ಆ್ಯಪ್ನಗರ

ಪ್ಲಾಸ್ಟಿಕ್‌ಮುಕ್ತ ಮಹಾನಗರಕ್ಕೆ ಪಾಲಿಕೆ ಪಣ

ಹುಬ್ಬಳ್ಳಿ : ಅವಳಿ ನಗರವನ್ನು ಪ್ಲಾಸ್ಟಿಕ್‌ ಮುಕ್ತವನ್ನಾಗಿಸಲು ಮಹಾನಗರ ಪಾಲಿಕೆ ಪಣತೊಟ್ಟಿದೆ. ಇದಕ್ಕಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಹಭಾಗಿತ್ವ ಪಡೆಯಲು ಮುಂದಾಗಿದೆ. ಈ ಸಂಬಂಧ ಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿಗುರುವಾರ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಎನ್ನೆಸ್ಸೆಸ್‌ ಮತ್ತು ಎನ್‌ಸಿಸಿ ಘಟಕಗಳ ಮುಖ್ಯಸ್ಥರ ಸಭೆ ನಡೆಯಿತು.

Vijaya Karnataka 13 Sep 2019, 5:00 am
ಹುಬ್ಬಳ್ಳಿ : ಅವಳಿ ನಗರವನ್ನು ಪ್ಲಾಸ್ಟಿಕ್‌ ಮುಕ್ತವನ್ನಾಗಿಸಲು ಮಹಾನಗರ ಪಾಲಿಕೆ ಪಣತೊಟ್ಟಿದೆ. ಇದಕ್ಕಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಹಭಾಗಿತ್ವ ಪಡೆಯಲು ಮುಂದಾಗಿದೆ. ಈ ಸಂಬಂಧ ಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿಗುರುವಾರ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಎನ್ನೆಸ್ಸೆಸ್‌ ಮತ್ತು ಎನ್‌ಸಿಸಿ ಘಟಕಗಳ ಮುಖ್ಯಸ್ಥರ ಸಭೆ ನಡೆಯಿತು.
Vijaya Karnataka Web policy for a city free of plastic
ಪ್ಲಾಸ್ಟಿಕ್‌ಮುಕ್ತ ಮಹಾನಗರಕ್ಕೆ ಪಾಲಿಕೆ ಪಣ


ಕವಿವಿ ವ್ಯಾಪ್ತಿಯ 52 ಕಾಲೇಜುಗಳ ಎನ್ನೆಸ್ಸೆಸ್‌, ಎನ್‌ಸಿಸಿ ಘಟಕಗಳ ಸಂಯೋಜಕರು ಸಭೆಯಲ್ಲಿಪಾಲ್ಗೊಂಡಿದ್ದರು. ಪ್ಲಾಸ್ಟಿಕ್‌ ಬಳಕೆಯಿಂದಾಗುವ ಅನಾಹುತ, ಪರಿಣಾಮಗಳ ಕುರಿತು ಜನರಲ್ಲಿಅರಿವು ಮೂಡಿಸಲು ಎನ್ನೆಸ್ಸೆಸ್‌, ಎನ್‌ಸಿಸಿ ವಿದ್ಯಾರ್ಥಿಗಳ ನೆರವು ಅಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿಕಾಲೇಜುಗಳು ಸಹಕರಿಸಬೇಕೆಂದು ಘನತ್ಯಾಜ್ಯ ನಿರ್ವಹಣೆ ವಿಭಾಗದ ಪ್ರಭಾರ ಎಕ್ಸಿಕ್ಯುಟಿವ್‌ ಎಂಜಿನಿಯರ್‌ ವಿಜಯಕುಮಾರ್‌ ಮನವಿ ಮಾಡಿದರು.

ಪ್ರತಿ ಶನಿವಾರ ಮತ್ತು ಸೋಮವಾರದಂದು ಆಯಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮೀಪದ ವಾರ್ಡ್‌ಗಳನ್ನು ಹಂಚಿಕೆ ಮಾಡಲಾಗುತ್ತದೆ. ಅವರು, ಆ ವಾರ್ಡ್‌ದಲ್ಲಿಮನೆ ಮನೆ, ಸಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿಸಂಚರಿಸಿ ಜನರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಸೆ.15ರಿಂದ ಅಕ್ಟೋಬರ್‌ 2ರವರೆಗೆ ನಿರಂತರ ಜಾಗೃತಿ ಜಾಥಾ, ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಎಲ್ಲಕಾಲೇಜುಗಳು ಪಾಲಿಕೆ ಜೊತೆ ಕೈ ಜೋಡಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದರು.

ಪಾಲಿಕೆಯ ಪರಿಸರ ಅಭಿಯಂತರ ಟಿ. ಶ್ರೀಧರ, ನಯನಾ ಹಾಗೂ ಕಾಲೇಜುಗಳ ಪ್ರಾಧ್ಯಾಪಕರು ಸಭೆಯಲ್ಲಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ