಈ ಹೋರಾಟದಲ್ಲಿ ಎಷ್ಟೇ ಅಡೆತಡೆಗಳು ಬಂದರು ಮಹದಾಯಿ ನದಿ ನೀರನ್ನು ರೈತರಿಗೆ ತಲುಪಿಸುವ ಗುರಿ ಹೊಂದಿದ್ದೇವೆ ಎಂದರು.
ಈ ಎಲ್ಲ ಸಮಸ್ಯೆಗಳ ಕುರಿತಾಗಿ ಫೆ.16 ರಂದು ನರಗುಂದದಲ್ಲಿ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಾಧೀಶ ಹಾಗೂ ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷ ಣಾ ಆಯೋಗದ ಅಧ್ಯಕ್ಷ ಕೆ.ಎಲ್. ಮಂಜುನಾಥ ಅವರು ಮಹದಾಯಿ ಕಳಸಾ- ಬಂಡೂರಿ ನದಿ ನೀರಿನ ನ್ಯಾಯಾಧೀಕರಣ ಕುರಿತು ಮಾತನಾಡುತ್ತಾರೆ ಎಂದರು.ಅಂದಿನ ಕಾರ್ಯಕ್ರಮದಲ್ಲಿ ಮಹದಾಯಿ ವಿಚಾರದ ಕುರಿತು ರೈತರು ತಿಳಿದುಕೊಳ್ಳುವ ವಿಷಯ. ಹಾಗೂ ಕೈಗೊಳ್ಳಬೇಕಾದ ಕಾನೂನಾತ್ಮಕ ಹೋರಾಟದ ಬಗ್ಗೆ ಚರ್ಚೆ ನಡೆಯಲಿದೆ ಎಂದರು.
ಅಲ್ಲದೇ ಸದ್ಯ ರೈತರ ಹೋರಾಟಕ್ಕೆ ಕೊನೆಗೂ ನ್ಯಾಯಾಧೀಕರಣದಿಂದ ಸ್ವಲ್ಪ ಪ್ರಮಾಣದಲ್ಲಿ ಜಯ ಸಿಕ್ಕಿದ್ದು, ಸಂಪೂರ್ಣ ಜಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದರು. ಗಂಗಣ್ಣ ವೀರೇಶನವರ, ಸುಭಾಸ ಬಾಳೀಕಾಯಿ, ಗಂಗಾಧರ ಸೇರಿಂದತೆ ಇತರರು ಇದ್ದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ಹೋರಾಟದಿಂದ ರೈತರ ಸಾವು, ಅಲ್ಲದೇ ಸಾಕಷ್ಟು ಪ್ರಮಾಣದಲ್ಲಿ ಜನರು, ರೈತರು ಗಾಯಗೊಂಡಿದ್ದಾರೆ. ಆದರೆ, ರಾಜ್ಯ ಹಾಗೂ ಕೇಂದ್ರ ಸರಕಾರಗಳು ಮಹದಾಯಿ ವಿಚಾರದಲ್ಲಿ ವಿಳಂಬ ಧೋರಣೆ ತೋರುತ್ತಿದ್ದು, ಈ ಕುರಿತು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅಲ್ಲದೇ ಮಹದಾಯಿ ಯೋಜನೆಯಲ್ಲಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಯ ಶಾಸಕರು ಹಾಗೂ ಸಂಸದರ ಇಚ್ಛಾಶಕ್ತಿ ಕೊರತೆಯಿಂದ ಯೋಜನೆ ವಿಳಂಬವಾಗುತ್ತಿದೆ ಎಂದರು.
ಈಗಾಗಲೇ ಮಹದಾಯಿ ಹೋರಾಟ ಸುಮಾರು ವರ್ಷಗಳಿಂದ ನಡೆಯುತ್ತಿದ್ದು ರೈತರು, ವ್ಯಾಪಾರಸ್ಥರು, ವಿವಿಧ ಸಂಘಟನೆಗಳು, ಬುದ್ಧಿಜೀವಿಗಳು ಸೇರಿದಂತೆ ಸಾರ್ವಜನಿಕರು ಈ ಹೋರಾಟವನ್ನು ಮಾಡುತ್ತಿದ್ದರು. ಸರಕಾರ ಮಾತ್ರ ರೈತರ ಬೇಡಿಕೆ ಈಡೇರಿಸುತ್ತಿಲ್ಲ. ಈ ಹೋರಾಟದಲ್ಲಿ ಎಷ್ಟೇ ಅಡೆತಡೆಗಳು ಬಂದರು ಮಹದಾಯಿ ನದಿ ನೀರನ್ನು ರೈತರಿಗೆ ತಲುಪಿಸುವ ಗುರಿ ಹೊಂದಿದ್ದೇವೆ ಎಂದರು.
ಈ ಎಲ್ಲ ಸಮಸ್ಯೆಗಳ ಕುರಿತಾಗಿ ಫೆ.16 ರಂದು ನರಗುಂದದಲ್ಲಿ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಾಧೀಶ ಹಾಗೂ ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷ ಣಾ ಆಯೋಗದ ಅಧ್ಯಕ್ಷ ಕೆ.ಎಲ್. ಮಂಜುನಾಥ ಅವರು ಮಹದಾಯಿ ಕಳಸಾ- ಬಂಡೂರಿ ನದಿ ನೀರಿನ ನ್ಯಾಯಾಧೀಕರಣ ಕುರಿತು ಮಾತನಾಡುತ್ತಾರೆ ಎಂದರು.ಅಂದಿನ ಕಾರ್ಯಕ್ರಮದಲ್ಲಿ ಮಹದಾಯಿ ವಿಚಾರದ ಕುರಿತು ರೈತರು ತಿಳಿದುಕೊಳ್ಳುವ ವಿಷಯ. ಹಾಗೂ ಕೈಗೊಳ್ಳಬೇಕಾದ ಕಾನೂನಾತ್ಮಕ ಹೋರಾಟದ ಬಗ್ಗೆ ಚರ್ಚೆ ನಡೆಯಲಿದೆ ಎಂದರು.
ಅಲ್ಲದೇ ಸದ್ಯ ರೈತರ ಹೋರಾಟಕ್ಕೆ ಕೊನೆಗೂ ನ್ಯಾಯಾಧೀಕರಣದಿಂದ ಸ್ವಲ್ಪ ಪ್ರಮಾಣದಲ್ಲಿ ಜಯ ಸಿಕ್ಕಿದ್ದು, ಸಂಪೂರ್ಣ ಜಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದರು. ಗಂಗಣ್ಣ ವೀರೇಶನವರ, ಸುಭಾಸ ಬಾಳೀಕಾಯಿ, ಗಂಗಾಧರ ಸೇರಿಂದತೆ ಇತರರು ಇದ್ದರು.