ಆ್ಯಪ್ನಗರ

ಕ್ರೀಡೆಯಿಂದ ವ್ಯಕ್ತಿತ್ವ ನಿರ್ಮಾಣ ಸಾಧ್ಯ

ಹುಬ್ಬಳ್ಳಿ : ಕ್ರೀಡೆಯು ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸಲು ಪ್ರಮುಖ ಪಾತ್ರ ವಹಿಸಿದ್ದು, ವಿಶ್ವವಿದ್ಯಾಲಯದ ಎಲ್ಲ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ವ್ಯಕ್ತ ಪಡಿಸಬೇಕು ಮತ್ತು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯಕಾಪಾಡಿಕೊಂಡು ಸದೃಢ ಸಮಾಜ ನಿರ್ಮಿಸಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ವಿವಿ ದೈಹಿಕ ಶಿಕ್ಷ ಣ ವಿಭಾಗ ನಿರ್ದೇಶಕ ಡಾ. ಖಲಿದ ಖಾನ ಹೇಳಿದರು.

Vijaya Karnataka 29 Aug 2019, 5:00 am
ಹುಬ್ಬಳ್ಳಿ : ಕ್ರೀಡೆಯು ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸಲು ಪ್ರಮುಖ ಪಾತ್ರ ವಹಿಸಿದ್ದು, ವಿಶ್ವವಿದ್ಯಾಲಯದ ಎಲ್ಲ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ವ್ಯಕ್ತ ಪಡಿಸಬೇಕು ಮತ್ತು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯಕಾಪಾಡಿಕೊಂಡು ಸದೃಢ ಸಮಾಜ ನಿರ್ಮಿಸಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ವಿವಿ ದೈಹಿಕ ಶಿಕ್ಷ ಣ ವಿಭಾಗ ನಿರ್ದೇಶಕ ಡಾ. ಖಲಿದ ಖಾನ ಹೇಳಿದರು.
Vijaya Karnataka Web personality building is possible through sport
ಕ್ರೀಡೆಯಿಂದ ವ್ಯಕ್ತಿತ್ವ ನಿರ್ಮಾಣ ಸಾಧ್ಯ


ಗುರುಸಿದ್ದಪ್ಪ ಕೋತಂಬ್ರಿ ಕಾನೂನು ಮಹಾವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಒಂದು ದಿನದ ಕ್ರೀಡೆ ಮತ್ತು ಗ್ರಂಥಾಲಯದ ಪ್ರಶಿಕ್ಷ ಣ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕೆಎಲ್‌ಇ ಸಂಸ್ಥೆಯ ಪಿಸಿ ಜಾಬಿನ ವಿಜ್ಞಾನ ಮಹಾವಿದ್ಯಾಲಯ ಗ್ರಂಥಪಾಲಕ ಬಿ.ಎಸ್‌.ಮಾಳವಾಡ ಮಾತನಾಡಿ, ಗ್ರಂಥಾಲಯಗಳು ದೇವಾಲಯದ ಸಮಾನವಾಗಿದ್ದು ವಿದ್ಯಾರ್ಥಿಗಳು ಸಂಶೋಧನಾತ್ಮಕ ಕಲೆಯನ್ನು ಕರಗತ ಮಾಡಿಕೊಂಡು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಲು ತಿಳಿಸಿದರು.

ಪ್ರಾಚಾರ್ಯ ಡಾ. ಶಾರದಾ ಜಿ. ಪಾಟೀಲ ಅಧ್ಯಕ್ಷ ತೆ ವಹಿಸಿದ್ದರು. ದೈಹಿಕ ಶಿಕ್ಷ ಣ ನಿರ್ದೇಶಕ ಬಾಹುಬಲಿ ಕುರಕುರಿ ಸ್ವಾಗತಿಸಿದರು. ಗ್ರಂಥಪಾಲಕ ಸತೀಶ ಎಂ. ನಾಶಿಪುಡಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಶಿಕ್ಷ ಕ ಮತ್ತು ಶಿಕ್ಷ ಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ