ಆ್ಯಪ್ನಗರ

ಸುರಕ್ಷಿತ ಚಾಲನೆಗೆ ಆದ್ಯತೆ ಕೊಡಿ

ಧಾರವಾಡ: ಅಜಾಗರೂಕ ಚಾಲನೆಯು ಅಪಾಯದೊಂದಿಗೆ ಜೀವಹಾನಿಗೂ ಕಾರಣವಾಗುತ್ತದೆ. ಯಾವುದೇ ರೀತಿಯ ವಾಹನ ಚಾಲನೆ ಮಾಡುವಾಗ ಸುರಕ್ಷಿತ ಚಾಲನೆ, ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ಕುರಿತು ಪ್ರತಿಯೊಬ್ಬರು ಜಾಗೃತರಾಗಿ, ಇತರರಿಗೂ ಜಾಗೃತಿ ಮೂಡಿಸಬೇಕು ಎಂದು

Vijaya Karnataka 14 Jan 2020, 5:00 am
ಧಾರವಾಡ: ಅಜಾಗರೂಕ ಚಾಲನೆಯು ಅಪಾಯದೊಂದಿಗೆ ಜೀವಹಾನಿಗೂ ಕಾರಣವಾಗುತ್ತದೆ. ಯಾವುದೇ ರೀತಿಯ ವಾಹನ ಚಾಲನೆ ಮಾಡುವಾಗ ಸುರಕ್ಷಿತ ಚಾಲನೆ, ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ಕುರಿತು ಪ್ರತಿಯೊಬ್ಬರು ಜಾಗೃತರಾಗಿ, ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಎಂ.ದೀಪಾ ಹೇಳಿದರು.
Vijaya Karnataka Web prioritize safe driving
ಸುರಕ್ಷಿತ ಚಾಲನೆಗೆ ಆದ್ಯತೆ ಕೊಡಿ


ನಗರದ ವಿದ್ಯಾಗಿರಿಯ ಜೆಎಸ್‌ಎಸ್‌ ಮಹಾವಿದ್ಯಾಲಯದ ಉತ್ಸವ ಸಭಾಭವನದಲ್ಲಿಜಿಲ್ಲಾಡಳಿತ, ಸಾರಿಗೆ, ಪೊಲೀಸ್‌ ಹಾಗೂ ಸಮಿತಿಯ ಎಲ್ಲಪಾಲುದಾರ ಇಲಾಖೆಗಳ ಸಹಯೋಗದಲ್ಲಿಹಮ್ಮಿಕೊಂಡ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ನಾನಾ ಜಾಗೃತಿ ಕಾರ್ಯಕ್ರಮ
ಸಾರಿಗೆ ಇಲಾಖೆ ಬೆಳಗಾವಿ ವಿಭಾಗದ ಜಂಟಿ ಆಯುಕ್ತ ಜೆ. ಪುರುಷೋತ್ತಮ್‌ ಮಾತನಾಡಿ, ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಉದ್ದೇಶ ಚಾಲಕರಲ್ಲಿಮತ್ತು ಸಾರ್ವಜನಿಕರಲ್ಲಿರಸ್ತೆ-ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವುದು. ವಾರದ ಏಳು ದಿನ ವಿವಿಧ ಇಲಾಖೆಗಳ ಸಹಯೋಗದಲ್ಲಿಸಪ್ತಾಹದ ಅಂಗವಾಗಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಸಹಾಯಕ ಪೊಲೀಸ್‌ ಆಯುಕ್ತ ಎಸ್‌.ಎಂ. ಸಂದಿಗವಾಡ ಮಾತನಾಡಿ, ಇಂದಿನ ದಿನಗಳಲ್ಲಿಎರಡು ಚಕ್ರದ ವಾಹನಗಳ ಅಪಘಾತಗಳು ಅಧಿಕವಾಗಿ, ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. ರಸ್ತೆ ಸುರಕ್ಷತೆಯ ಬಗ್ಗೆ ನಾವು ತುಂಬಾ ಜಾಗೃತರಾಗಬೇಕು ಎಂದರು.

ಇದೇ ವೇಳೆ ರಸ್ತೆ ಸುರಕ್ಷತಾ ನಿಯಮ ಪಾಲನೆಗಳ ಜಾಗೃತಿಗಾಗಿ ಸಾರಿಗೆ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ತಯಾರಿಸಿದ್ದ ಕರಪತ್ರ, ಪೋಸ್ಟರ್‌ ಹಾಗೂ ಸ್ಟಿಕರ್‌ಗಳನ್ನು ಮತ್ತು ಸಾಕ್ಷತ್ರ್ಯಚಿತ್ರವನ್ನು ಜಿಲ್ಲಾಧಿಕಾರಿ ಎಂ ದೀಪಾ ಹಾಗೂ ಅಧಿಕಾರಿಗಳು ಬಿಡುಗಡೆ ಮಾಡಿದರು.

ಅಪರ ಸಾರಿಗೆ ಆಯುಕ್ತ ಮಾರುತಿ ಸಾಂಬ್ರಾಣಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಕೃಷ್ಣಮೂರ್ತಿ, ಎಸ್ಪಿ ವರ್ತಿಕಾ ಕಟೀಯಾರ್‌, ಮಹಾವೀರ ಉಪಾಧ್ಯಾಯ, ಬಸಲಿಂಗಪ್ಪ ಇದ್ದರು. ಧಾರವಾಡ ಪೂರ್ವ ವಿಭಾಗದ ಆರ್‌ಟಿಓ ಅಧಿಕಾರಿ ಅಪ್ಪಯ್ಯ ನಲ್ವತ್ವಾಡಮಠ ಸ್ವಾಗತಿಸಿದರು. ಸಿ.ಡಿ. ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್‌.ವಿ. ಪಾಟೀಲ ನಿರೂಪಿಸಿದರು. ಜಿ.ವಿ.ದೀನಮಣಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ