ಆ್ಯಪ್ನಗರ

ಸಿಎಎ ವಿರೋಧಿ ಪ್ರತಿಭಟನೆಗೆ ಬೆಂಬಲಿಸದಿರಲು ಮನವಿ

ಹುಬ್ಬಳ್ಳಿ: ಕೇಂದ್ರ ಸರಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಹುಬ್ಬಳ್ಳಿ ಪೂರ್ವ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿಜ.28ರಂದು ಆಯೋಜಿಸಿರುವ ಪ್ರತಿಭಟನೆಗೆ ನಗರದ ಎಸ್‌ಸಿ,ಎಸ್‌ಟಿ ಸಮುದಾಯದವರು ಬೆಂಬಲ ನೀಡಬಾರದು ಎಂದು ರಾಜ್ಯ ಎಸ್‌.ಸಿ. ಮೋರ್ಚಾ ಉಪಾಧ್ಯಕ್ಷ ಲಕ್ಷ್ಮಣ ಬೀಳಗಿ ಹಾಗೂ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಹೇಳಿದರು.

Vijaya Karnataka 28 Jan 2020, 5:00 am
ಹುಬ್ಬಳ್ಳಿ: ಕೇಂದ್ರ ಸರಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಹುಬ್ಬಳ್ಳಿ ಪೂರ್ವ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿಜ.28ರಂದು ಆಯೋಜಿಸಿರುವ ಪ್ರತಿಭಟನೆಗೆ ನಗರದ ಎಸ್‌ಸಿ,ಎಸ್‌ಟಿ ಸಮುದಾಯದವರು ಬೆಂಬಲ ನೀಡಬಾರದು ಎಂದು ರಾಜ್ಯ ಎಸ್‌.ಸಿ. ಮೋರ್ಚಾ ಉಪಾಧ್ಯಕ್ಷ ಲಕ್ಷ್ಮಣ ಬೀಳಗಿ ಹಾಗೂ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಹೇಳಿದರು.
Vijaya Karnataka Web petition not to support anti caa protest
ಸಿಎಎ ವಿರೋಧಿ ಪ್ರತಿಭಟನೆಗೆ ಬೆಂಬಲಿಸದಿರಲು ಮನವಿ


ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯಿದೆಯಿಂದ ದೇಶದ ಪ್ರಜೆಗಳಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಕೆಲ ಕಾಂಗ್ರೆಸ್‌ ನಾಯಕರು ಪೌರತ್ವ ತಿದ್ದುಪಡಿ ಕಾಯಿದೆಯನ್ನು ತಿರುಚಲು ಮತ್ತು ದೇಶದಲ್ಲಿಕೋಮುವಾದ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕಾಯಿದೆ ಬಗ್ಗೆ ಸ್ಪಷ್ಟ ತಿಳಿವಳಿಕೆ ಇಲ್ಲದ ಸ್ಥಳೀಯ ಕಾಂಗ್ರೆಸ್‌ ಶಾಸಕರೊಬ್ಬರು ಅಲ್ಪಸಂಖ್ಯಾತರ ಮತ್ತು ದಲಿತರ ಮತ ಬ್ಯಾಂಕ್‌ಗೆ ಜನರಲ್ಲಿಕೋಮುವಾದದ ಬೀಜ ಬಿತ್ತುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಪಕ್ಷದ ನಾಯಕರು ಹಿಂದೆ ಧರ್ಮದ ಆಧಾರದ ಮೇಲೆ ದೇಶ ವಿಭಜನೆ ಮಾಡಿರದಿದ್ದರೆ ಇಂದು ಪೌರತ್ವ ತಿದ್ದುಪಡಿ ಕಾಯ್ದೆಯ ಅವಶ್ಯಕತೆಯೇ ಇರುತ್ತಿರಲಿಲ್ಲ. ಕಾಂಗ್ರೆಸ್‌ ಕೋಮುವಾದದಿಂದಾಗಿ ಇಂದು ಪೌರತ್ವ ತಿದ್ದುಪಡಿ ಕಾಯಿದೆ ಜಾರಿಗೆ ತರಬೇಕಾದ ಅನಿವಾರ್ಯತೆ ಇದೆ. ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯನ್ನು ಪ್ರತಿಯೊಬ್ಬರು ವಿರೋಧಿಸಬೇಕು. ಮುಂಬರುವ ದಿನಗಳಲ್ಲಿಬಿಜೆಪಿ ವತಿಯಿಂದ ಪ್ರತಿ ಮನೆ-ಮನೆಗೆ ಹೋಗಿ ಪೌರತ್ವ ತಿದ್ದುಪಡಿ ಕಾಯಿದೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿಜಿಲ್ಲಾಬಿಜೆಪಿ ಎಸ್‌ಸಿ ಮೋರ್ಚಾ ರಂಗನಾಯಕ ತಪೆಲಾ, ಅರುಣ ಹುದ್ದಲಿ, ಸಂತೋಷ ಅರಕೇರಿ, ಚಂದ್ರಶೇಖರ ಗೋಕಾಕ, ಹನಮಂತಪ್ಪ ದೊಡ್ಡಮನಿ ಇದ್ದರು.

ಬಹಿರಂಗ ಚರ್ಚೆಗೆ ಬರುವಂತೆ ಸವಾಲ್‌
ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಹೋರಾಟ ನಡೆಸುತ್ತಿರುವ ಹು-ಧಾ ಪೂರ್ವ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರಸಾದ ಅಬ್ಬಯ್ಯ ಅವರು ಆ ವಿಷಯದ ಕುರಿತು ಬಹಿರಂಗ ಚರ್ಚೆಗೆ ಬರಲಿ ಎಂದು ಬಿಜೆಪಿ ಮುಖಂಡ ಮಹೇಂದ್ರ ಕೌತಾಳ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಕಾಯಿದೆಯ ಬಗ್ಗೆ ಜನರಲ್ಲಿತಪ್ಪು ಸಂದೇಶ ಸಾರುತ್ತಿರುವ ಶಾಸಕ ಅಬ್ಬಯ್ಯ ಅವರಿಗೆ ನಾವೇ ವೇದಿಕೆ ಸಿದ್ಧಪಡಿಸುವ ಜತೆಗೆ ಬಹಿರಂಗ ಚರ್ಚೆಗೆ ಕರೆಯುತ್ತಿದ್ದೇವೆ ಎಂದ ಅವರು, ಸುಮ್ಮನೆ ಅಲ್ಪಸಂಖ್ಯಾತರನ್ನು ಹಾಗೂ ಮುಸ್ಲಿಂ ಸಮುದಾಯದ ಜನರನ್ನು ದಾರಿ ತಪ್ಪಿಸುವುದನ್ನು ಶಾಸಕ ಅಬ್ಬಯ್ಯನವರು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ