ಆ್ಯಪ್ನಗರ

ನೈಸರ್ಗಿಕ ಸಂಪತ್ತು ಉಳಿಸಲು ಪಣ ತೊಡಿ

ಅಳ್ನಾವರ : ನೈಸರ್ಗಿಕ ಸಂಪತ್ತುಗಳಾದ ಇಂದನ, ನೀರು, ಪರಿಸರ ಉಳಿಸಲು ಎಲ್ಲರೂ ಪಣ ತೊಡಬೇಕು. ಶಾಲಾ ಹಂತದಲ್ಲಿಯೇ ಜಾಗೃತಿ ಮೂಡಿಸಲು ಹಲವು ಸ್ಪರ್ಧೆ ಹಮ್ಮಿಕೊಂಡು ಅರಿವು ಮೂಡಿಸಲಾಗುತ್ತಿದೆ ಎಂದು ರತ್ನಾ ಹಿರೇಮಠ ಹೇಳಿದರು.

Vijaya Karnataka 23 Sep 2019, 5:00 am
ಅಳ್ನಾವರ : ನೈಸರ್ಗಿಕ ಸಂಪತ್ತುಗಳಾದ ಇಂದನ, ನೀರು, ಪರಿಸರ ಉಳಿಸಲು ಎಲ್ಲರೂ ಪಣ ತೊಡಬೇಕು. ಶಾಲಾ ಹಂತದಲ್ಲಿಯೇ ಜಾಗೃತಿ ಮೂಡಿಸಲು ಹಲವು ಸ್ಪರ್ಧೆ ಹಮ್ಮಿಕೊಂಡು ಅರಿವು ಮೂಡಿಸಲಾಗುತ್ತಿದೆ ಎಂದು ರತ್ನಾ ಹಿರೇಮಠ ಹೇಳಿದರು.
Vijaya Karnataka Web pledge to save natural wealth
ನೈಸರ್ಗಿಕ ಸಂಪತ್ತು ಉಳಿಸಲು ಪಣ ತೊಡಿ


ಭಾರತ ಸರಕಾರದ ಇಂದನ ಸಂರಕ್ಷಣೆ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಅನ್ನಪೂರ್ಣ ಚಂದ್ರಶೇಖರಯ್ಯ ಹಿರೇಮಠ ಆಂಗ್ಲಮಾಧ್ಯಮ ಶಾಲಾ ಮಕ್ಕಳಿಗೆ ಹಮ್ಮಿಕೊಂಡ ಕ್ವಿಜ್‌, ಪ್ರಬಂಧ ಹಾಗೂ ಪೇಂಟಿಂಗ್‌ ಸ್ಪರ್ಧೆಯಲ್ಲಿಭಾಗಿಯಾದ ಎಲ್ಲ51 ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಮಾತನಾಡಿದರು. ಸ್ಪರ್ಧಾಳುಗಳು ಆನಲೈನ ಮೂಲಕ ಹೆಸರು ನೋಂದಾಯಿಸಿಕೊಂಡು ಭಾಗಿಯಾಗಿದ್ದರು ಎಂದರು.

ಮುಖ್ಯ ಅತಿಥಿ ಅಳ್ನಾವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಸಿ. ಹಿರೇಮಠ ಕ್ರೀಡಾ ಸಾಧಕರಿಗೆ ಬಹುಮಾನ ನೀಡಿ ಮಾತನಾಡಿದರು.

ಮುಖ್ಯ ಶಿಕ್ಷಕಿ ಶೋಭಾ ನಾಯಕ, ಬಾಳುಗೌಡ ಪಾಟೀಲ, ಸುಜಾತಾ ಜಂಗಮ, ಸತೀಶ ವೀಣಾ, ಸುಧಾ ಜೋಷಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ